‘ ಬಂಜಾರ ವಸ್ತ್ರ ಸಂಸ್ಕೃತಿ’ ಉಡುಪು ಬಿಡುಗಡೆಗೊಳಿಸಿದ ಬಿ.ಎಸ್. ಯಡಿಯೂರಪ್ಪ
Team Udayavani, Feb 14, 2021, 5:57 PM IST
ದಾವಣಗೆರೆ: ಲಂಬಾಣಿ ಸಮುದಾಯದ ಸಾಂಪ್ರದಾಯಿಕ ಉಡುಗೆಗೆ ಆಧುನಿಕ ಸ್ಪರ್ಷ ನೀಡಿ ವಿಶಿಷ್ಟವಾಗಿ ತಯಾರಿಸಿದ ‘ ಬಂಜಾರ ವಸ್ತ್ರ ಸಂಸ್ಕೃತಿ’ ಉಡುಪುಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಡುಗಡೆಗೊಳಿಸಿದರು.
ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದ ಭಾಯಾಗಡ್ ದಲ್ಲಿ ರವಿವಾರ ನಡೆದ ಸಂತ ಸೇವಾಲಾಲ್ ಅವರ 282ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಈ ಉಡುಪುಗಳನ್ನು ಬಿಡುಗಡೆಗೊಳಿಸಿದರು.
ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿ ಪಡಿಸಿದ ವಸ್ತ್ರ ವಿನ್ಯಾಸ ಇದಾಗಿದೆ. ಸಾಮಾನ್ಯವಾಗಿ ಲಂಬಾಣಿ ಉಡುಗೆ ಬಹು ಆಕರ್ಷಣೀಯವಾಗಿದ್ದರೂ ಹೆಚ್ಚು ಭಾರವಿರುವ ಕಾರಣ ದಿಂದ ಮಾರುಕಟ್ಟೆಯಲ್ಲಿ ಹಿನ್ನಡೆಯಾಗಿತ್ತು. ಈಗ ಈ ಉಡುಗೆಯ ಭಾರ ಕಡಿಮೆ ಮಾಡಿರುವುದು ವಿಶೇಷವಾಗಿದೆ. ಟೆಕ್ಸ್ ಟೈಲ್ ನಲ್ಲಿ ಉಡುಪು ಸಿದ್ಧಪಡಿಸಿ ಅವುಗಳಿಗೆ ಬಂಜಾರ ಮಹಿಳೆಯರ ಕೈ ಕಸೂತಿಯಲ್ಲಿ ಕಲೆ ಅರಳಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದೆ.
ಇದನ್ನೂ ಓದಿ:ಇಂದು ಕೃಷ್ಣ-ಮಿಲನಾ ಮದುವೆ: ಪ್ರೇಮಿಗಳ ದಿನದಂದು ಹಸೆಮಣೆಗೆ
ದೇಶ, ವಿದೇಶಗಳಿಗೂ ಈ ಉಡುಪುಗಳನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಅಮೇಜಾನ್ ನಂತಹ ಆನ್ ಲೈನ್ ಮಾರುಕಟ್ಟೆಯಲ್ಲಿಯೂ ಈ ಉಡುಗೆಗಳನ್ನು ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ