ಬಿಎಸ್‌ವೈ ಸಂವಹನಕಾರನಿಗೆ ಒಲಿದ ಸಿಎಂ ಪಟ್ಟ!

ಯಡಿಯೂರಪ್ಪ ಅವರನ್ನು ಮರಳಿ ಬಿಜೆಪಿಗೆ ಕರೆತರುವಲ್ಲಿಯೂ ಬೊಮ್ಮಾಯಿಯವರೇ ಪ್ರಮುಖ ಪಾತ್ರ ವಹಿಸಿದ್ದು ವಿಶೇಷ.

Team Udayavani, Jul 28, 2021, 9:45 AM IST

ಬಿಎಸ್‌ವೈ ಸಂವಹನಕಾರನಿಗೆ ಒಲಿದ ಸಿಎಂ ಪಟ್ಟ!

ದಾವಣಗೆರೆ: ಬಿ.ಎಸ್‌. ಯಡಿಯೂರಪ್ಪ ಅವರಿಗೆ ಅಘೋಷಿತ ಆಪ್ತ ಸಂವಹನಕಾರರಾಗಿ ಕೆಲಸ ಮಾಡುತ್ತ ಬಂದಿರುವ ಬಸವರಾಜ ಬೊಮ್ಮಾಯಿ ಅವರಿಗೆ ಯಡಿಯೂರಪ್ಪ ಅವರ ಉತ್ತರಾಧಿಕಾರಿ ಪಟ್ಟ ಒಲಿದು ಬಂದಂತಾಗಿದೆ.

ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ಪರಮಾಪ್ತರಲ್ಲಿ ಒಬ್ಬರು. ತಾವು ಮುಖ್ಯ ಮಂತ್ರಿ ಆದಾಗಲೆಲ್ಲ ಯಡಿಯೂರಪ್ಪ ಅವರು ಬೊಮ್ಮಾಯಿ ಅವರನ್ನು ತಮ್ಮ ಹತ್ತಿರದಲ್ಲಿಯೇ ಇಟ್ಟುಕೊಂಡಿರುತ್ತಿದ್ದರು. ಪಕ್ಷ ಹಾಗೂ ರಾಜಕೀಯ ವಿಚಾರವಾಗಿ ಕಂಡು ಬರುವ ಬೆಳವಣಿಗೆ, ಬದಲಾ ವಣೆ, ಸರಕಾರ, ಪಕ್ಷದ ವಿಷಯವಾಗಿ ವಿಚಾರ ವಿಮರ್ಶೆ ಹಾಗೂ ಪ್ರಮುಖ ನಿರ್ಧಾರಗಳನ್ನು ಯಡಿಯೂರಪ್ಪ ಪರವಾಗಿ ಕೇಂದ್ರದ ನಾಯಕರಿಗೆ ಇಂಗ್ಲಿಷ್‌ ಇಲ್ಲವೇ ಹಿಂದಿ ಭಾಷೆ ಯಲ್ಲಿ ಸ್ಪಷ್ಟವಾಗಿ ತಿಳಿಸುವಲ್ಲಿ ಬೊಮ್ಮಾಯಿ ಪ್ರಮುಖ ಪಾತ್ರ ವಹಿಸುತ್ತಿದ್ದರು. ಹೀಗಾಗಿ ಯಡಿಯೂರಪ್ಪ ಅವರು ದಿಲ್ಲಿಗೆ ಹೋಗುವಾಗಲೆಲ್ಲ ಬಸವರಾಜ ಬೊಮ್ಮಾಯಿ ಅವರನ್ನು ಕರೆದುಕೊಂಡೇ ಹೋಗುತ್ತಿದ್ದರು.

ಯಡಿಯೂರಪ್ಪ ಅವರು ಬೊಮ್ಮಾಯಿ ಅವರನ್ನು ಕೇವಲ ಆಪ್ತ ಸಂವಹನಕಾರರನ್ನಾಗಿ ಮಾಡಿಕೊಳ್ಳದೇ ಪ್ರಮುಖ ರಾಜಕೀಯ ವಿದ್ಯಮಾನಗಳ ಬಗ್ಗೆ ಸಲಹೆ ಗಳನ್ನೂ ಪಡೆದು ಕೊಳ್ಳುತ್ತಿದ್ದರು. ಪಕ್ಷದ ಆಂತರಿಕ, ಬಹಿರಂಗವಷ್ಟೇ ಅಲ್ಲದೆ ಯಡಿಯೂರಪ್ಪ ಅವರ ಕೆಲವು ವೈಯಕ್ತಿಕ ವಿಚಾರದಲ್ಲಿಯೂ ಬೊಮ್ಮಾಯಿ ವಾಸ್ತವಿಕತೆಯ ಚಿತ್ರಣ ಅನಾವರಣಗೊಳಿಸುವ ಕೈಗನ್ನಡಿಯಂತೆ ಕೆಲಸ ಮಾಡಿದ್ದಾರೆ. ಈ ಕಾರಣ ದಿಂದಾಗಿ ಬೊಮ್ಮಾಯಿ ಅವರಿಗೆ ಕೇಂದ್ರದ ಬಹುತೇಕ ಎಲ್ಲ ನಾಯಕರೊಂದಿಗೆ ಹಲವು ವರ್ಷಗಳಿಂದ ಉತ್ತಮ ಸಂವಹನ, ಸ್ನೇಹ ಬೆಳೆಸಲು ಸಾಧ್ಯವಾಗಿತ್ತು. ಕೇಂದ್ರದ ಪ್ರಮುಖರ ನಾಯಕರೊಂದಿಗೆ ಯಡಿಯೂರಪ್ಪ ಅವರ ಪರವಾಗಿ ಮಾಡಿದ ಸಂವಹನ‌ ಕಾರ್ಯ ಈಗ ರಾಜ್ಯದ ಮುಖ್ಯಮಂತ್ರಿ ಯನ್ನಾಗಿಸುವಲ್ಲಿಯೂ ಪರೋಕ್ಷವಾಗಿ ಸಹಕಾರಿಯಾಯಿತು ಎಂಬುದನ್ನು ಅವರ ಆಪ್ತರು ವಿಶ್ಲೇಷಿಸುತ್ತಾರೆ. ರಾಜಕೀಯ  ತಂತ್ರಜ್ಞ:  ಬಸವರಾಜ ಬೊಮ್ಮಾಯಿ ರಾಜಕಾರಣದ ಎಲ್ಲ ಪಟ್ಟುಗಳನ್ನು ಬಲ್ಲವರೂ ಹೌದು. ಬಿಜೆಪಿ ಆಡಳಿತಾವಧಿಯಲ್ಲಿ ಎದುರಾದ ಹತ್ತು ಹಲವು ಸಂಕಷ್ಟಗಳ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಸರಕಾರದ ಕಾರ್ಯವನ್ನು ಸಮರ್ಥಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹಾವೇರಿಯಲ್ಲಿ ಗೋಲಿಬಾರ್‌ ನಡೆದು ಇಬ್ಬರು ರೈತರು ಮೃತಪಟ್ಟ ಘಟನೆಯನ್ನು ವಿಪಕ್ಷದವರು ಬಳಸಿಕೊಂಡು ಸರಕಾರಕ್ಕೆ ಮುಖಭಂಗ ಮಾಡಲು ಮುಂದಾದಾಗ ಅದನ್ನು ನಾಜೂಕಾಗಿ ನಿಭಾಯಿಸಿದ್ದು ಒಂದು ಉದಾಹರಣೆಯಷ್ಟೆ.

ಬಿಎಸ್‌ವೈ ಮರಳಿ ಪಕ್ಷಕ್ಕೆ ಕರೆ ತಂದ ಚಾಣಾಕ್ಷ  :

ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ಅವರ ಆಪ್ತರಾಗಿದ್ದರೂ ಈ ಆಪ್ತತೆಯನ್ನು ತಮ್ಮ ರಾಜಕೀಯ ಭವಿಷ್ಯಕ್ಕೆ ಅಡ್ಡಿಯಾಗದಂತೆ ನೋಡಿಕೊಂಡ ಚಾಣಾಕ್ಷ. ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು ಕೆಜೆಪಿ ಪಕ್ಷ ಕಟ್ಟಿದಾಗ ಬೊಮ್ಮಾಯಿ ಬಿಜೆಪಿಯಲ್ಲಿಯೇ ಉಳಿದು ತಮ್ಮ ರಾಜಕೀಯ ಭವಿಷ್ಯಕ್ಕೆ ಬಿಜೆಪಿಯೇ ಬೆಳಕು ಎಂಬುದನ್ನು ನಿರ್ಧರಿಸಿದ್ದರು. ಬಳಿಕ ಯಡಿಯೂರಪ್ಪ ಅವರನ್ನು ಮರಳಿ ಬಿಜೆಪಿಗೆ ಕರೆತರುವಲ್ಲಿಯೂ ಬೊಮ್ಮಾಯಿಯವರೇ ಪ್ರಮುಖ ಪಾತ್ರ ವಹಿಸಿದ್ದು ವಿಶೇಷ.

 

-ಎಚ್‌.ಕೆ. ನಟರಾಜ

 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Delhi Liquor Scam: ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Delhi Liquor Scam:ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.