ಮಮತಾ ಬ್ಯಾನರ್ಜಿ ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ:ಯತ್ನಾಳ
Team Udayavani, Mar 21, 2021, 6:37 PM IST
ವಿಜಯಪುರ : ಪಶ್ಚಿಮ ಬಂಗಾಳ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರ ಪಕ್ಷಗಳ ಒಕ್ಕೂಟದ ಗೆಲುವು ಖಚಿತ. ಮಮತಾ ಬ್ಯಾನರ್ಜಿ ಗೆದ್ದರೆ ಪಶ್ಚಿಮ ಬಂಗಾಳ ರಾಜ್ಯ ಮತ್ತೊಂದು ಕಾಶ್ಮೀರ ಆಗಲಿದೆ ಎಂಬ ಅರಿವು ಇರುವ ಅಲ್ಲಿನ ಜನರು ಟಿಎಂಸಿ, ಕಾಂಗ್ರೆಸ್, ಎಡ ಪಕ್ಷಗಳನ್ನು ಸೋಲಿಸಲಿದ್ದಾರೆ ಎಂದು ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಅಭಿಪ್ರಾಯ ಪಟ್ಟರು.
ಇದನ್ನೂ ಓದಿ:ಬಾಳು ಮೂರೆ ದಿನ ಬಾಳ ಜೋಪಾನ, ನಾವೇ ಓಡಿಸ್ಬೇಕು ನಮ್ಮ ಗಾಡಿನ..
ಭಾನುವಾರ ನಗರದಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶಿ ನುಸುಳುಕೋರರಿಗೆ ನೆರವು ನೀಡುತ್ತಿರುವ ಮಮತಾ ಬ್ಯಾನರ್ಜಿ, ಬಾಂಗ್ಲಾದೇಶ, ಪಾಕಿಸ್ತಾನ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಕಗ್ಗೊಲೆಯಗುತ್ತಿದೆ. ಮುಸ್ಲೀಂ ಮೂಲಭೂತವಾದಿಗಳ ಕೈಯಲ್ಲಿರುವ ಮಮತಾ ಬ್ಯಾನರ್ಜಿ ಹಾಗೂ ಪಶ್ಚಿಮ ಬಂಗಾಳ ರಾಜ್ಯವನ್ನು ಮುಕ್ತಗೊಳಿಸಲು ಅಲ್ಲಿನ ಜನರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೈತ್ರಿ ಬಲಪಡಿಸಲು ನಿರ್ಧರಿಸಿದ್ದಾರೆ ಎಂದರು.