ಬಾದಾಮಿ ಬನಶಂಕರಿ ಮಹಾರಥೋತ್ಸವ ಇಂದು
Team Udayavani, Jan 21, 2019, 2:00 AM IST
ಬಾದಾಮಿ: ಇಲ್ಲಿಯ ಇತಿಹಾಸ ಪ್ರಸಿದ್ಧ ಬಾದಾಮಿ ಬನಶಂಕರಿ ಜಾತ್ರಾ ಮಹೋತ್ಸವ ನಿಮಿತ್ತ ಜ.21ರಂದು ಸಂಜೆ 5 ಗಂಟೆಗೆ ನಾಡಿನ ಲಕ್ಷಾಂತರ ಭಕ್ತ ಸಮೂಹದ ಮಧ್ಯೆ ಮಹಾರಥೋತ್ಸವ ಜರುಗಲಿದೆ. ಜ.25ರಂದು ಕಳಸ ಇಳಿಯುವ ಕಾರ್ಯಕ್ರಮ ಜರುಗಲಿದೆ. ನಿರಂತರ ಒಂದು ತಿಂಗಳ ಕಾಲ ನಡೆಯುವ ಜಾತ್ರೆಗೆ ಉತ್ತರ ಕರ್ನಾಟಕ ಸೇರಿ ಆಂಧ್ರ, ಮಹಾರಾಷ್ಟ್ರ, ತಮಿಳುನಾಡು ರಾಜ್ಯದಿಂದಲೂ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.
ಬಾದಾಮಿಯಿಂದ 5 ಕಿ.ಮೀ. ದೂರದಲ್ಲಿರುವ ಬನಶಂಕರಿ ಕ್ಷೇತ್ರ, ಪ್ರಾಚೀನ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿದೆ. ಕ್ರಿ.ಶ.1019ರ ರಾಷ್ಟ್ರಕೂಟರ ಕಾಲದ ಶಾಸನದಲ್ಲಿ ಇದನ್ನು “ಬನದದೇವಿ’ ಎಂದು ಬಣ್ಣಿಸಲಾಗಿದೆ. ಈ ದೇವಾಲಯ ಇದಕ್ಕೂ ಮೊದಲೇ ಅಸ್ತಿತ್ವದಲ್ಲಿರುವ ಸಾಧ್ಯತೆಯಿದೆ. ಕ್ರಿ.ಶ.1533ರ ವಿಜಯನಗರ ಅಚ್ಯುತರಾಯನ ಶಾಸನದಲ್ಲೂ ದೇವಿಯನ್ನು “ಬನದ ಮಹಾಮಾಯೆ’ಎಂದು ಕರೆಯಲಾಗಿದೆ. ಬನಶಂಕರಿಯಲ್ಲಿ ನಿತ್ಯ ಅನ್ನದಾಸೋಹ ವ್ಯವಸ್ಥೆಯಿದೆ.
ಜಾತ್ರೆಯಲ್ಲಿ 12 ನಾಟಕ ಕಂಪನಿಗಳು ನಾಟಕಪ್ರದರ್ಶನ ನೀಡಲಿದ್ದು, ಅನೇಕ ಸಿನೆಮಾಗಳೂ ಪ್ರದರ್ಶನಗೊಳ್ಳಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !