30 ಕಲಾವಿದರಿಗೆ ಬಯಲಾಟ ಪ್ರಶಸ್ತಿ ಪ್ರದಾನ


Team Udayavani, Feb 28, 2019, 12:51 AM IST

12.jpg

ಬಾಗಲಕೋಟೆ: ರಾಜ್ಯದ ವಿವಿಧ ಜಿಲ್ಲೆಗಳ 30 ಹಿರಿಯ ಕಲಾವಿದರಿಗೆ ಕರ್ನಾಟಕ ರಾಜ್ಯ ಬಯಲಾಟ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನವನಗರದದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯ ಎಚ್‌.ಆರ್‌. ನಿರಾಣಿ, ಅಕಾಡೆಮಿ ಅಧ್ಯಕ್ಷ ಡಾ. ಶ್ರೀರಾಮ ಇಟ್ಟನ್ನವರ, ರಿಜಿಸ್ಟ್ರಾರ್‌ ಶಶಿಕಲಾ ಹುಡೇದ ಹಾಗೂ ವಿವಿಧ ಗಣ್ಯರು, ಕಲಾವಿದರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. 2017-18 ಹಾಗೂ 2018-19ನೇ ಸಾಲಿನ ಒಟ್ಟು 30 ಜನ ಕಲಾವಿದರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಗೌರವ ಪ್ರಶಸ್ತಿಯನ್ನು ತಲಾ ಐವರಿಗೆ, ತಲಾ 50 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ನೀಡಲಾಯಿತು. ವಾರ್ಷಿಕ ಪ್ರಶಸ್ತಿಗೆ ತಲಾ 10 ಜನ ಹಿರಿಯ ಕಲಾವಿರದನ್ನು ಆಯ್ಕೆ ಮಾಡಿದ್ದು, ತಲಾ 25 ಸಾವಿರ ನಗದು ಹಾಗೂ ಪ್ರಶಸ್ತಿ ನೀಡಿ
ಗೌರವಿಸಲಾಯಿತು.

2017-18ನೇ ಸಾಲಿನಲ್ಲಿ ಬೆಳಗಾವಿಯ ರಾಯಬಾಗ ತಾಲೂಕಿನ ಖೇಮಲಾಪುರದ ಸಂತ್ರಾಮ ಬಡಿಗೇರ (ಕಲಾ ಪ್ರಕಾರ: ಶ್ರೀಕೃಷ್ಣ ಪಾರಿಜಾತ), ಬಾಗಲಕೋಟೆಯ ಬೀಳಗಿ ತಾಲೂಕಿನ ಚಿಕ್ಕ ಹಂಚಿನಾಳ ಗ್ರಾಮದ ಶಿವಪ್ಪ ಕಾಟಪ್ಪನವರ(ಸಣ್ಣಾಟ), ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಬೊಮ್ಮಾಲಾಟಪುರದ ಶಂಕ್ರಪ್ಪ (ಸೂತ್ರಗೊಂಬೆಯಾಟ), ಮಂಡ್ಯದ ಕೋಣನೂರು ನಾಗರಾಜ (ತೊಗಲು ಗೊಂಬೆಯಾಟ), ಬಳ್ಳಾರಿಯ ಕಾರೇಕಲ್ಲು ವೀರಾಪುರದ ರಂಗಾರೆಡ್ಡಿ ವೈ. (ದೊಡ್ಡಾಟ) ಅವರಿಗೆ ಪ್ರದಾನ ಮಾಡಿದರು.

ಇದೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಬೆಳಗಾವಿ ರಾಮದುರ್ಗ ತಾಲೂಕಿನ ಹೊಸಕೋಟಿಯ ಪಾರವ್ವ ತಳಗೇರಿ (ಶ್ರೀಕೃಷ್ಣ ಪಾರಿಜಾತ), ಬಾಗಲಕೋಟೆ ರಬಕವಿ-ಬನಹಟ್ಟಿ ನಾವಲಗಿ ಗ್ರಾಮದ ಚಂದ್ರವ್ವ ಗುಡ್ಲಮನಿ (ಶ್ರೀಕೃಷ್ಣ ಪಾರಿಜಾತ) ಹಾಗೂ ಹೊಸೂರ ಗ್ರಾಮದ ಕಲ್ಲಪ್ಪ ತೇಲಿ (ಸಣ್ಣಾಟ) ಬೆಳಗಾವಿಯ ಬಸಪ್ಪ ಕಲ್ಲಪ್ಪ ಕುಂಬಾರ (ಶ್ರೀಕೃಷ್ಣ ಪಾರಿಜಾತ) ಮತ್ತು ಬಸವರಾಜ ಖೇಮಲಾಪುರ (ಸಣ್ಣಾಟ), ಹಾಸನದ ಎಸ್‌ .ನಾಗರಾಜ(ತೊಗಲುಗೊಂಬೆಯಾಟ), ಚಿಕ್ಕಮಗಳೂರಿನ ತರರೀಕೆರೆ ತಾಲೂಕಿನಹಾದಿಕೇರಿಯ ಎಚ್‌.ಬಿ.ರಮೇಶ (ದೊಡ್ಡಾಟ),ದಾವಣಗೆರೆಯ ಜಗಳೂರು ತಾಲೂಕಿನಹಿರೇಮಲ್ಲನಹೊಳೆ ಗ್ರಾಮದ ಎಚ್‌.ಆರ್‌.ರೇವಣ್ಣ (ದೊಡ್ಡಾಟ), ಧಾರವಾಡದ ತಿಮ್ಮರೆಡ್ಡಿ ಭೀಮರೆಡ್ಡಿ ಮೇಟಿ (ದೊಡ್ಡಾಟ), ಕಲಬುರಗಿ ಚಿತ್ತಾಪುರ ತಾಲೂಕಿನ ಕೊಲ್ಲೂರ ಗ್ರಾಮದ ರಾಮಲಿಂಗ ಪೇಟಿ (ದೊಡ್ಡಾಟ) ಅವರಿಗೆ ಪ್ರಶಸ್ತಿ ನೀಡಲಾಯಿತು.

2018ನೇ ಸಾಲಿನಲ್ಲಿ ವಿಜಯಪುರದ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಗುರಪಾದಯ್ಯ ಧಾರವಾಡಮಠ (ಶ್ರೀಕೃಷ್ಣ ಪಾರಿಜಾತ), ಶಿವಮೊಗ್ಗದ ಪರಿಸರ ಶಿವರಾಮ್‌ (ಸಣ್ಣಾಟ), ಬೆಳಗಾವಿಯ ಗೋಕಾಕ ತಾಲೂಕಿನ ಅರಭಾವಿ ಗ್ರಾಮದ ಕೆಂಪ್ಪ ಹರಿಜನ (ಸಣ್ಣಾಟ), ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನ ಎರೇನಹಳ್ಳಿ ಗ್ರಾಮದ ಬಿ.ಮಾರಣ್ಣ (ದೊಡ್ಡಾಟ), ಗದಗದ ಚನ್ನಬಸವಯ್ಯ ಕಾಡಸಿದ್ದೇಶ್ವರ ಮಠ (ದೊಡ್ಡಾಟ) ಹಾಗೂ ವಾರ್ಷಿಕ ಪ್ರಶಸ್ತಿಯನ್ನು ವಿಜಯಪುರದ ಬಸವನಬಾಗೇವಾಡಿ ತಾಲೂಕಿನ ತಳೇವಾಡ ಗ್ರಾಮದ ಶ್ರೀಶೈಲ ಹನಮಂತ ಬಳೂತಿ (ಶ್ರೀಕೃಷ್ಣ ಪಾರಿಜಾತ), ಬಾಗಲಕೋಟೆ ಮುಧೋಳ ತಾಲೂಕಿನ ದಾದನಟ್ಟಿ ಗ್ರಾಮದ ಸಿದ್ದಪ್ಪ ಕುರಿ (ಶ್ರೀಕೃಷ್ಣ ಪಾರಿಜಾತ), ಬೆಳಗಾವಿಯ ದಸ್ತಗೀರಸಾಬ್‌ ಮೌಲಾಶೇಖ್‌ (ಶ್ರೀಕೃಷ್ಣ ಪಾರಿಜಾತ), ವಿಜಯಪುರದ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಶಾಂತಾಪ್ಪ ಎಂ.ಕೋಟಿ(ಸಣ್ಣಾಟ), ಬೀದರದ ಮಹಾದೇವಮ್ಮ (ಸಣ್ಣಾಟ), ರಾಮನಗರದ ಲಕ್ಷ್ಮಮ್ಮ (ತೊಗಲುಗೊಂಬೆಯಾಟ) ಹಾವೇರಿಯ ಶಂಕರರ ಅರ್ಕಸಾಲಿ(ದೊಡ್ಡಾಟ), ಕೊಪ್ಪಳದ ಮುರನಾಳ ಗ್ರಾಮದ ಶಂಕ್ರಪ್ಪ ಕೊಪ್ಪಳ (ದೊಡ್ಡಾಟ), ರಾಯಚೂರಿನ ಸಣ್ಣಬಾಬು (ದೊಡ್ಡಾಟ), ಯಾದಗಿರಿಯ ಬಸನಗೌಡ ಮಾಸ್ತರ ತಳವಾರಗೇರಿ (ದೊಡ್ಡಾಟ) ಅವರಿಗೆ ಪ್ರದಾನ ಮಾಡಲಾಯಿತು.
 

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.