ಬೆಂಗಳೂರು: ಒತ್ತುವರಿ ತೆರವು ಕಾರ್ಯಾಚರಣೆ ಆರಂಭ

ಮಹದೇವಪುರ ವಲಯದಲ್ಲಿ ಗರ್ಜಿಸಿದ ಬುಲ್ಡೋಜರ್‌

Team Udayavani, Sep 13, 2022, 7:00 AM IST

ಕೊನೆಗೂ ಒತ್ತುವರಿ ತೆರವು ಶುರು; ಮಹದೇವಪುರ ವಲಯದಲ್ಲಿ ಗರ್ಜಿಸಿದ ಬುಲ್ಡೋಜರ್‌

ಬೆಂಗಳೂರು: ಹತ್ತು ದಿನಗಳ ಹಿಂದೆ ಸುರಿದ ಭಾರೀ ಮಳೆ, ಸಿಲಿಕಾನ್‌ ಸಿಟಿ ಬೆಂಗಳೂರಿನ ಮರ್ಯಾದೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಕಿದ್ದ ಬೆನ್ನಲ್ಲೇ, ರಾಜ್ಯ ಸರ್ಕಾರ ಈಗ ಒತ್ತುವರಿದಾರರ ಮೇಲೆ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.

ಸೋಮವಾರ ಬುಲ್ಡೋಜರ್‌ ಕಾರ್ಯಾಚರಣೆ ಶುರುಮಾಡಿದ್ದು, ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದವರಿಗೆ ಬಿಸಿ ಮುಟ್ಟಿಸಲು ಶುರು ಮಾಡಿದೆ. ಸೋಮವಾರ ಬೆಳಗ್ಗೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಡವ, ಬಲ್ಲಿದರೆನ್ನದೇ, ಯಾರ ಒತ್ತಡಕ್ಕೂ ಮಣಿಯದೇ ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದಿದ್ದರು. ಇದರ ಬೆನ್ನಲ್ಲೇ ಬಿಬಿಎಂಪಿ ಒಟ್ಟು 15 ವಲಯಗಳಲ್ಲಿ ಬುಲ್ಡೋಜರ್‌ ಮೂಲಕ ತೆರವು ಕಾರ್ಯಾಚರಣೆ ತೀವ್ರಗೊಳಿಸಿದೆ.

ಎಲ್ಲೆಲ್ಲಿ ಕಾರ್ಯಾಚರಣೆ?
ಮಹದೇವಪುರ ವ್ಯಾಪ್ತಿಯ ಚೆಲ್ಲಘಟ್ಟ, ಚಿನ್ನಪ್ಪನ ಹಳ್ಳಿ, ಬಸವಣ್ಣನಗರ, ಸ್ಪೈಸ್‌ ಗಾರ್ಡನ್‌ ಹಾಗೂ ಬಸವನಪುರ ವಾರ್ಡ್‌ನ ಎಸ್‌ಆರ ಲೇಟ್‌ನ ಕೇಂಬ್ರಿಡ್ಜ್ ಕಾಲೇಜು ಆವರಣದಲ್ಲಿ ಭೂಮಾಪಕರು ಗುರುತಿಸಿದ ಒತ್ತುವರಿಯನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಯಿತು. ಚಿನ್ನಪ್ಪನಹಳ್ಳಿಯಿಂದ ಮುನ್ನೇನಕೊಳಲು ಕೆರೆ ನಡುವಿನ ಎಇಸಿಎಸ್‌ ಲೇಔಟ್‌ ವ್ಯಾಪ್ತಿಯಲ್ಲಿ ಸಾಯಿ ಕಣ್ಣಿನ ಆಸ್ಪತ್ರೆಯ ಕಾಂಪೌಂಡ್‌ ಗೋಡೆ, ರಾಘವ ಸೂಪರ್‌ ಮಾರ್ಕೆಟ್‌ ಸೇರಿ 3 ಕಟ್ಟಡಗಳು, 4 ಕಾಂಪೌಂಡ್‌ ಗೋಡೆ ಹಾಗೂ ರಸ್ತೆಯನ್ನು ತೆರವು ಮಾಡಿ ವಶಕ್ಕೆ ಪಡೆಯಲಾಯಿತು.

ಚೆಲ್ಲಘಟ್ಟ ವ್ಯಾಪ್ತಿಯಲ್ಲಿ ಪ್ರಸ್ಟೀಜ್‌ ಸಂಸ್ಥೆ ವಶದಲ್ಲಿದ್ದ ಖಾಲಿ ಜಾಗ, ಕಾಂಪೌಂಡ್‌ ಗೋಡೆ, ಹೂಡಿ ಬಳಿ ಗೋಪಾಲನ್‌ ಶಾಲೆ, ಮಹಾವೀರ ಅಪಾರ್ಟ್‌ಮೆಂಟ್‌ನ ಕಾಂಪೌಂಡ್‌ ಗೋಡೆ, ಸ್ಪ್ರೆ„ಸ್‌ ಗಾರ್ಡನ್‌ ಬಳಿ 4 ಕಾಂಪೌಂಡ್‌ ಗೋಡೆಗಳು ಹಾಗೂ ರಸ್ತೆ, ಕೆಆರ್‌ ಪುರದ ಬಸವನಪುರ ವಾರ್ಡ್‌ನ ಎಸ್‌ಆರ್‌ ಲೇಔಟ್‌ ವ್ಯಾಪ್ತಿಯ ಕೇಂಬ್ರಿಡ್ಜ್ ಕಾಲೇಜು ಆವರಣದಲ್ಲಿ 77 ಮೀ. ಉದ್ದ ಹಾಗೂ 2.6 ಮೀ ಅಗಲದ ಮಳೆ ನೀರುಗಾಲುವೆಗೆ ಅಳವಡಿಸಿದ್ದ ಸ್ಲಾéಬ್‌ ಅನ್ನು ತೆರವುಗೊಳಿಸಲಾಗಿದೆ.

ರಾಜಕಾಲುವೆ ಮೇಲೆ ಮೈದಾನ
ಮಹದೇವಪುರದ ಬಸವನಗರದ ಗೋಪಾಲನ್‌ ಕಾಲೇಜು ಆವರಣದಲ್ಲಿದ್ದ ರಾಜಕಾಲುವೆಯನ್ನು ಒತ್ತು ಮಾಡಲಾಗಿದೆ. ಈ ಜಾಗದಲ್ಲಿ ಮೈದಾನ ನಿರ್ಮಿಸಿ ರಾಜಕಾಲುವೆಯ ಕುರುಹೇ ಇಲ್ಲದಂತೆ ಮಾಡಲಾಗಿತ್ತು. ಆ ಜಾಗದಲ್ಲಿದ್ದ ರಾಜಕಾಲುವೆಗ ಜಾಗವನ್ನು ಮಾರ್ಕಿಂಗ್‌ ಮಾಡಿ ವಶಕ್ಕೆ ಪಡೆಯಲಾಯಿತು. ಇದೇ ವೇಳೆ, ಸ್ಥಳೀಯ ನಿವಾಸಿಗಳು ಮುನ್ಸೂಚನೆ ಇಲ್ಲದೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜಿ ಇಲ್ಲವೇ ಇಲ್ಲ
ಸಿಲಿಕಾನ್‌ ಸಿಟಿಯಲ್ಲಿ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಯಾವುದೇ ಮುಲಾಜಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜಕಾಲುವೆ ಮೇಲೆ ಕಟ್ಟಡ,ಮನೆ ಕಟ್ಟಿರುವವರು, ಯಾರು ಕಾಲುವೆ ನೀರನ್ನು ಹರಿಸಲು ತೊಂದರೆ ಮಾಡಿದ್ದಾರೆ, ಕೆಲವರು ರಾಜಕಾಲುವೆಯನ್ನು ಮುಚ್ಚಿದ್ದಾರೆ. ಮಳೆ ನೀರು ಚರಂಡಿಗೆ ಅಡ್ಡಿಯಾಗಿದ್ದರೆ, ಅವುಗಳನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಈ ಬಾರಿಯ ಮಳೆಯಿಂದಾಗಿ ಪ್ರವಾಹ ಉಂಟಾಗಿ ಐಟಿ-ಬಿಟಿ ಸೇರಿದಂತೆ ಎಲ್ಲರಿಗೂ ತೊಂದರೆಯಾಗಿತ್ತು. ಈ ಮಧ್ಯೆ ಹಲವಾರು ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗಿ ನಿರ್ದೇಶನ ಪಡೆಯಲಾಗಿದೆ. ಕೋರ್ಟ್‌ನಲ್ಲೂ ಗಂಭೀರವಾಗಿ ಇವುಗಳ ಮಾಹಿತಿಯನ್ನು ನೀಡಲಾಗುವುದು. ಈ ಬಾರಿ ದೊಡ್ಡ ಪ್ರಮಾಣದಲ್ಲಿ ಅತಿಕ್ರಮಣ ತೆರವುಗೊಳಿಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.