‘ಪಕ್ಷ ಬಿಟ್ಟು ಬಿಜೆಪಿಗೆ ಹೋದವರು ಮತ್ತೇಕೆ ಬಂದ್ರೀ’?: ನಟಿ ಭಾವನಾಗೆ ಕೈ ಕಾರ್ಯಕರ್ತೆ ತರಾಟೆ
Team Udayavani, Jul 26, 2022, 2:40 PM IST
ಬೆಂಗಳೂರು: ಕಾಂಗ್ರೆಸ್ ಪಕ್ಷದ ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಚಿತ್ರನಟಿ ಭಾವನಾ ಅವರನ್ನು ಕಾಂಗ್ರೆಸ್ ನ ಹಿರಿಯ ಮುಖಂಡರ ಮುಂದೆಯೇ ಕೈ ಕಾರ್ಯಕರ್ತೆಯೊಬ್ಬರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್, ಸಲೀಂ ಅಹಮದ್ ಅವರು ಕುಳಿತಿದ್ದ ವೇದಿಕೆಯತ್ತ ತೆರಳಿದ ನಟಿ ಭಾವನಾ ಅವರನ್ನು ಮಹಿಳಾ ಕಾರ್ಯಕರ್ತೆಯೊಬ್ಬರು ತಡೆಹಿಡಿದು ‘ವೇದಿಕೆಯ ಬಿಟ್ಟು ಬದಿಗೆ ಬನ್ನಿ’ ಎಂದು ಅಡ್ಡಿಪಡಿಸಿದರು.
ನೀವು ಬಿಜೆಪಿಗೆ ಹೋಗಿದ್ದೀರಿ ಮತ್ಯಾಕೆ ಇಲ್ಲಿಗೆ ಬಂದಿದ್ದೀರಿ ಎಂದು ಪ್ರಶ್ನಿಸಿದರು. ಬಳಿಕ ವೇದಿಕೆಯಲ್ಲಿ ಇದ್ದ ನಾಯಕರು ಸಮಾಧಾನ ಪಡಿಸಿದರು. ಆ ಹಿನ್ನೆಲೆಯಲ್ಲಿ ನಟಿ ಭಾವನಾ ಕಾರ್ಯಕರ್ತರು ಕುಳಿತಿದ್ದ ಬದಿಯಲ್ಲೇ ನಿಂತು ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಇದನ್ನೂ ಓದಿ:“ಕೆಜಿಎಫ್ ಚಾಪ್ಟರ್ 2” ಬಗ್ಗೆ ಕುತೂಹಲಕಾರಿ ವಿಚಾರ ಬಿಚ್ಚಿಟ್ಟ ಅಮೀರ್ ಖಾನ್
ಈ ವೇಳೆ ಮಾತನಾಡಿದ ನಟಿ ಭಾವನಾ, ಈ ಹಿಂದೆ ನಾನು ಕಾಂಗ್ರೆಸ್ ನಿಂದ ಬಿಜೆಪಿಗೆ ಹೋಗಿದ್ದೆ. ಅದು ಆತುರದ ನಡೆ ಎಂದು ಅನಿಸಿತು. ಆ ಹಿನ್ನೆಲೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿರುವುದಾಗಿ ಹೇಳಿದರು.
ಬಿಜೆಪಿಗೆ ಹೋದ ನಂತರ ನಾನು ಮಾಡಿದ್ದ ತಪ್ಪು ಅರಿವಿಗೆ ಬಂತು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರ ತರುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್