ಪ್ರಧಾನಿ ಮೋದಿ ಬೆಂಗಳೂರು ಭೇಟಿ: ಶಾಲೆ, ಕಾಲೇಜುಗಳಿಗೆ ರಜೆ: ಪರೀಕ್ಷೆ ಮುಂದೂಡಿಕೆ
Team Udayavani, Jun 20, 2022, 12:07 AM IST
ಬೆಂಗಳೂರು: ಪ್ರಧಾನಿ ಸಂಚರಿಸುವ ಮಾರ್ಗ, ಭಾಗವಹಿಸುವ ಕಾರ್ಯಕ್ರಮಗಳ ಸ್ಥಳ ಹಾಗೂ ಸುತ್ತಮುತ್ತಲಿನ ಕಾಲೇಜು, ವಿಶ್ವವಿದ್ಯಾನಿಲಯಗಳಿಗೆ ಸರಕಾರ ರಜೆ ಘೋಷಿಸಿದೆ.
ಪ್ರಧಾನಿ ಪ್ರಯಾಣಿಸುವ ಮಾರ್ಗದಲ್ಲಿ ಸಂಚಾರ ದಟ್ಟಣೆಯಾಗುವುದನ್ನು ತಡೆಯಲು ಹಾಗೂ ಸುರಕ್ಷಾ ಕ್ರಮಗಳನ್ನು ಕಾಯ್ದುಕೊಳ್ಳುವ ದೃಷ್ಟಿಯಿಂದ ಶಿಕ್ಷಣ ಇಲಾಖೆಯು ಪೊಲೀಸ್ ಇಲಾಖೆ ಸೂಚನೆಯಂತೆ ಪ್ರಧಾನಿ ಸಂಚರಿಸುವ ಐಐಎಸ್ಸಿ, ಗೊರಗುಂಟೆ ಪಾಳ್ಯ, ಸಿಎಂಟಿಐ, ಹೊರ ವರ್ತುಲ ರಸ್ತೆ, ಡಾ ರಾಜ್ಕುಮಾರ್ ಸ್ಟುಡಿಯೋ, ಲಗ್ಗೆರೆ, ನಾಯಂಡಹಳ್ಳಿ, ಮೈಸೂರು ರಸ್ತೆ, ಆರ್ವಿ ಕಾಲೇಜು, ನಾಗರಭಾವಿ, ಸುಮನಹಳ್ಳಿ ಸೇತುವೆ, ಎಂಸಿಐ ಜಂಕ್ಷನ್, ಗೋವರ್ಧನ್ ಥಿಯೇಟರ್, ಯಶವಂತಪುರ ಮತ್ತು ಜಕ್ಕೂರು ಏರೋಡ್ರಮ್ ಸುತ್ತಮುತ್ತಲಿನಲ್ಲಿ ರಜೆ ನೀಡಿದೆ.
ಪರೀಕ್ಷೆ ಮುಂದೂಡಿಕೆ
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು, ಪ್ರಧಾನಿ ಸಂಚರಿಸುವ ಮಾರ್ಗಗಳು ಮಾತ್ರವಲ್ಲದೆ ಬೆಂಗಳೂರಿನ ತನ್ನ ವ್ಯಾಪ್ತಿಯ ಎಲ್ಲ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ನರ್ಸಿಂಗ್ ಕಾಲೇಜುಗಳಿಗೆ ರಜೆ ನೀಡಿದೆ.
ಸೋಮವಾರ ನಿಗದಿಯಾಗಿದ್ದ ವಿವಿಧ ಪರೀಕ್ಷೆಗಳನ್ನು ಮುಂದೂಡಿದ್ದು, ಶೀಘ್ರ ಪರಿಷ್ಕೃತ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದೆ.
ಬೆಂಗಳೂರು ವಿಶ್ವವಿದ್ಯಾನಿಲಯ ಕೂಡ ತನ್ನ ಕ್ಯಾಂಪಸ್ನಲ್ಲಿ ಎಲ್ಲ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಹಾಗೂ ವಿವಿಯ ಎಲ್ಲ ಬೋಧಕ, ಬೋಧಕೇತರ ಸಿಬಂದಿಗೂ ರಜೆ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?