ಬೆಂಗಳೂರು:ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಇನ್ನೋರ್ವ ಬಾಲಕಿ
Team Udayavani, Oct 15, 2017, 3:06 PM IST
ಬೆಂಗಳೂರು: ನಗರ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿದ್ದು, ಇಂದು ಇನ್ನೋರ್ವ ಬಾಲಕಿ ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಘಟನೆ ಸಿ.ವಿ.ರಾಮನ್ ನಗರದಲ್ಲಿ ನಡೆದಿದೆ.
ಕೃಷ್ಣಪ್ಪ ಗಾರ್ಡನ್ ಬಳಿ 16 ವರ್ಷದ ನರಸಮ್ಮ ಎಂಬ ಬಾಲಕಿ 7 ಗಂಟೆ ಸುಮಾರಿಗೆ ಶೌಚಾಲಯಕ್ಕೆಂದು ತೆರಳಿದ್ದ ವೇಲೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ ಎಂದು ತಿಳಿದು ಬಂದಿದೆ. ಶವ ಕೂಡಲೇ ಪತ್ತೆಯಾಗಿದ್ದು, ಕೊಚ್ಚಿ ಹೋದಲ್ಲಿದ್ದ 400 ಮೀಟರ್ ದೂರದಲ್ಲಿ ಶವವನ್ನು ಮೇಲಕ್ಕೆತ್ತಲಾಗಿದೆ.
ನರಸಮ್ಮ ಕಲಬುರಗಿ ಮೂಲದ ವೆಂಕಪ್ಪ ಮತ್ತು ಕಾಶಿ ದಂಪತಿಯ ಪುತ್ರಿ ಎಂದು ತಿಳಿದು ಬಂದಿದ್ದು, 15 ದಿನಗಳಲ್ಲಿ ಈಕೆಗೆ ಮದುವೆ ನಡೆಸಲು ಸಿದ್ದತೆಗಳು ನಡೆದಿದ್ದವು ಎಂದು ತಿಳಿದು ಬಂದಿದೆ.
ತಾಯಿಯ ಶವ ಪತ್ತೆ, ಮಗಳ ಶವಕ್ಕಾಗಿ ಮುಂದುವರಿದ ಶೋಧ
ಶುಕ್ರವಾರ ಸಂಜೆ ಭಾರೀ ಮಳೆಯ ಬಳಿಕ ಕುರುಬರಹಳ್ಳಿ ರಾಜಕಾಲುವೆ ಉಕ್ಕಿ ಹರಿದ ಪರಿಣಾಮ ಕೊಚ್ಚಿ ಹೋಗಿದ್ದ ಪುಷ್ಪ ಶವ ಪತ್ತೆಯಾಗಿದ್ದು, ಮಗಳಾದ ನಿಂಗಮ್ಮ ಶವಕ್ಕಾಗಿ ಶೋಧ ನಡೆಸಲಾಗುತ್ತಿದೆ.
ಕುಂಬಳಗೋಡು ರಾಜ ಕಾಲುವೆ ಬಳಿ ಪುಷ್ಪ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಮನೆಯವರಿಗೆ ಹಸ್ತಾಂತರಿಸಲಾಗಿದೆ. ಅದೇ ಸ್ಥಳದಲ್ಲಿ ನಿಂಗವ್ವಳ ಮೃತದೇಹಕ್ಕಾಗಿ ಎನ್ಡಿಆರ್ಎಫ್ , ಬಿಬಿಎಂಪಿ ಸಿಬ್ಬಂದಿ ಅಗ್ನಿಶಾಮಕ ಸಿಬ್ಬಂದಿಗಳು ಶೋಧ ಮುಂದುವರಿಸಿದ್ದಾರೆ. ಮನೆಯವರ ರೋಧನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ