Basangouda Patil Yatnal, ಸೋಮಣ್ಣ ಸೇರಿ ಹಿರಿಯರ ಭೇಟಿ: ಬಿ.ವೈ.ವಿಜಯೇಂದ್ರ


Team Udayavani, Nov 13, 2023, 9:58 PM IST

ಬೆಂಗಳೂರು: ಹಿರಿಯ ನಾಯಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ವಿ. ಸೋಮಣ್ಣ ಸೇರಿ ಬಿಜೆಪಿಯ ಎಲ್ಲ ಹಿರಿಯ ನಾಯಕರನ್ನು ಖುದ್ದಾಗಿ ಭೇಟಿಯಾಗಿ ಸಮಾಲೋಚನೆ ನಡೆಸುವುದಾಗಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮಾಜಿ ಸಚಿವ ಆರ್‌.ಅಶೋಕ್‌ ಅವರನ್ನು ಪದ್ಮನಾಭನಗರದ ಅವರ ಕಚೇರಿಯಲ್ಲಿ ಭೇಟಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ ಪಕ್ಷದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದಾಗಿ ತಿಳಿಸಿದರು. ಈ ಸರ್ಕಾರವನ್ನು ಕಾಂಗ್ರೆಸ್‌ ಶಾಸಕರೇ ಬಹಿರಂಗವಾಗಿ ಟೀಕಿಸುತ್ತಿದ್ದಾರೆ. ಬರ ನಿರ್ವಹಣೆಯಲ್ಲಿ ನಮ್ಮ ಸರಕಾರ ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಆ ಪಕ್ಷದ ಉತ್ತರ ಕರ್ನಾಟಕದ ಶಾಸಕರೊಬ್ಬರು ಹೇಳಿದ್ದಾರೆ.

ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಬರಕ್ಕೆ ಸಂಬಂಧಿಸಿ ಜಿಲ್ಲಾ ಪ್ರವಾಸ ಮಾಡುತ್ತಿಲ್ಲ ಎನ್ನುತ್ತಾರೆ. ಒಂದು ರೂಪಾಯಿ ಅನುದಾನ ಬಂದಿಲ್ಲವೆಂದು ಮತ್ತೊಬ್ಬ ಶಾಸಕರು ಹೇಳುತ್ತಾರೆ. ಇನ್ನೊಂದು ಕಡೆ ರಾಜ್ಯದ ಹಣಕಾಸು ಪರಿಸ್ಥಿತಿ ಹದಗೆಟ್ಟಿದೆ. ದಿವಾಳಿ ಅಂಚಿಗೆ ತಲುಪಿದ್ದಾಗಿ ಆಡಳಿತ ಪಕ್ಷದ ಶಾಸಕರು ಮಾತನಾಡುತ್ತಿದ್ದಾರೆ ಎಂದು ಪ್ರಶ್ನೆಗೆ ಉತ್ತರಿಸಿದರು.

136 ಶಾಸಕರು ಸಾಕಾಗಲಿಲ್ಲವೇ?: ಇತರ ಪಕ್ಷಗಳ ಹಲವು ಶಾಸಕರು ಕಾಂಗ್ರೆಸ್‌ ಸೇರುವ ಕುರಿತ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, 136 ಶಾಸಕರಿದ್ದಾರೆ ಅವರಿಗೆ ಸಾಕಾಗಲಿಲ್ಲವೇ? ಎಂದು ಪ್ರಶ್ನಿಸಿದರು. ಈ ರೀತಿಯ ಉಡಾಫೆ ಮಾತನಾಡುವ ಬದಲು ರಾಜ್ಯದ ಜನ, ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಿದರೆ ಒಳಿತಾಗಲಿದೆ ಎಂದು ತಿಳಿಸಿದರು.

ಮಾಜಿ ಸಚಿವ ಅಶೋಕ್‌ ಮಾತನಾಡಿ, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ನಿವಾಸದ ಬದಲಾಗಿ ನನ್ನ ಕೋರಿಕೆ ಮೇರೆಗೆ ನನ್ನ ಕಚೇರಿಗೆ ಬಂದಿದ್ದಾರೆ. ಹಿರಿಯರಾದ ದೊರೆಸ್ವಾಮಿ ನಾಯ್ಡು ಅವರನ್ನು ಭೇಟಿ ಮಾಡಿದ್ದೇವೆ. ಕರ್ನಾಟಕದಲ್ಲಿ ದುರಾಡಳಿತ ಮಾಡುತ್ತಿರುವ ಕಾಂಗ್ರೆಸ್‌ ವಿರುದ್ಧ ದೊಡ್ಡ ಹೋರಾಟ ಮಾಡುವುದೇ ನಮ್ಮೆಲ್ಲರ ಗುರಿ ಎಂದರು.

ವಿಜಯೇಂದ್ರರ ಎದುರು ದೊಡ್ಡ ಸವಾಲಿದೆ. ಭ್ರಷ್ಟ ಸರಕಾರ ಕಿತ್ತೂಗೆಯಲು ನೇತೃತ್ವ ವಹಿಸಲು ನರೇಂದ್ರ ಮೋದಿಜಿ, ಅಮಿತ್‌ ಶಾ, ನಡ್ಡಾ ಅವರು ಅವಕಾಶ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನ ಗೆಲ್ಲುವುದು, ರಾಜ್ಯದಲ್ಲಿ ವರ್ಗಾವಣೆ ದಂಧೆ, ದುರಾಡಳಿತನಿರತ, ಅಭಿವೃದ್ಧಿ ಕಾರ್ಯ ಸ್ಥಗಿತಕ್ಕೆ ಕಾರಣವಾದ ಸರಕಾರದ ವಿರುದ್ಧವಾಗಿ ಅದರ ಚಳಿ, ಜ್ವರ ಎರಡನ್ನೂ ಬಿಡಿಸಲು ದೊಡ್ಡ ಹೋರಾಟ ನಡೆಸಬೇಕಿದೆ. ಅಂಥ ದೊಡ್ಡ ಜವಾಬ್ದಾರಿ ಹೊರುತ್ತಿರುವ ವಿಜಯೇಂದ್ರರಿಗೆ ಶುಭಾಶಯಗಳು ಎಂದು ತಿಳಿಸಿದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.