ಬಲಪ್ರಯೋಗ ಇಲ್ಲದೇ ಲಾಕ್ ಡೌನ್ ಯಶಸ್ಸಿಗೆ ಜನರ ಸಹಕಾರ ಮುಖ್ಯ : ಬಸವರಾಜ ಬೊಮ್ಮಾಯಿ
Team Udayavani, May 11, 2021, 12:56 PM IST
ಬೆಂಗಳೂರು: ಬಲಪ್ರಯೋಗದ ಮಾಡದೆ ಲಾಕ್ ಡೌನ್ ಯಶಸ್ವಿಯಾಗಬೇಕಾದರೆ ಜನರ ಸಹಕಾರ ಮುಖ್ಯವಾಗಿರಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳೂರು ಬೆಂಗಳೂರಿನ ಪಶು ಮಹಾವಿದ್ಯಾಲಯದಲ್ಲಿನ ಪೂರೈಕೆ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಲಪ್ರಯೋಗ ಮಾಡದೇ ಲಾಕ್ ಡೌನ್ ಯಶಸ್ವಿಗೊಳಿಸಬೇಕಾದ ಅನಿವಾರ್ಯತೆ ಇದೆ. ಅದಕ್ಕಾಗಿ ಲಾಠಿ ಪ್ರಹಾರ ಮಾಡದಂತೆ ಪೊಲೀಸರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. 14 ದಿನಗಳ ಅವಧಿಯಲ್ಲಿ ನಿಯಮಗಳನ್ನು ಪಾಲಿಸಿದರೆ ಕೋವಿಡ್ ನಿಯಂತ್ರಣ ಸಾಧ್ಯ ಎಂದರು.
ಹೀಗಾಗಿ ಜನರ ಸಹಕಾರ ಅತಿ ಮುಖ್ಯವಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಬಲಪ್ರಯೋಗ ಮಾಡಲಾರದೆ ವಾಹನ ಸೀಜ್ ಮಾಡುವುದು ಸೇರಿದಂತೆ ಇತರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?