ಅನುದಾನ ಪಡೆಯಲು ದಿಂಗಾಲೇಶ್ವರರು ಲಂಚ ನೀಡಿದ್ದು ತಪ್ಪಲ್ಲವೇ :ಯತ್ನಾಳ್


Team Udayavani, Apr 19, 2022, 7:12 PM IST

Untitled-1

ವಿಜಯಪುರ: ರಾಜ್ಯ ಸರ್ಕಾರದ ವಿರುದ್ಧ ಶೇ.30 ಕಮಿಷನ್ ಆರೋಪ ಮಾಡಿರುವ ದಿಂಗಾಲೇಶ್ವರಶ್ರೀಗಳು, ಯಾರಿಗೆ ಕೊಟ್ಟರು, ಎಲ್ಲಿ ಕೊಟ್ಟರು ಎಷ್ಟು ಕೊಟ್ಟರು ಎಂಬುದಕ್ಕೆ ಸಾಕ್ಷಿ ನೀಡಲಿ. ನೀವೇಕೆ ಶೇ.30 ರಷ್ಟು ಲಂಚ ಕೊಟ್ಟು ಅನುದಾನ ಪಡೆದಿರಿ. ಅದು ತಪ್ಪಲ್ಲವೇ ಎಂಬುದನ್ನು ಸಮಾಜಕ್ಕೆ ಹೇಳಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಓರ್ವ ಮಠಾಧೀಶರಾಗಿ ಸತ್ಯ, ನ್ಯಾ, ನೀತಿ, ಧರ್ಮದ ಬಗ್ಗೆ ಪ್ರವಚನ ನೀಡುವ ಶ್ರೀಗಳು ಸಾಕ್ಷಿ ಸಮೇತ ಮಾತನಾಡಿದ ಅರ್ಥ ಬರುತ್ತದೆ. ಇಷ್ಟಕ್ಕೂ ಸತ್ಯ ಧರ್ಮದ ಬಗ್ಗೆ ಮಾತನಾಡುವ ನೀವು ಲಂಚ ಕೊಟ್ಟು ಅನುದಾನ ಪಡೆದದ್ದು ಏಕೆ ಎಂದು ಹರಿಹಾಯ್ದರು.

ಸ್ವಾಮಿಗಳಾಗಿ ಮಠದಲ್ಲಿ ಕುಳಿತು ಒಳ್ಳೆಯ ಜನರಿಗೆ ಧರ್ಮ ಸದ್ವಿಚಾರನಗಳ ಪ್ರವಚನ ಸಂದೇಶ ನೀಡುವುದು ಬಿಟ್ಟು, ರಾಜಕಾರಣ ಮಾಡಲು ಮುಂದಾಗಿದ್ದೀರಿ. ವಿಜಯೇಂದ್ರ ನೀಡಿದ ಹಣ ಪಡೆದು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಖುರ್ಚಿಯಿಂದ ಇಳಿಸಿದರೆ ಬಿಜೆಪಿ ಸರ್ವನಾಶ ಆಗತ್ತೆ. ಬಿಜೆಪಿ ನಾಶವಾಗುತ್ತದೆ ಎಂದು ಕಾವೇರಿ ನಿವಾಸದ ಎದುರು ಪ್ರವಚನ ಮಾಡಿದ್ದೀರಿ ಎಂದು ದಿಂಗಾಲೇಶ್ವರ ಶ್ರೀಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಭಾವೈಕ್ಯತೆ ವಿರೋಧಿ ಸ್ವಾಮೀಜಿ ಹೆಸರಲ್ಲಿ ಭಾವೈಕ್ಯತೆ ದಿನ: ದಿಂಗಾಲೇಶ್ವರಶ್ರೀ ಆಕ್ಷೇಪ

ಆಗ ವಿಜಯೇಂದ್ರ ನಿಮಗೆ ಎಷ್ಟು ಪರ್ಸೆಂಟೇಸ್ ಕೊಟ್ಟಿದ್ದರು ಎಂಬ ಬಗ್ಗೆ ದಿಂಗಾಲೇಶ್ವರರರು ಸಮಾಜಕ್ಕೆ ಉತ್ತರಿಸಬೇಕು. ಖಾವಿ ಹಾಕಿದ್ದೀರಿ ಎಂಬ ಕಾರಣಕ್ಕೆ ನಾವು ಗೌರವ ಕೊಡುತ್ತೇವೆ. ಹಾಗಂತ ಸ್ವಾಮಿಗಳಾದವರು ಬಾಯಿಗೆ ಬಂದಂತೆ ಮಾತನಾಡಿದರೆ ಸರಿಯಲ್ಲ. ಲಂಚ ಕೊಡೋದು ತಪ್ಪು ತಗೊಳ್ಳೋದು ತಪ್ಪು ಎಂಬುದು ಸ್ವಾಮಿಗಳಾದ ದಿಂಗಾಗಲೇಶ್ವರರಿಗೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದರು.

ಡಿಕೆ.ಶಿವಕುಮಾರ ಮನೆಗೆ ಹೋಗಿ ಮುಂದಿನ ಸಿಎಂ ಎಂದು ಆಶಿರ್ವಾದ ಮಾಡುವ ಶ್ರೀಗಳು, ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆಯಲ್ಲಿ ಸಹಿತ ಹೋಗಿ ಸೂರ್ಯ, ಚಂದ್ರ ಅಂತೆಲ್ಲ ಹೊಗಳಿಕೆ ಭಾಷಣ ಮಾಡಿದ್ದಾರೆ. ದಿಂಗಾಲೇಶ್ವರರು ಹುಬ್ಬಳ್ಳಿ ಮೂರು ಸಾವಿರ ಮಠದ ಸ್ವಾಮಿಜಿಗಳಿಗೂ ಕಿರುಕುಳ ನೀಡಿದರು. ನಿಮಗೆ ರಾಜಕಾರಣದಲ್ಲಿ ಆಸಕ್ತಿ ಇದ್ದರೆ ಖಾವಿ ತೊರೆದು ನಮ್ಮಂತೆ ಖಾದಿ ಹಾಕೊಂಡು ಬನ್ನಿ ಎಂದು ಆಹ್ವಾನ ನೀಡಿದರು.

ಜನರು ಸ್ವಾಮಿಜಿ ಎಂದರೆ ಕಾಲು ಬೀಳುತ್ತಾರೆ, ಇವರನ್ನು ನೋಡಿದ್ರೆ ಮಂತ್ರಿಗಳ ಮನೆ ಮನೆಗೆ ಅಡ್ಡಾಡಿ ಶೇ.30 ಕಮನಿಷನ್ ಕೊಟ್ಟು ಮಠಕ್ಕೆ ಹಣ ತರುತ್ತಾರೆ. ಮಠಗಳನ್ನು ಭಕ್ತರು ಕಟ್ಟಬೇಕೆ ಹೊರತು ಸರ್ಕಾರವಲ್ಲ.ಸರ್ಕಾರದ ಹಣ ಪಡೆದರೆ ಭವಿಷ್ಯದಲ್ಲಿ ಆಯಾ ಪಕ್ಷದ ಪರ ಪ್ರಚಾರ ಮಾಡಬೇಕಾಗುತ್ತದೆ ಎಂದ ಶಾಸಕ ಯತ್ನಾಳ ಕುಟುಕಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.