ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆಗೆ ಅವಕಾಶ: ಅಭಿನಂದನೆ
Team Udayavani, Sep 15, 2019, 3:00 AM IST
ಬೆಂಗಳೂರು: ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆಗೆ ಅವಕಾಶ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಚಿವ ಸಿ.ಟಿ.ರವಿ ಅಭಿನಂದನೆ ಸಲ್ಲಿಸಿದ್ದಾರೆ.ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣಾ’ದಲ್ಲಿ ಶನಿವಾರ ಪ್ರತಿಕ್ರಿಯಿಸಿದ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆಗೆ ಅವಕಾಶ ನೀಡಲು ಒಪ್ಪಿದ್ದಾರೆ.
ನಮ್ಮ ಕೂಗಿಗೆ ಪೂರಕವಾಗಿ ಸ್ಪಂದಿಸಿರುವ ಸಚಿವರಿಗೆ ಅಭಿನಂದನೆ ಸಲ್ಲಿಸಲಾಗುವುದೆಂದರು. ಯಾವುದೇ ಪ್ರಾದೇಶಿಕ ಭಾಷೆಗೆ ಅಡ್ಡಿಯಾಗುವ ನಿಲುವನ್ನು ಬಿಜೆಪಿ ತೆಗೆದುಕೊಳ್ಳುವುದಿಲ್ಲ. ಆರ್ಎಸ್ಎಸ್ ಸಹ ಮಾತೃ ಭಾಷೆಗೆ ಒತ್ತು ನೀಡಿದೆ. ದೇಶದ ಪ್ರಾದೇಶಿಕ ಭಾಷೆಗಳನ್ನು ಅರ್ಥ ಮಾಡಿಕೊಳ್ಳುವುದು ಸುಲಭ. ಕೆಲವರು ಭಾಷೆ ಭಾಷೆಗಳ ನಡುವೆ ಸಂಘರ್ಷ ಸೃಷ್ಟಿಸುತ್ತಿದ್ದಾರೆ. ಬಿಜೆಪಿ ದೇಶದ ಎಲ್ಲಾ ಭಾಷೆಗಳಿಗೂ ಸಮಾನ ಗೌರವ ನೀಡುತ್ತದೆ ಎಂದು ಹೇಳಿದರು.
ಯುಪಿಎಸ್ಸಿ ಪರೀಕ್ಷೆಯಲ್ಲೂ ನಮ್ಮ ಕನ್ನಡ ಭಾಷೆಗೆ ಮಾನ್ಯತೆ ಇಲ್ಲ. ಕೇಂದ್ರ ಸರ್ಕಾರದ ಈ ನಡವಳಿಕೆಯಿಂದ ಕನ್ನಡಕ್ಕೆ ಅತ್ಯಂತ ಅನ್ಯಾಯವಾಗಿದೆ. ಇದರ ಬಗ್ಗೆ ಹೋರಾಟ ಮಾಡಬೇಕು. ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ, ಸಹಕಾರ ಇದೆ.
-ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…