ಛಾವಣಿ ಕುಸಿತ; ಇಬ್ಬರು ಕಾರ್ಮಿಕರ ಸಾವು, ಮುಂದುವರಿದ ರಕ್ಷಣಾ ಕಾರ್ಯ
Team Udayavani, Dec 13, 2018, 3:32 PM IST
ಬೆಂಗಳೂರು: ಲಾಜಿಸ್ಟಿಕ್ಸ್ ಕಂಪನಿಯ ಗೋದಾಮಿನಲ್ಲಿ ಕುಸಿದು ಬಿದ್ದ ರಾಕ್ ನಡಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಕೊನೆಯುಸಿರೆಳೆದಿದ್ದು, ಇನ್ನೊಬ್ಬ ಕಾರ್ಮಿಕನ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಗರದ ಕಾಡುಗೋಡಿಯ ಶೀಗೆಹಳ್ಳಿ ಗೇಟ್ ಸಮೀಪದ ಲಾಜಿಸ್ಟಿಕ್ ಕಂಪನಿಯ ಗೋದಾಮಿನಲ್ಲಿ ಬಟ್ಟೆ, ಆಹಾರವಸ್ತುಗಳನ್ನು ಇಟ್ಟಿದ್ದ ಕಬ್ಬಿಣದ ಛಾವಣಿ ಕುಸಿದು ಬಿದ್ದ ಪರಿಣಾಮ, ಕಾರ್ಮಿಕರು ಅದರಡಿ ಸಿಲುಕಿದ್ದರು.
ಫಾರೂಕ್ ಹಾಗೂ ಸುಭಾಷ್ ಎಂಬ ಇಬ್ಬರು ಕಾರ್ಮಿಕರ ಮೃತದೇಹವನ್ನು ಹೊರತೆಗೆಯಲಾಗಿದೆ. ಛಾವಣಿ ಅಡಿ ಸಿಲುಕಿರುವ ಮತ್ತೊಬ್ಬ ಕಾರ್ಮಿಕ ಜ್ಞಾನ ದರ್ಶನ್ ರಕ್ಷಣೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹನ ಪಡುತ್ತಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ, ಎನ್ ಡಿಆರ್ ಎಫ್ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿದ್ದರು. ಆದರೂ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…