ಹಿತೈಷಿಗಳ ವಿರೋಧದ ಮಧ್ಯೆ ಬಸನಗೌಡ ಕಾಡಾ ಅಧಿಕಾರ ಸ್ವೀಕಾರ
Team Udayavani, Nov 5, 2019, 3:05 AM IST
ಗೊರೇಬಾಳ: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ, ಮಸ್ಕಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆರ್.ಬಸನಗೌಡ ತುರ್ವಿಹಾಳ ಹಿತೈಷಿಗಳ ವಿರೋಧದ ನಡುವೆಯೂ ಸೋಮವಾರ ತುಂಗಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ನಿಗಮ (ಕಾಡಾ) ಅಧ್ಯಕ್ಷ ಸ್ಥಾನ ವಹಿಸಿಕೊಂಡರು. ಬಸನಗೌಡ ತುರ್ವಿಹಾಳ ಅವರಿಗೆ ಸುಮಾರು ತಿಂಗಳ ಹಿಂದೆಯೇ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಕಾಡಾ ಅಧ್ಯಕ್ಷ ಸ್ಥಾನ ನೀಡಿತ್ತು.
ಆದರೆ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಟಿಕೆಟ್ಗೆ ಸಂಬಂಧಿ ಸಿದಂತೆ ಇಲ್ಲಿಯವರೆಗೂ ಹಗ್ಗ ಜಗ್ಗಾಟ ನಡೆದಿತ್ತು. ಈ ಹಿನ್ನೆಲೆಯಲ್ಲಿ ಅಧಿ ಕಾರ ಸ್ವೀಕಾರ ಮಾಡಿರಲಿಲ್ಲ. ಆದರೆ ಪಕ್ಷದ ಹಿರಿಯ ಮುಖಂಡರ ಒತ್ತಾಯಕ್ಕೆ ಮಣಿದ ಬಸನಗೌಡ ಸೋಮವಾರ ಸಂಜೆ 5 ಗಂಟೆಗೆ ಮುನಿರಾಬಾದ್ನ ಕಾಡಾ ಕಚೇರಿ ಯಲ್ಲಿ ಅ ಧಿಕಾರ ಸ್ವೀಕಾರ ಮಾಡಿದರು.
ವಿರೋಧ: ಸೋಮವಾರ ತಾಲೂಕಿನ ತುರುವಿಹಾಳ ಪಟ್ಟಣದ ಹೊರವಲಯದಲ್ಲಿರುವ ಆರ್.ಬಸನಗೌಡರ ನಿವಾಸದ ಮುಂದೆ ಅವರ ಹಿತೈಷಿಗಳು, ಅಭಿಮಾನಿಗಳು, ಬಿಜೆಪಿ ಮುಖಂಡರು, ಕಾರ್ಯಕರ್ತರು ಸಭೆ ನಡೆಸಿ ಯಾವುದೇ ಕಾರಣಕ್ಕೂ ಕಾಡಾ ಅಧ್ಯಕ್ಷ ಸ್ಥಾನ ಪದಗ್ರಹಣ ಮಾಡಬಾರದು ಎಂದು ಪಟ್ಟು ಹಿಡಿದರು. ಮುಂಬರುವ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಬಸನಗೌಡರೇ ಸ್ಪ ರ್ಧಿಸಬೇಕು ಎಂದು ಘೋಷಣೆ ಕೂಗಿದರು.
ಸಮಾಧಾನ: ಪಕ್ಷಕ್ಕಾಗಿ ಶ್ರಮಿಸಿದ ಹಿನ್ನೆಲೆ ಯಲ್ಲಿ ಬಿಜೆಪಿ ರಾಜ್ಯ ಮುಖಂಡರು ತಮ್ಮನ್ನು ಗುರುತಿಸಿ ಕಾಡಾ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಚುನಾವಣೆ ಘೋಷಣೆಯಾದ ನಂತರ ಮುಖಂಡರ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಿರ್ಧಾರ ಕೈಗೊಳ್ಳೋಣ ಎಂದು ಬಸನಗೌಡ ತುರ್ವಿಹಾಳ ಅಭಿಮಾನಿಗಳನ್ನು, ಸಮಾಧಾನಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ