ಬರುವ ದಿನಗಳಲ್ಲಿ ಯಡಿಯೂರಪ್ಪ ಅವರದ್ದೇ ಶ್ರೀರಕ್ಷೆ ಇರಲಿದೆ : ಬೊಮ್ಮಾಯಿ
Team Udayavani, Jun 6, 2021, 3:34 PM IST
ಬೆಂಗಳೂರು : ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಸಂಪೂರ್ಣ ಬೆಂಬಲ ಸಿಕ್ಕಿದೆ. ರಾಜ್ಯದ ಜನರಿಂದ ಹೆಚ್ಚು ಬೆಂಬಲ ಸಿಕ್ಕಿದೆ. ಆದರೆ, ಅಪಸ್ವರ ಎತ್ತಿರುವವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಸಿಎಂ ಕೋವಿಡ್ ಸಂದರ್ಭದಲ್ಲಿ ನಿರಂತರವಾಗಿ ಕೆಲಸಮಾಡ್ತಿದ್ದಾರೆ. ಜನರ ಸಂಕಷ್ಟಕ್ಕೆ ಸಿಎಂ ಸ್ಪಂದಿಸ್ತಿದ್ದಾರೆ. ನಮ್ಮ ಸಿಎಂ ಅಭಿವೃದ್ಧಿ ಕೆಲಸಗಳ ಜೊತೆ ಕೊರೊನಾ ನಿಯಂತ್ರಣಕ್ಕೂ ಕೆಲಸ ಮಾಡ್ತಿದ್ದಾರೆ. ಆದರೆ, ನಾಯಕತ್ವ ಬದಲಾವಣೆಯ ಗಾಳಿ ಸುದ್ದಿ ಹಬ್ಬಿಸಲಾಗುತ್ತಿದೆ. ನಾವು ಅವರ ಜೊತೆ ಮಾತನ್ನಾಡುವಾಗ ನೋವು ಗೊತ್ತಾಯ್ತು. ಅವರ ಮಾತುಗಳಲ್ಲಿ ಬೇಸರ ಇತ್ತು ಎಂದರು.
ಇತ್ತೀಚಿನ ಬೆಳವಣಿಗೆ ಬಗ್ಗೆ ತುಂಬಾ ಬೇಸರ ಇದ್ದಂತಿದೆ. ಹೈಕಮಾಂಡ್ ಕೂಡ ಯಡಿಯೂರಪ್ಪ ಸಾಮರ್ಥ್ಯವನ್ನು ಗುರುತಿಸಿದೆ. ಯಾವುದೇ ಗೊಂದಲ ಹೈಕಮಾಂಡ್ ನಲ್ಲಿ ಇಲ್ಲ. ಯಡಿಯೂರಪ್ಪ ನಾಯಕತ್ವದ ಬಗ್ಗೆ ಗೊಂದಲ ಇಲ್ಲ. ಯಡಿಯೂರಪ್ಪ ನಾಯಕತ್ವದಲ್ಲೇ ನಾವು ಬಂದಿದ್ದೇವೆ. ಇವರ ನಾಯಕತ್ವದಲ್ಲೇ ಮುಂದೆಯೂ ಕೆಲಸ ಮಾಡುತ್ತೇವೆ. ಬರುವ ದಿನಗಳಲ್ಲಿ ಯಡಿಯೂರಪ್ಪ ಅವರದ್ದೇ ಶ್ರೀರಕ್ಷೆ ಇರಲಿದೆ. ಸಣ್ಣಪುಟ್ಟ ವಿಚಾರಗಳಿಗೆ ಸಂಪೂರ್ಣ ವಿರಾಮ ಹಾಕಬೇಕಿದೆ ಎಂದರು.