ಐಟಿ ಅಧಿಕಾರಿ ಪುತ್ರನ ಕಿಡ್ನಾಪ್, 50 ಲಕ್ಷ ರೂಪಾಯಿಗೆ ಬೇಡಿಕೆ!
Team Udayavani, Sep 14, 2017, 1:19 PM IST
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಯೊಬ್ಬರ ಪುತ್ರನನ್ನು ಅಪಹರಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಐಟಿ ಅಧಿಕಾರಿ ಕೆಂಗೇರಿ ಉಳ್ಳಾಲದಲ್ಲಿರುವ ನಿರಂಜನ್ ಎಂಬವರ ಪುತ್ರ (19) ಶರತ್ ನನ್ನು 2 ದಿನಗಳ ಹಿಂದೆ ಅಪಹರಿಸಲಾಗಿತ್ತು. ಶರತ್ ನನ್ನು ಬಿಡುಗಡೆ ಮಾಡಬೇಕಿದ್ದರೆ 50 ಲಕ್ಷ ರೂಪಾಯಿ ಹಣ ಕೊಡಬೇಕೆಂದು ಬೆದರಿಕೆ ಹಾಕಿ ಶರತ್ ತಂದೆ, ತಾಯಿ ಹಾಗೂ ಸೋದರೆ ವಾಟ್ಸಪ್ ಗೆ ಸಂದೇಶ ಕಳುಹಿಸಿರುವುದಾಗಿ ವರದಿ ವಿವರಿಸಿದೆ.
2ನೇ ವರ್ಷದ ಡಿಪ್ಲೋಮಾ ವಿದ್ಯಾರ್ಥಿ ಶರತ್ ಅಪಹರಣದ ಘಟನೆ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಪೊಲೀಸರು ಅಪಹರಣಕಾರರ ಜಾಡು ಪತ್ತೆ ಹಚ್ಚಲು ಕಾರ್ಯಪ್ರವೃತ್ತರಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.