ಪಿಎಫ್ ಐ ನಿಷೇಧ; ರಾಜ್ಯಗಳಿಗೆ ಅಧಿಕಾರ ನೀಡಿದ ಕೇಂದ್ರ: ಆರಗ ಜ್ಞಾನೇಂದ್ರ
Team Udayavani, Sep 28, 2022, 9:32 PM IST
ಬೆಂಗಳೂರು: ಪಿಎಫ್ ಐ ಹಾಗೂ ಅದರ ಇತರ ಸಹವರ್ತಿ ಸಂಸ್ಥೆಗಳನ್ನು, ಐದು ವರ್ಷಗಳ ವರೆಗೆ UAPA ಕಾಯಿದೆ ಅಡಿಯಲ್ಲಿ, ಇಂದು ನಿಷೇಧಿಸಿದ ಕೇಂದ್ರ ಸರಕಾರ, ಅದರ ಅನುಷ್ಠಾನದ ಸಂಪೂರ್ಣ ಅಧಿಕಾರವನ್ನು ರಾಜ್ಯ ಸರಕಾರಗಳಿಗೆ ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಇದನ್ನೂ ಓದಿ:ಮತ್ತೆಂದೂ ತಲೆ ಎತ್ತದಂತೆ ಪಿಎಫ್ಐ ನಿಷೇಧಿಸಬೇಕು: ಯತ್ನಾಳ್
ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿ, ನಿಷೇಧ ನಂತರದ ಪ್ರಕ್ರಿಯೆಗಳನ್ನು, ಅಂದರೆ, ನಿಷೇಧಕ್ಕೆ ಒಳಪಟ್ಟ ಸಂಘಟನೆಯ, ಕಚೇರಿಗಳನ್ನು ಸೀಜ್ ಮಾಡುವುದು, ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಮತ್ತು ಕಾನೂನು ಕ್ರಮ ಕೈಗೊಳ್ಳುವ ಜವಾಬ್ದಾರಿ, ರಾಜ್ಯ ಸರಕಾರಗಳು ನಿರ್ವಹಿಸಲಿವೆ ಎಂದು ಹೇಳಿದ್ದಾರೆ.
ಕೇಂದ್ರದ ನಿರ್ದೇಶನದಂತೆ, ರಾಜ್ಯ ಸರಕಾರ, ಮುಂದಿನ ಪ್ರಕ್ರಿಯೆಗಳ ಸಮರ್ಪಕ ಅನುಷ್ಟಾನಕ್ಕೆ ಸಂಬಂಧಿಸಿದಂತೆ, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ, ಅಧಿಕಾರ ನೀಡಿ, ಸುತ್ತೋಲೆ ಹೊರಡಿಸಿದೆ ಎಂದು ತಿಳಿಸಿದ್ದಾರೆ.