ಸಂಕ್ರಾಂತಿಗೆ ರಾಜ್ಯ ಸಂಪುಟ ಪುನಾರಚನೆ : ಯತ್ನಾಳ್
Team Udayavani, Dec 30, 2021, 10:01 PM IST
ವಿಜಯಪುರ: ಬರುವ ಸಂಕ್ರಾಂತಿಗೆ ರಾಜ್ಯ ಸಂಪುಟ ಪುನಾರಚನೆ ಆಗಲಿದೆ. ಧ್ವಜಾರೋಹಣಕ್ಕೆ ಮಾತ್ರ ಸೀಮಿತವಾಗಿರುವ ಸಚಿವರಿಗೆ ಕೋಕ್ ಸಿಗಲಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮತ್ತೊಂದು ಸಂಕ್ರಾಂತಿ ಬಾಂಬ್ ಸಿಡಿಸಿದ್ದಾರೆ.
ಗುರುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿ ಮರೆತು ಸಚಿವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಗುಪ್ತಚರ ಮಾಹಿತಿ ಪಡೆದಿದ್ದಾರೆ. ಹೀಗಾಗಿ ಬರುವ ಸಂಕ್ರಾಂತಿಗೆ ಸಂಪುಟ ಪುನಾರಚನೆ ಆಗಲಿದ್ದು, ಕೇವಲ ಧ್ವಜಾರೋಹಣ ಮಂತ್ರಿಗಳನ್ನು ಕೈಬಿಡಲಾಗುತ್ತದೆ ಎಂದರು.
ಈ ಹಿಂದೆಯೂ ಸಂಕ್ರಾಂತಿಗೆ ದೊಡ್ಡ ವಿಕೇಟ್ ಬೀಳುವುದಾಗಿ ನಾನು ಹೇಳಿದಂತೆ ಆಗಿದೆ. ಈಗಲೂ ಸಂಕ್ರಾಂತಿಗೆ ವಿಜಯಪುರ ಜಿಲ್ಲೆಗೆ ಹೊಸ ಮಂತ್ರಿ ಬರಲಿದ್ದಾರೆ ಎಂದು ಸಂಕ್ರಾಂತಿ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಗೃಹ ಖಾತೆ ಗಟ್ಟಿ ನಿರ್ಧಾರ ಕೈಗೊಳ್ಳುವ ಶಕ್ತಿ ಇರುವ ಸಚಿವರಿಗೆ ನೀಡಬೇಕು ಎಂದು ಆಗ್ರಹಿಸಿದ ಯತ್ನಾಳ, ಮುಂಬರುವ ಚುನಾವಣೆ ದೃಷ್ಟಿಯಿಂದ ಪಕ್ಷದ ಬಲವರ್ಧನೆ ದೃಷ್ಟಿಯಿಂದ ಪ್ರಧಾನಿ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ