ನಿಯಮ ಮೀರಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಸೂಚನೆ  :  ಸಚಿವ ಡಾ. ನಾರಾಯಣಗೌಡ.


Team Udayavani, Jul 15, 2021, 9:59 PM IST

Banglore News : Narayana Gowda

ಬೆಂಗಳೂರು :  ಜಕ್ಕೂರು ಏರೋ ಡ್ರಮ್ ನ 5km ವ್ಯಾಪ್ತಿಯಲ್ಲಿ ನಿಯಮ ಮೀರಿ 45 ಮೀಟರ್ ಗಿಂತಲೂ ಎತ್ತರ ಕಟ್ಟಿರುವ ಕಟ್ಟಡಗಳನ್ನು ತಕ್ಷಣವೆ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ, ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ‌. ನಾರಾಯಣಗೌಡ ಆದೇಶಿಸಿದರು.

ವಿಕಾಸ ಸೌಧದಲ್ಲಿ ಇಂದು ನಡೆದ ಸಭೆಯಲ್ಲಿ, ಜಕ್ಕೂರು ಏರೋಡ್ರಮ್ ನ 5km ವ್ಯಾಪ್ತಿಯಲ್ಲಿ, 45 ಮೀಟರ್ ಗಿಂತ ಎತ್ತರದ ಕಟ್ಟಡ ಕಟ್ಟುವಂತಿಲ್ಲ. ಆದಾಗ್ಯೂ ಡಿಜಿಸಿಎ ನಿಯಮ ಮೀರಿ, ಪರವಾನಿಗೆ ಇಲ್ಲದೆ ಕಟ್ಟಡಗಳನ್ನು ಕಟ್ಟಿದ್ದಾರೆ. ಸಚಿವರ ಸೂಚನೆ ಮೇರೆಗೆ ಸರ್ವೆ ನಡೆಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಪ್ರಾಥಮಿಕ ಸಮೀಕ್ಷೆಯಲ್ಲಿ 15 ಕಟ್ಟಡಗಳು ನಿಯಮ ಉಲ್ಲಂಘಿಸಿ 45 ಮೀಟರ್ ಗಿಂತ ಹೆಚ್ಚು ಎತ್ತರದ ಕಟ್ಟಡಗಳನ್ನು ನಿರ್ಮಿಸಿರುವುದು ಪತ್ತೆ ಹಚ್ಚಲಾಗಿದೆ. ಆದ್ದರಿಂದ ಅಕ್ರಮ ಕಟ್ಟಡಗಳನ್ನು ತಕ್ಷಣವೆ ತೆರವು ಮಾಡಬೇಕು. ನಿಯಮ ಮೀರಿ 5km ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಿಸಿರುವ ಪತ್ತೆ ಹಚ್ಚಲು ಡ್ರೋಣ್ ಸರ್ವೆ ನಡೆಸಿ 15 ದಿನಗಳಲ್ಲಿ  ವರದಿ ನೀಡುವಂತೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಇಲಾಖೆ ಅಧಿಕಾರಿಗಳಿಗೆ ಜಂಟಿ ಸರ್ವೆ ನಡೆಸುವಂತೆ  ಸಚಿವರು ಸೂಚಿಸಿದರು. ಕೆಲವರು ಎನ್ ಓ ಸಿ ಪಡೆಯದೆ ಕಟ್ಟಡ ನಿರ್ಮಿಸಿದ್ದು, ಮತ್ತೆ ಕೆಲವರು ಎನ್ ಓ ಸಿ ಪಡೆದರೂ ಅನುಮೋದಿತ ಎತ್ತರದ ಮಿತಿ ಉಲ್ಲಂಘಿಸಿದ್ದಾರೆ. ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನಡೆಸಿದ ಸರ್ವೆಯಲ್ಲಿ 11 ಕಟ್ಟಡಗಳು ಹಾಗೂ ವೈಮಾನಿಕ ತರಬೇತಿ ಶಾಲೆಯಿಂದ ನಡೆಸಿದ ಸರ್ವೆಯಲ್ಲಿ 4 ಕಟ್ಟಡಗಳು ನಿಯಮ ಉಲ್ಲಂಘಿಸಿದ್ದು ಪತ್ತೆಯಾಗಿದೆ. ಕೆಲವರು ಸರ್ವೆ ನಡೆಸಲು ಅಸಹಕಾರ ತೋರಿದ್ದಾರೆ. ಹೀಗಾಗಿ ಮತ್ತೊಮ್ಮೆ ಸರ್ವೆ ನಡೆಸಲು ಸೂಚನೆ ನೀಡಿದರು‌.

ಬಾಡಿಗೆ ಬಾಕಿ ನೀಡದ ಕಂಪೆನಿ ಆಸ್ತಿ ಜಪ್ತಿ

ಲ್ಯಾಂಡಿಂಗ್ ಹಾಗೂ ಪಾರ್ಕಿಂಗ್ ಬಾಡಿಗೆ ಬಾಕಿ ನೀಡದ ಕಂಪೆನಿಗಳ ಆಸ್ತಿಯನ್ನು ಸೀಜ್ ಮಾಡಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ಎಲ್ಲ ಕಂಪೆನಿಗಳಿಂದ ಸುಮಾರು ರೂ.5 ಕೋಟಿ ಬಾಡಿಗೆ ಹಣ ಬಾಕಿ ಇದೆ. ಬಾಕಿ ಹಣ ಪಾವತಿಸಲು ನೀಡಿರುವ ಕೊನೆಯ ನೋಟಿಸ್ ನ ಅವಧಿ ಮುಗಿದಿದೆ. ಕೆಲವು ಕಂಪೆನಿಗಳು ಸ್ವಲ್ಪ ಪ್ರಮಾಣದಲ್ಲಿ ಬಾಕಿ ಪಾವತಿಸಿದ್ದಾರೆ‌. ಎಲ್ಲ ಕಂಪೆನಿಗಳು ಹಣ ಪಾವತಿಸಬೇಕು. ಅದಕ್ಕಾಗಿ ಕಂಪೆನಿಗಳ ಮುಖ್ಯಸ್ಥರ ಜೊತೆ ಮಾತನಾಡುವಂತೆ ಸಚಿವರು ಸೂಚಿಸಿದರು.

ಆಗಸ್ಟ್ 20 ರಿಂದ ವೈಮಾನಿಕ‌ ತರಬೇತಿ ಶಾಲೆ ಆರಂಭ

ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತವಾಗಿದ್ದ ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆಗಸ್ಟ್ 20 ರಿಂದ ಆರಂಭಿಸಲಾಗುವುದು. ಮುಖ್ಯ ಬೋಧಕರ ನೇಮಕವಾಗಿದ್ದು, ಸಹಾಯಕ ಬೋಧಕರ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಶ್ರೀಘ್ರದಲ್ಲಿ ಎಲ್ಲ ಪ್ರಕ್ರಿಯೆ ಮುಗಿಸಿ, ಮುಖ್ಯಮಂತ್ರಿಗಳಿಂದ ಚಾಲನೆ ಕೊಡಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಡಾ. ಗೋಪಾಲಕೃಷ್ಣ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.