ಇಂದಿನಿಂದ ಅಂತಾರಾಷ್ಟ್ರೀಯ ಚಿತ್ರೋತ್ಸವ


Team Udayavani, Feb 21, 2019, 1:39 AM IST

6.jpg

ಬೆಂಗಳೂರು: ಹನ್ನೊಂದನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೊತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಸಂಜೆ 6 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆಯಲಿ ರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡುವರು. ಹಿರಿಯ ನಟ ಅನಂತನಾಗ್‌ ಹಾಗೂ ಬಾಲಿವುಡ್‌ ನಿರ್ಮಾಪಕ, ನಿರ್ದೇಶಕ ರಾಹುಲ್‌ ರವೈಲ್‌ ಅತಿಥಿಗಳಾಗಿ ಭಾಗವಹಿಸುವರು.

ಫೆ.21ರಿಂದ 28ರವರೆಗೆ ನಡೆಯುವ ಉತ್ಸವದಲ್ಲಿ ಸುಮಾರು 60 ರಾಷ್ಟ್ರಗಳ 225
ಚಲನಚಿತ್ರಗಳು ಪ್ರದರ್ಶನವಾಗಲಿವೆ. “ವಲ್ಡ…ì ಸಿನಿಮಾ’, “ಏಷ್ಯಾ ಸಿನಿಮಾ’, “ಭಾರತೀಯ
ಸಿನಿಮಾ’ ಹಾಗೂ “ಕನ್ನಡ ಸಿನಿಮಾ’ ಎಂಬ ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಫೆ.28ರಂದು
ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭ ನಡೆಯಲಿದ್ದು, ರಾಜ್ಯಪಾಲ ವಜೂಭಾಯ್‌ ವಾಲಾ ಚಿತ್ರೋತ್ಸವದ ವಿಜೇತ ಚಿತ್ರಗಳಿಗೆ ಪ್ರಶಸ್ತಿ
ಪ್ರದಾನ ಮಾಡಲಿದ್ದಾರೆ.

ಚಲನಚಿತ್ರೋತ್ಸವದ ಆರಂಭದ ಚಿತ್ರವಾಗಿ ಇರಾನ್‌ ದೇಶದ “ಬಾಂಬ್‌ ಎ ಲವ್‌ ಸ್ಟೋರಿ’ ಚಿತ್ರ ಪ್ರದರ್ಶನವಾದರೆ, ಇರಾನ್‌ನ ಮತ್ತೂಂದು ಚಿತ್ರ “ಟೇಲ್‌ ಆಫ್ ದಿ ಸಿ’ ಉತ್ಸವದಲ್ಲಿ ಪ್ರದರ್ಶನಗೊಳ್ಳುವ ಕೊನೆಯ ಚಿತ್ರವಾಗಿದೆ.

ಕಳೆದ ಡಿಸೆಂಬರ್‌ನಲ್ಲಿ ನಿಧನರಾದ ನಟ ಅಂಬರೀಶ್‌, ಹಿರಿಯ ನಟ ಲೋಕನಾಥ್‌, ಎಂ.ಎನ್‌ ವ್ಯಾಸರಾವ್‌ ಹಾಗೂ ಬಂಗಾಳಿ ಚಿತ್ರ ನಿರ್ದೇಶಕ ಮೃಣಾಲ್‌ ಸೇನ್‌ ಅವರ ಸ್ಮರಣಾರ್ಥ ಅವರ ಚಿತ್ರಗಳನ್ನು ಉತ್ಸವದಲ್ಲಿ ಪ್ರದರ್ಶಿಸಲಾಗುತ್ತಿದೆ. ಜತೆಗೆ, ಇತ್ತೀಚೆಗೆ ಲಿಂಗೈಕ್ಯರಾದ ತುಮಕೂರಿನ ಸಿದಟಛಿಗಂಗಾ ಮಠದ ಶಿವಕುಮಾರ ಸ್ವಾಮಿಜಿ, ಸಾವಯವ ಕೃಷಿ ತಜ್ಞ ನಾರಾಯಣ ರೆಡ್ಡಿ ಅವರ ಕುರಿತ ಕಿರುಚಿತ್ರಗಳು, ಪ್ರಕೃತಿ ವಿಕೋಪ ಕುರಿತ ಸಾಕ್ಷ  ಚಿತ್ರಗಳು ಪ್ರದರ್ಶನವಾಗಲಿವೆ. ಇದಲ್ಲದೆ, ಗಾಂಧಿ-150 ಶೀರ್ಷಿಕೆ ಅಡಿಯಲ್ಲಿ ಗಾಂಧೀಜಿ ವಿಚಾರಗಳಿಗೆ ಸಂಬಂಧಿಸಿದ ನಾಲ್ಕು ವಿಶೇಷ ಚಿತ್ರಗಳೂ
ಪ್ರದರ್ಶನ ಕಾಣಲಿವೆ.

“ಏಷ್ಯಾ ಸಿನಿಮಾ’ ವಿಭಾಗದಲ್ಲಿ 15 ಚಿತ್ರಗಳು ನಾಮ ನಿರ್ದೇಶನವಾಗಿದ್ದು, ಕನ್ನಡದಿಂದ ಪಿ.ಶೇಷಾದ್ರಿ ನಿರ್ದೇಶನದ “ಮೂಕಜ್ಜಿಯ ಕನಸುಗಳು’ ಚಿತ್ರ ಆಯ್ಕೆಯಾಗಿದೆ. ಭಾರತೀಯ ಸಿನಿಮಾ ವಿಭಾಗ ದಲ್ಲಿ ದಯಾಳ್‌ ಪದ್ಮನಾಭನ್‌ ನಿರ್ದೇಶನದ “ಆ ಕರಾಳ ರಾತ್ರಿ’, ಚಂಪಾ ಶೆಟ್ಟಿ ನಿರ್ದೇಶನದ “ಅಮ್ಮಚ್ಚಿಯೆಂಬ ನೆನಪು’ ನಾಮನಿರ್ದೇಶನಗೊಂಡಿವೆ.

“ಕನ್ನಡ ಸಿನಿಮಾ ವಿಭಾಗ’ಕ್ಕೆ 13 ಚಿತ್ರಗಳು ಆಯ್ಕೆಯಾಗಿದ್ದು, “ಅನಂತು ವರ್ಸಸ್‌ ನುಸ್ರತ್‌’, “ಅನುತ್ತರ’, “ಅಟ್ಟಯ್ಯ ವರ್ಸಸ್‌ ಹಂದಿ ಕಾಯೋಳು’, “ಬೆಳಕಿನ ಕನ್ನಡಿ’, “ಕಾನೂರಾಯಾಣ’, “ನಾತಿಚರಮಿ’, “ನೀರು’, “ಮೂಕಜ್ಜಿಯ ಕನಸುಗಳು’, “ಒಂದಲ್ಲಾ ಎರಡಲ್ಲಾ’, “ರಾಮನ ಸವಾರಿ’, “ಸಮಾನತೆಯ ಕಡೆಗೆ’, “ಸ್ಮಶಾನ ಮೌನ’, “ಸಾವಿತ್ರಿ ಬಾಯಿ ಫ‌ುಲೆ’ ಮತ್ತು “ವಿಶ್ವಮಾನವ’ ಚಿತ್ರಗಳು
ಇಲ್ಲಿ ಪ್ರದರ್ಶನಗೊಳ್ಳಲಿವೆ.

ಅಂಬಿ ಚಿತ್ರಗಳ ಪ್ರದರ್ಶನ ಈ ಬಾರಿಯ ಚಲನ ಚಿತ್ರೋತ್ಸವದಲ್ಲಿ ರೆಬಲ್‌ಸ್ಟಾರ್‌ ಅಂಬರೀಶ್‌ ಸಿನಿಮಾ
ಜೀವನದ ಮಾಸ್ಟರ್‌ಪೀಸ್‌ ಚಿತ್ರಗಳಾದ “ನಾಗರಹಾವು’, “ಏಳು ಸುತ್ತಿನ ಕೋಟೆ’, “ಅಂತ’, “ಪಡುವಾರಳ್ಳಿ ಪಾಂಡವರು’, “ಶುಭಮಂಗಳ’, “ರಂಗನಾಯಕಿ’ ಚಿತ್ರಗಳು ಪ್ರದರ್ಶನಗೊಳ್ಳಲಿವೆ.
ಪ್ರದರ್ಶನ ಸ್ಥಳ ರಾಜಾಜಿನಗರದ ಓರಾಯನ್‌ ಮಾಲನ ಪಿವಿಆರ್‌ ಸಿನಿಮಾಸ್‌ನ ಹನ್ನೊಂದು
ಸ್ಕ್ರೀನ್‌ಗಳಲ್ಲಿ ಹಾಗೂ ಚಾಮರಾಪೇಟೆಯ ಕಲಾವಿದರ ಸಂಘದ ಒಂದು ಸ್ಕ್ರೀನ್‌ನಲ್ಲಿ
ಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಪಾಸ್‌ ಶುಲ್ಕ 800 ರೂ. ಕಳೆದ ಬಾರಿಗಿಂತ, ಈ ಬಾರಿಯ ಚಲನ ಚಿತ್ರೋತ್ಸವದ ಪ್ರವೇಶ ಶುಲ್ಕ ಕಡಿಮೆ ಆಗಿದ್ದು, ಎಂಟು ದಿನದ ಪಾಸ್‌ 800 ರೂ.ಗೆ ಲಭ್ಯವಿದೆ. ವಿದ್ಯಾರ್ಥಿಗಳು, ಹಿರಿಯ ನಾಗರಿಕರಿಗೆ, ಚಿತ್ರೋದ್ಯಮದ ಸದಸ್ಯರಿಗೆ 400 ರೂ. ನಿಗದಿಪಡಿಸಲಾಗಿದೆ.

ಟಾಪ್ ನ್ಯೂಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.