ಸಂವಿಧಾನಕ್ಕೆ ಅಪಚಾರ ಮಾಡಿದ ಹೊರಟ್ಟಿ ರಾಜೀನಾಮೆ ನೀಡಬೇಕು : ಬಿ‌.ಕೆ. ಹರಿಪ್ರಸಾದ್

300 ಕೋಟಿ ರೂ. ಪಿಎಸ್ ಐ ನೇಮಕ ಹಗರಣ : ಅಣ್ಣಾ ಹಜಾರೆ ಎಲ್ಲಿ ಮಲಗಿದ್ದಾರೆ ?

Team Udayavani, May 5, 2022, 1:11 PM IST

B K HARi

ಬೆಂಗಳೂರು: ಸಭಾಪತಿ ಬಸವರಾಜ್ ಹೊರಟ್ಟಿಯವರು ಪಕ್ಷಾಂತರ ಕಾಯ್ದೆಯ ಉಲ್ಲಂಘನೆ ಮಾಡಿದ್ದಾರೆ, ಸಂವಿಧಾನದ ಪೀಠದಲ್ಲಿದ್ದು ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ‌.ಕೆ. ಹರಿಪ್ರಸಾದ್ ಗುರುವಾರ ಆಕ್ರೋಶ ಹೊರ ಹಾಕಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಭಾಪತಿ ಬಸವರಾಜ್ ಹೊರಟ್ಟಿಯವರು ಇತ್ತೀಚಿಗೆ ಬಿಜೆಪಿಯ ಅಮಿತ್ ಶಾ ಅವರನ್ನ ಭೇಟಿಯಾಗಿದ್ದಾರೆ. ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂದು ಘೋಷಿಸಿದ್ದಾರೆ. ಸಾಕಷ್ಟು ಹಿರಿಯರಾಗಿ, ಶಾಸಕರಾಗಿ ಅನುಭವ ಇರುವ ಹೊರಟ್ಟಿ ಅವರಿಂದ ನಾವು ನಿರೀಕ್ಷೆ ಮಾಡಿರಲಿಲ್ಲ. ಸಂವಿಧಾನದ ಪೀಠದಲ್ಲಿದ್ದು ಬಿಜೆಪಿ ಸೇರ್ಪಡೆಯ ಮಾತು ಸಂವಿಧಾನಕ್ಕೆ ಮಾಡಿದ ಅಪಚಾರ ಇದು. ಪಕ್ಷ ಸಿದ್ದಾಂತಗಳನ್ನ ಒಪ್ಪಿ ಯಾರು ಬೇಕಾದರೂ ಯಾವುದೇ ಪಕ್ಷವನ್ನ ಸೇರಬಹುದು, ಆದರೆ ಸಂವಿಧಾನ ಪೀಠದಲ್ಲಿರುವವರು ನಡೆದುಕೊಳ್ಳುವ ರೀತಿ ಇದಲ್ಲ ಎಂದರು.

ಹೊರಟ್ಟಿಯವರು ಪಕ್ಷಾಂತರ ಕಾಯ್ದೆಯ ಉಲ್ಲಂಘನೆ ಮಾಡಿದ್ದಾರೆ. ಸಂವಿಧಾನದ 10ನೇ ಶೆಡ್ಯೂಲ್ ಪ್ರಕಾರ ನಡೆದುಕೊಳ್ಳದೇ ಕಾಯ್ದೆಯನ್ನ ಉಲ್ಲಂಘಿಸಿದ್ದಾರೆ. ಸಂವಿಧಾನದ ಮೂಲಕ ಭಾರತ ನಡೆಯುತ್ತಿದೆ ಹೊರತು ಪಂಚಾಂಗದಲ್ಲಿ ನಡೆಯುವುದಿಲ್ಲ ಎಂದರು.

ಸಂವಿಧಾನದ ಪೀಠಕ್ಕೆ ಅವಮಾನ ಮಾಡಿರುವ ಹೊರಟ್ಟಿಯವರು ಕೂಡಲೇ ರಾಜೀನಾಮೆ ನೀಡಬೇಕು. ಸಭಾಪತಿಗಳ ಹುದ್ದೆ ಪಕ್ಷಾತೀತವಾದದ್ದು, ಆದರೆ ಹೊರಟ್ಟಿಯವರು ಬಿಜೆಪಿ ಸೇರ್ಪಡೆ ಆಗುತ್ತೇನೆ ಎಂದು ಹೇಳುವುದು ಪೀಠಕ್ಕೆ ಮಾಡಿದ ದ್ರೋಹ ಎಂದರು.

ಬಿಜೆಪಿಯವರ ದಂಡಂ ದಶಂಗುಣಂ ಮೂಲಕ ಹೆದರಿ ಹೊರಟ್ಟಿಯವರು ಹೋಗಿರಬಹುದು. ಬಿಜೆಪಿಗೆ ಸೇರಿ ಹೊರಟ್ಟಿಯವರು ಹರಕೆಯ ಕುರಿ ಆಗುವುದರಲ್ಲಿ ಅನುಮಾನವೇ ಇಲ್ಲ. ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿ ನಡೆಯುವ ಬಿಜೆಪಿಗೆ ಹೊರಟ್ಟಿ ಸೇರಿರುವುದು ದುರದೃಷ್ಟಕರ. ಆಸೆ ಆಮಿಷಗಳಿಗೆ ಹೊರಟ್ಟಿಯವರು ಹೋಗಿರುವುದು ಸ್ಪಷ್ಟವಾಗಿದೆ. ಸಂವಿಧಾನ ರಕ್ಷಣೆ ಮಾಡುವ ಪೀಠದಲ್ಲಿ ಕೂತು, ಸಂವಿಧಾನ ಬುಡಮೇಲು ಮಾಡುವ ಬಿಜೆಪಿ ಜೊತೆಗೆ ಸೇರಿದ್ದಾರೆ. ಆಪರೇಷನ್ ಕಮಲದ ಮೂಲಕವೇ ಹೊರಟ್ಟಿಯವರು ಬಿಜೆಪಿಗೆ ಸೇರಿದ್ದಾರೆ.
ಎಂದು ತೀವ್ರ ವಾಗ್ದಾಳಿ ನಡೆಸಿದರು.

ಅಣ್ಣಾ ಹಜಾರೆ ಎಲ್ಲಿ ಮಲಗಿದ್ದಾರೆ ?

ರಾಜ್ಯದಲ್ಲಿ 300 ಕೋಟಿ ರೂ. ಪಿಎಸ್ ಐ ನೇಮಕ ಹಗರಣ ನಡೆದಿದೆ. ಆದರೆ ಅಣ್ಣಾ ಹಜಾರೆ ಎಲ್ಲಿ ಮಲಗಿದ್ದಾರೆ ? ಎಂದು ಹರಿಪ್ರಸಾದ್ ಕಿಡಿ ಕಾರಿದರು.

ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮವಾಗಿದೆ.ಅಕ್ರಮ ಸಂಬಂಧ ೨೭ ಜನರನ್ನ ಬಂಧಿಸಿದ್ದಾರೆ.ಅಕ್ರಮ ಆಗಿಲ್ಲದಿದ್ರೆ ಯಾಕೆ ಬಂಧಿಸುತ್ತಿದ್ರು.ದಿವ್ಯಾ ಹಾಗರಗಿ ಯಾರು,ಬಿಜೆಪಿ ನಾಯಕಿಯಲ್ಲವೇ?ಈಗ ಹಾಗರಗಿಯನ್ನ ಪೊಲೀಸರು ಬಂಧಿಸಿಲ್ಲವೇ? ಎಂದು ಪ್ರಶ್ನಿಸಿದರು.

ಉನ್ನತ ಶಿಕ್ಷಣ ಇಲಾಖೆಯಲ್ಲಿ ಅವ್ಯವಹಾರ ಆಗಿಲ್ಲವೇ?ಉಪನ್ಯಾಸಕರ ನೇಮಕಾತಿಯಲ್ಲಿ ಅಕ್ರಮ ಆಗಿಲ್ವೇ ? ಯಾಕೆ ಇದರ ಬಗ್ಗೆ ಮಾತನಾಡ್ತಿಲ್ಲ ಎಂದು ಪ್ರಶ್ನಿಸಿದರು.

ಭ್ರಷ್ಟಾಚಾರದಲ್ಲಿ ಯಾವ ಸಿಎಂ ಜೈಲಿಗೆ ಹೋಗಿರಲಿಲ್ಲ. ಆದರೆ ಬಿಜೆಪಿ ಮುಖ್ಯಮಂತ್ರಿ ಹೋಗಿದ್ದರು. ಅಮಿತ್ ಶಾ ಯಾಕೆ‌ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ ? ಅವರ ಮಗನ ಮೇಲೂ ಭ್ರಷ್ಟಾಚಾರ ಆರೋಪವಿದೆ. ಅದಕ್ಕಾಗಿ ಅವರು ಮಾತನಾಡುತ್ತಿಲ್ಲ. ಹಾವಿನಪುರದಲ್ಲಿ‌ಸುಳ್ಳು ಮ್ಯಾನ್ಯುಫ್ಯಾಕ್ಚರಿಂಗ್ ಫ್ಯಾಕ್ಟರಿಯಿದೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.