ಕನಕಗಿರಿಯ ವಿರಾಗಮೂರ್ತಿ ಬಾಹುಬಲಿಗೆ ಮಹಾಮಸ್ತಕಾಭಿಷೇಕ : ಸಾವಿರಾರು ಭಕ್ತರು ಭಾಗಿ


Team Udayavani, May 1, 2022, 8:30 PM IST

ಕನಕಗಿರಿಯ ವಿರಾಗಮೂರ್ತಿ ಬಾಹುಬಲಿಗೆ ಮಹಾಮಸ್ತಕಾಭಿಷೇಕ : ಸಾವಿರಾರು ಭಕ್ತರು ಭಾಗಿ

ಚಾಮರಾಜನಗರ: ಅತಿಶಯ ಕ್ಷೇತ್ರ ಎಂದೇ ಪ್ರಸಿದ್ಧಿಯಾದ ತಾಲೂಕಿನ ಕನಕಗಿರಿಯಲ್ಲಿ ಸ್ಥಾಪಿಸಲಾಗಿರುವ ಭಗವಾನ್ ಬಾಹುಬಲಿ ಸ್ವಾಮಿಗೆ ಅತಿಶಯ ಮಹೋತ್ಸವದ ಅಂಗವಾಗಿ ಎರಡನೇ ಮಹಾ ಮಸ್ತಕಾಭಿಷೇಕವನ್ನು ಭಾನುವಾರ ವಿಜೃಂಭಣೆಯಿಂದ ನೆರವೇರಿಸಲಾಯಿತು.

ತಾಲೂಕಿನ ಮಲೆಯೂರು ಗ್ರಾಮದ ಹೊರ ವಲಯದಲ್ಲಿರುವ ಕನಕಗಿರಿ ಬೆಟ್ಟ ಪ್ರದೇಶದಲ್ಲಿ 18 ಅಡಿ ಎತ್ತರದ ಬಾಹುಬಲಿಯ ಏಕಶಿಲಾ ವಿಗ್ರಹವನ್ನು 2017ರಲ್ಲಿ ಪ್ರತಿಷ್ಠಾಪಿಸಲಾಗಿದೆ. ಆ ಸಂದರ್ಭದಲ್ಲಿ ನಡೆದಿದ್ದ ಮಹಾಮಸ್ತಕಾಭಿಷೇಕ ಬಿಟ್ಟರೆ ಇದು, ಎರಡನೇ ಮಹಾಮಸ್ತಕಾಭಿಷೇಕ.

ಆರು ವರ್ಷಗಳ ನಂತರ ಭಾನುವಾರ ನಡೆದ ಎರಡನೇ ಮಹಾಮಸ್ತಕಾಭಿಷೇಕವನ್ನು ವೀಕ್ಷಿಸಲು ರಾಜ್ಯ ಹಾಗೂ ದೇಶದ ನಾನಾ ಭಾಗಗಳಿಂದ ಸಾವಿರಾರು ಮಂದಿ ನೆರೆದಿದ್ದರು. ಬಿರು ಬಿಸಿಲು ನೆತ್ತಿ ಸುಡುತ್ತಿದ್ದರೂ ಲೆಕ್ಕಿಸದೇ ಭಕ್ತಜನರು ಮಹಾ ಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಮಹಾಮಸ್ತಕಾಭಿಷೇಕ ಮಹೋತ್ಸವದ ಉದ್ಘಾಟನೆಯನ್ನು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರಸ್ವಾಮೀಜಿ ಕಳಸದಲ್ಲಿ ಅಭಿಷೇಕ ಮಾಡುವ ಮೂಲಕ ನೆರವೇರಿಸಿದರು. ಜೈನ ಮುನಿಗಳಾದ ಶ್ರೀ ಅಮೋಘಕೀರ್ತಿಮುನಿಮಹಾರಾಜ್, ಶ್ರೀ ಅಮರಕೀರ್ತಿ ಮುನಿಮಹಾರಾಜ್, ಕನಕಗಿರಿಯ ಶ್ರೀ ಭುವನಕೀರ್ತಿ ಭಟ್ಟಾರಕಸ್ವಾಮೀಜಿ, ಹೊಂಬುಜ ಕ್ಷೇತ್ರದ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಆಜಾನ್ ಗೆ ಪ್ರತಿಯಾಗಿ ದೇವಸ್ಥಾನಗಳಲ್ಲಿ ಬೆಳಗ್ಗೆ 5 ರಿಂದ ಓಂಕಾರ, ಸುಪ್ರಭಾತ : ಮುತಾಲಿಕ್

ಕಳಸದ ಅಭಿಷೇಕ ಮುಗಿದ ನಂತರ ಶುದ್ಧ ಜಲಾಭಿಷೇಕ, ಎಳನೀರು, ಕ್ಷೀರಾಭಿಷೇಕ, ಇಕ್ಷುರಸ, ಸರ್ವ ಔಷಧ, ಕಲ್ಕಚೂರ್ಣ, ಅರಿಶಿನ, ಚತುಷ್ಕೋನ ಕಳಸ, ಶ್ರೀಗಂಧ, ಕೆಂಪು ಚಂದನದ ಅಭಿಷೇಕಗಳು ನಡೆದವು.

ಬಳಿಕ ಪುಷ್ಪವೃಷ್ಟಿ, ಶಾಂತಿಧಾರಾ, ಮಹಾಮಂಗಳಾರತಿ ಹಾಗೂ ಮಹಾಹಾರ ಕಾರ್ಯಕ್ರಮಗಳು ನಡೆದವು. ಈ ಅಭಿಷೇಕದ ಸಂದರ್ಭದಲ್ಲಿ ಬಾಹುಬಲಿ ಮೂರ್ತಿ ತರ ತರಹದ ಬಣ್ಣಗಳ ಮೂಲಕ ಕಂಗೊಳಿಸಿಸಿತು.

ಮಾಜಿ ಸಂಸದ ಆರ್. ಧ್ರುವನಾರಾಯಣ, ಚಾಮುಲ್ ನಿರ್ದೇಶಕ ರವಿಶಂಕರ್, ಮೂರ್ತಿ ವಿಗ್ರಹ ದಾನಿ ವಿಶಾಲೇಂದ್ರಯ್ಯ ಹಾಗೂ ಜೈನ ಸಮುದಾಯದ ಪ್ರಮುಖರು ಹಾಜರಿದ್ದರು.

ಈ ಬಾಹುಬಲಿ ವಿಗ್ರಹದ ದಾನಿಗಳು ಮೈಸೂರಿನ ವಿಶಾಲೇಂದ್ರಯ್ಯ ಕುಟುಂಬ. 18 ಅಡಿಯ ಈ ಏಕಶಿಲಾ ಪ್ರತಿಮೆಯನ್ನು ಬೆಂಗಳೂರು ಬಳಿಯ ಬಿಡದಿಯ ಶಿಲ್ಪಿ ಅಶೋಕ್ ಗುಡಿಗಾರ್ ಕೆತ್ತಿದ್ದಾರೆ. ಈ ವಿಗ್ರಹ ಪ್ರತಿಷ್ಠಾಪನೆಯ ಪರಿಕಲ್ಪನೆ ಕನಕಗಿರಿ ಕ್ಷೇತ್ರದ ಶ್ರೀ ಭುವನಕೀರ್ತಿ ಭಟ್ಟಾರಕಸ್ವಾಮೀಜಿ ಅವರದು.

ಬಾಹುಬಲಿ ಎಲ್ಲವನ್ನೂ ಗೆದ್ದ ಮಹಾ ಪರಾಕ್ರಮಿ : ಶ್ರೀ ಶಿವರಾತ್ರಿ ದೇಶಿಕೆಂದ್ರ ಸ್ವಾಮೀಜಿ :

ಬಾಹುಬಲಿ ಎಲ್ಲವನ್ನೂ ಗೆದ್ದ ಮಹಾ ಪರಾಕ್ರಮಿ. ಹಾಗಿದ್ದರೂ ವಿರಾಗಿಯಾಗಿ ಸರ್ವವನ್ನೂ ತ್ಯಾಗ ಮಾಡಿದವರು. ಲೋಕ ಕಲ್ಯಾಣಕ್ಕಾಗಿ ಕಠಿಣ ತಪಸ್ಸುಗೈದ ಮಹಾತ್ಯಾಗಿ ಎಂದು ಸುತ್ತೂರು ಮಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೆಂದ್ರ ಸ್ವಾಮೀಜಿ ಹೇಳಿದರು.

ತಾಲೂಕಿನ ಮಲೆಯೂರಿನ ಕನಕಗಿರಿಯಲ್ಲಿ ಭಾನುವಾರ ನಡೆದ ಭಗವಾನ್ ಬಾಹುಬಲಿಸ್ವಾಮಿಯವರ ಮಹಾಮಸ್ತಕಾಭಿಷೇಕವನ್ನು ಉದ್ಘಾಟಿಸಿ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು. ತ್ಯಾಗದ ಮೂಲಕ ಬಾಹುಬಲಿ ಸ್ವಾಮಿ ಜಗತ್ತಿಗೆ ನೀಡಿದ ಸಂದೇಶ ಬಹಳ ಮಹತ್ವದ್ದು, ಆ ತ್ಯಾಗ ಜಗತ್ತಿಗೆ ಆದರ್ಶವಾಗಬೇಕು ಎಂದು ಸ್ವಾಮೀಜಿ ಹೇಳಿದರು.

ಮಾಜಿ ಸಂಸದ ಆರ್. ಧ್ರುವನಾರಾಯಣ ಮಾತನಾಡಿ, ಅಹಿಂಸೆ, ಶಾಂತಿ ಮೂಲಕ ಎಲ್ಲವನ್ನೂ ಗೆಲ್ಲಬಹುದು ಎಂಬುದನ್ನು ತೋರಿಸಿಕೊಟ್ಟ ಜೈನ ಧರ್ಮದ ಆಶಯ ಅನನ್ಯವಾದದು ಎಂದು ಹೇಳಿದರು. ಜಗತ್ತಿಗೆ ಬೌದ್ಧ ಹಾಗೂ ಜೈನ ಧರ್ಮಗಳು ಮಾನವನ ಒಳಿತಿಗಾಗಿ ಅಪಾರ ಕೊಡುಗೆಗಳನ್ನು ನೀಡಿವೆ. ಹಾಗೆ ನೋಡಿದರೆ ಯಾವುದೇ ಧರ್ಮ ಮೇಲು, ಕೀಳು ಎಂಬುದನ್ನು ಹೇಳುವುದಿಲ್ಲ. ಅಧರ್ಮವನ್ನು ಬಯಸುವುದಿಲ್ಲ. ಇದೆಲ್ಲವನ್ನೂ ಮನುಷ್ಯನೇ ಸೃಷ್ಟಿಸಿಕೊಂಡಿದ್ದಾನೆ. ಹಾಗಾಗಿ ಧರ್ಮಗಳ ಸಾರವನ್ನು ಅರಿತು ನಡೆದಾಗ ಎಲ್ಲ ಕಡೆ ಉನ್ನತಿ ಸಾಧ್ಯವಿದೆ ಎಂದರು.

ಕನಕಗಿರಿಯ ಅಭಿವೃದ್ಧಿಗೆ ಭುವನಕೀರ್ತಿ ಭಟ್ಟಾರಕಸ್ವಾಮೀಜಿ ಹಗಲಿರುಳು ಶ್ರಮಿಸಿದ್ದಾರೆ. ಅವರ ದೂರದೃಷ್ಟಿ ಫಲವಾಗಿ ಕಳೆದ 25 ವರ್ಷಗಳಲ್ಲಿ ಕನಕಗಿರಿ ಕ್ಷೇತ್ರದ ಉತ್ತಮವಾಗಿ ಅಭಿವೃದ್ಧಿಯಾಗಿದೆ. ತಾವು ಸಂಸದರಾಗಿದ್ದ ವೇಳೆಯಲ್ಲಿ ಈ ಕ್ಷೇತ್ರವನ್ನು ಪ್ರವಾಸಿತಾಣವಾಗಿ ಅಭಿವೃದ್ಧಿ ಪಡಿಸಲು ಅನುದಾನವನ್ನು ಬಿಡುಗಡೆ ಮಾಡಿಸಲಾಗಿತ್ತು ಎಂದು ಹೇಳಿದರು.
ಕನಕಗಿರಿ ಅತಿಶಯ ಕ್ಷೇತ್ರದ ಶ್ರೀ ಭುವನಕೀರ್ತಿ ಭಟ್ಟಾರಕಸ್ವಾಮೀಜಿ , ಅಮೋಘಕೀರ್ತಿಮುನಿಮಹಾರಾಜರು, ಶ್ರೀ ಅಮರಕೀರ್ತಿ ಮುನಿಮಹಾರಾಜರು ಆಶೀರ್ವಚನ ನೀಡಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.