ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಬಸವರಾಜ ಹೊರಟ್ಟಿ
Team Udayavani, May 18, 2022, 11:01 AM IST
ಬೆಂಗಳೂರು: ಸಭಾಪತಿ ಹಾಗೂ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಕೊಟ್ಟ ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ ಬಸವರಾಜ ಹೊರಟ್ಟಿ ಅವರು ತರಾತುರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ಬುಧವಾರ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು. ಸಿಎಂ ಬೊಮ್ಮಾಯಿ ಅವರು ಹೊರಟ್ಟಿ ಅವರನ್ನು ಬಿಜೆಪಿ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.
ಈ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ, ಸಿ.ಸಿ.ಪಾಟೀಲ್ ಉಪಸ್ಥಿತರಿದ್ದರು.
ಇದನ್ನೂ ಓದಿ:ನಾವು ಮುಳುಗುತ್ತಿದ್ದೇವೆಂದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ
ಸೋಮವಾರ (ಮೇ.16) ದಂದು ಹೊರಟ್ಟಿ ಅವರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಹಾಗೂ ಪರಿಷತ್ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರು.