ಸಂಪುಟ ಕುತೂಹಲ ಉತ್ಕಟ; ನಾಳೆ ಬೆಳಗ್ಗೆ ತಪ್ಪಿದರೆ ಮೇ 16ರಂದು ಮುಹೂರ್ತ


Team Udayavani, May 11, 2022, 7:15 AM IST

ಸಂಪುಟ ಕುತೂಹಲ ಉತ್ಕಟ; ನಾಳೆ ಬೆಳಗ್ಗೆ ತಪ್ಪಿದರೆ ಮೇ 16ರಂದು ಮುಹೂರ್ತ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಸಮಯ ಬಂದೇ ಬಿಟ್ಟಿದೆ. ಗುರುವಾರವೇ ಈ ಪ್ರಕ್ರಿಯೆ ನಡೆಯಲಿದ್ದು, ತಪ್ಪಿದರೆ ಮೇ 16ರಂದು ಆಗಲಿದೆ. ರಾಜ್ಯ ಸಚಿವ ಸಂಪುಟ ಸಭೆ ಗುರುವಾರಕ್ಕೆ ಮುಂದೂಡಿಕೆಯಾದ ಬೆನ್ನಲ್ಲೇ ಈ ಸುಳಿವು ಸಿಕ್ಕಿದ್ದು, ಆಕಾಂಕ್ಷಿಗಳು ಮತ್ತಷ್ಟು ಉಸಿರು ಬಿಗಿಹಿಡಿಯುವಂತೆ ಮಾಡಿದೆ.

ದಿಲ್ಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರಿಷ್ಠರನ್ನು ಇನ್ನೂ ಭೇಟಿ ಮಾಡಿಲ್ಲ. ಬುಧವಾರ ಬೆಳಗ್ಗೆ ಅವರು ಬೆಂಗಳೂರಿಗೆ ವಾಪಸಾಗಲಿ ದ್ದಾರೆ. ಆದರೆ ಬುಧವಾರದ ಸಂಪುಟ ಸಭೆಯನ್ನು ಗುರುವಾರಕ್ಕೆ ಮುಂದೂಡಿರುವುದು ಆಕಾಂಕ್ಷಿಗಳಲ್ಲಿ ನಿರೀಕ್ಷೆ ಗರಿಗೆದರಿಸಿದ್ದು, ಕೊನೆಯ ಕ್ಷಣದಲ್ಲಿ ವರಿಷ್ಠರಿಂದ ಸಂಪುಟ ಪುನಾರಚನೆ ಸಂದೇಶ ರವಾನೆಯಾಗಲಿದೆ ಎನ್ನಲಾಗಿದೆ.

ಬುಧವಾರ ಬೆಂಗಳೂರಿನಲ್ಲಿ ಯಾವುದೇ ತುರ್ತು ಕಾರ್ಯಕ್ರಮಗಳಿಲ್ಲ. ಆದರೂ ಎರಡು ಬಾರಿ ಮುಂದೂಡಲ್ಪಟ್ಟಿದ್ದ ಸಂಪುಟ ಸಭೆಯನ್ನು ಮತ್ತೆ ಗುರುವಾರ ಮಧ್ಯಾಹ್ನ 12ಕ್ಕೆ ಮುಂದೂಡ ಲಾಗಿದೆ. ಅಂದೇ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯಾಗಲಿದೆ; ಆಗದೆ ಇದ್ದರೆ ಮೇ 16ರಂದಂತೂ ಖಚಿತ ಎನ್ನಲಾಗಿದೆ.

ಮುಂದೂಡಿದ್ದೇಕೆ?
ಮೇ 5ರಂದು ಕರೆದಿದ್ದ ಸಚಿವ ಸಂಪುಟ ಸಭೆಯನ್ನು ಮೇ 11ರ ಮಧ್ಯಾಹ್ನ 12ಕ್ಕೆ ಮುಂದೂಡಲಾಗಿತ್ತು. ಬಳಿಕ ಸಿಎಂ ಬೊಮ್ಮಾಯಿ ದಿಲ್ಲಿಗೆ ತೆರಳುವ ಮುನ್ನ, ಮೇ 11ರಂದು ಬೆಳಗ್ಗೆ ನಡೆಯಲಿದ್ದ ಸಭೆಯನ್ನು ಸಂಜೆ 4ಕ್ಕೆ ಮುಂದೂಡಲಾಯಿತು. ಬುಧವಾರ ಬೆಳಗ್ಗೆ ಸಂಪುಟ ವಿಸ್ತರಣೆ ಆಗಲಿದ್ದು, ಅದಕ್ಕಾಗಿಯೇ ಸಭೆ ಮುಂದೂಡಲಾಗಿದೆ ಎನ್ನಲಾಯಿತು. ಮತ್ತೆ ಬುಧವಾರ ಸಂಜೆ 4ಕ್ಕೆ ನಡೆಯಬೇಕಿದ್ದ ಸಭೆಯನ್ನು ಗುರುವಾರ ಮಧ್ಯಾಹ್ನ 12ಕ್ಕೆ ಮುಂದೂಡಲಾಗಿದ್ದು, ಸಂಪುಟ ವಿಸ್ತರಣೆಯೇ ಕಾರಣ ಎಂಬ ಮಾತು ಕೇಳಿ ಬರುತ್ತಿದೆ.

ಮಾಂಡವೀಯ ಭೇಟಿ
ರಾಜ್ಯದಲ್ಲಿ ನ. 2ರಿಂದ 4ರ ವರೆಗೆ ನಡೆಯುವ ಇನ್ವೆಸ್ಟ್‌ ಕರ್ನಾಟಕ 2022 ಸಮಾವೇಶ ಸಂಬಂಧ ವಿವಿಧ ದೇಶಗಳ ರಾಯಭಾರಿಗಳು ಮತ್ತು ಹೈಕಮಿಷನರ್‌ಗಳ ಜತೆ ಸಭೆ ನಡೆಸುವುದಕ್ಕಾಗಿ ಮಂಗಳವಾರ ದಿಲ್ಲಿಗೆ ತೆರಳಿದ್ದ ಸಿಎಂ ಬೊಮ್ಮಾಯಿ ಕೇಂದ್ರ ಸಚಿವ ಮನಸುಖ ಮಾಂಡವೀಯ ಅವರನ್ನು ಮಾತ್ರ ಭೇಟಿ ಮಾಡಿದರು. ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಅಮಿತ್‌ ಶಾ ಅವರನ್ನು ಭೇಟಿ ಮಾಡಿಲ್ಲ ಎಂದು ಸ್ವತಃ ಸಿಎಂ ಹೇಳಿದ್ದಾರೆ.

ಎಲ್ಲವೂ ನಿಗೂಢ
ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಸಂಪುಟ ಪುನಾರಚನೆ ಆಗಬೇಕೆಂಬ ಬೇಡಿಕೆ ಇದ್ದರೂ ಸಂಪುಟ ವಿಸ್ತರಣೆಯೋ ಪುನಾರಚನೆಯೋ ಎನ್ನುವ ಬಗ್ಗೆ ಯಾರಿಗೂ ಸ್ಪಷ್ಟ ಮಾಹಿತಿ ಇಲ್ಲ. ಹಾಲಿ ಸಚಿವರಲ್ಲಿ ಆತಂಕ ಮನೆ ಮಾಡಿದ್ದರೆ, ಆಕಾಂಕ್ಷಿಗಳಲ್ಲಿ ನಿರೀಕ್ಷೆಗಳು ಗರಿಗೆದರಿವೆ.

ಗುರುವಾರದ ಅಚ್ಚರಿ
ಗುರುವಾರ ಸ್ಥಾನ ಆಕಾಂಕ್ಷಿಗಳು, ಹಾಲಿ ಸಚಿವ ರಿಗೆ ಅಚ್ಚರಿಯ ಸುದ್ದಿ ಸಿಗುವುದು ಬಹು ತೇಕ ಖಚಿತ. ಸಿಎಂ ಬೊಮ್ಮಾಯಿ ಅವರು ದಿಲ್ಲಿ ಭೇಟಿಯ ಸಂದರ್ಭ ವರಿಷ್ಠ ರನ್ನು ಭೇಟಿ ಮಾಡದೇ ಇದ್ದರೂ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಈಗಾಗಲೇ ಹಲವಾರು ಬಾರಿ ಅವರ ಜತೆ ಚರ್ಚೆ ನಡೆಸಿದ್ದಾರೆ. ಅಲ್ಲದೆ ಚುನಾವಣೆಯನ್ನು ಗಮನ ದಲ್ಲಿ ಇರಿಸಿಕೊಂಡು ವರಿಷ್ಠರು ಸಚಿವ ಸಂಪುಟ ಪುನಾರಚನೆಯ ಆಲೋಚನೆ ಇರಿಸಿ ಕೊಂಡಿದ್ದು, ಕೊನೆಯ ಕ್ಷಣದಲ್ಲಿ ಅಂತಿಮ ಪಟ್ಟಿಯನ್ನು ಕಳುಹಿಸಿ ಕೊಡುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.