ವಿರೋಧಿಸುವವರ ಸಭೆ ಕರೆಯಲಿ: ಬರಗೂರು ರಾಮಚಂದ್ರಪ್ಪ
Team Udayavani, Jun 4, 2022, 11:56 PM IST
ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ರೋಹಿತ್ ಚಕ್ರತೀರ್ಥ ಸಮಿತಿ ವರದಿಯನ್ನು ವಿರೋಧಿಸುತ್ತಿರುವ ಸಂಸ್ಥೆ ಹಾಗೂ ವ್ಯಕ್ತಿಗಳ ಜತೆ ಚರ್ಚಿಸಿ ಸರಕಾರ ತೀರ್ಮಾನ ಕೈಗೊಳ್ಳಬೇಕೇ ಹೊರತು ಏಕ ಪಕ್ಷೀಯ ನಿರ್ಧಾರ ಕೈಗೊಳ್ಳಬಾರದು.
ಈ ಹಿನ್ನೆಲೆಯಲ್ಲಿ ಮರುಪರಿಷ್ಕರಣೆ ವಿರೋ ಧಿಸುತ್ತಿರುವವರನ್ನು ಮಾತುಕತೆಗೆ ಆಹ್ವಾನಿಸಬೇಕೆಂದು ಹಿಂದಿನ ಸಮಿತಿ ಅಧ್ಯಕ್ಷ ಪ್ರೊ| ಬರಗೂರು ರಾಮಚಂದ್ರಪ್ಪ ಅವರು ಸರಕಾರವನ್ನು ಆಗ್ರಹಿಸಿದ್ದಾರೆ.
ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಶಿಕ್ಷಣ ಇಲಾಖೆಯು ಸರಕಾರಕ್ಕೆ ವರದಿ ನೀಡಿದೆ. ಆದರೆ, ಮರು ಪರಿಷ್ಕರಣೆಯು ದಲಿತ, ಮಹಿಳಾ ವಿರೋಧಿ, ಸಂವಿಧಾ ನಾತ್ಮಕ ನ್ಯಾಯ ಮತ್ತು ಸಮಾನೆಯತ ವಿರೋಧಿ ಕ್ರಮವಾಗಿದೆ. ರಾಷ್ಟ್ರೀಯ ಚೌಕಟ್ಟು ಗೌಣವಾಗಿದೆ. ಮಾತ್ರವಲ್ಲ, ಬಸವಣ್ಣ, ಕುವೆಂಪು ಅವರ ಆದರ್ಶದ ವಿರುದ್ಧವಿದೆ ಎಂದಿದ್ದಾರೆ.
ಮರು ಪರಿಷ್ಕರಣೆಯಲ್ಲಿ 9ನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿ ಬಸವಣ್ಣನವರು ವೈದಿಕ ಮೂಲ ಮೌಢ್ಯಾಚರಣೆಗಳನ್ನು ವಿರೋಧಿಸಿದ್ದು,ಯಜ್ಞೋಪವೀತವನ್ನು ಕಿತ್ತೆಸೆದದ್ದು, ಉನ್ನತಾಧಿಕಾರದಲ್ಲಿದ್ದರೂ ಚಳವಳಿ ಕಟ್ಟಿದ್ದು, “ದೇಹವೇ ದೇಗುಲ’ ಎಂಬ ಹೊಚ್ಚ ಹೊಸ ಪರಿಕಲ್ಪನೆ ನೀಡಿದ್ದು, ಸರಳ ಕನ್ನಡದಲ್ಲಿ ವಚನಕಾರರು ಬರೆದಿರುವ ವಿಚಾರಗಳನ್ನು ಮರು ಪರಿಷ್ಕರಣೆಯಲ್ಲಿ ಕೈಬಿಡಲಾಗಿದೆ.
ಕುವೆಂಪು ರಚಿತ 7 ಪಾಠಗಳನ್ನು 10ಕ್ಕೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಆದರೆ, ಈ ಸಂಖ್ಯೆಯಿಂದ ನಾಡಗೀತೆ, ನಾಡಧ್ವಜ ಮತ್ತು ಕನ್ನಡ ಭಾಷೆಗಳಿಗೆ ಮಾಡಿದ ಅವಮಾನಕ್ಕೆ ಖಂಡಿತ ರಿಯಾಯಿತಿ ಸಿಗುವುದಿಲ್ಲ ಎಂದು ಬರಗೂರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ