ಬಿಬಿಎಂಪಿ ನೂತನ ಮೇಯರ್‌ ಆಗಿ ಸಂಪತ್‌ರಾಜ್‌ ಆಯ್ಕೆ


Team Udayavani, Sep 29, 2017, 7:15 AM IST

bbmp.jpg

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ 51ನೇ ಮೇಯರ್‌ ಆಗಿ ಕಾಂಗ್ರೆಸ್‌ನ ಸಂಪತ್‌ ರಾಜ್‌ ಹಾಗೂ 50ನೇ ಉಪಮೇಯರ್‌ ಆಗಿ ಜೆಡಿಎಸ್‌ನ ಪದ್ಮಾವತಿ ನರಸಿಂಹಮೂರ್ತಿ ಆಯ್ಕೆಯಾಗಿದ್ದಾರೆ. ಇದರಿಂದ ಮೇಯರ್‌ ಆಯ್ಕೆ ವಿಚಾರದಲ್ಲಿ ಸಂಸದಡಿ.ಕೆ.ಸುರೇಶ್‌ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಗೆ ಹಿನ್ನಡೆಯಾದಂತಾಗಿದೆ. ಜೆಡಿಎಸ್‌ ಜತೆ ಮೈತ್ರಿ ಪಕ್ಕಾ ಆಗಿ ಮೇಯರ್‌ ಅಭ್ಯರ್ಥಿಆಯ್ಕೆ ವಿಚಾರ ಬಂದಾಗ ತಮ್ಮ ಕ್ಷೇತ್ರದ ವ್ಯಾಪ್ತಿಗೆ ಬರುವ ರಾಜರಾಜೇಶ್ವರಿನಗರ, ಬೆಂಗಳೂರು ದಕ್ಷಿಣ ಕ್ಷೇತ್ರದ ವ್ಯಾಪ್ತಿಗೆ ಬರುವ ವಾರ್ಡ್‌ ಪ್ರತಿನಿಧಿಸುವವರಿಗೆ ಅವಕಾಶ ಕೊಡಬೇಕೆಂದು ಡಿಕೆಎಸ್‌ ಪಟ್ಟು ಹಿಡಿದಿದ್ದರು. ಅದೇ ರೀತಿ ದಿನೇಶ್‌ ಗುಂಡೂರಾವ್‌ ತಮ್ಮ ಕ್ಷೇತ್ರದ ಗೋವಿಂದರಾಜು ಅವರ ಪರ ಪಟ್ಟು ಹಿಡಿದಿದ್ದರು. ಡಿ.ಕೆ.ಸುರೇಶ್‌ ಅವರು ಈ ಸಂಬಂಧ ಬಹಿರಂಗವಾಗಿ ಹೇಳಿಕೆ ನೀಡಿದರೆ, ದಿನೇಶ್‌ ಗುಂಡೂರಾವ್‌ ಆಂತರಿಕವಾಗಿ ಪಕ್ಷದ ನಾಯಕರ ಮೇಲೆ ಒತ್ತಡ ಹಾಕುತ್ತಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಕರೆದಿದ್ದ ಸಭೆಯಲ್ಲೂ ಡಿ.ಕೆ.ಸುರೇಶ್‌,
ಬೇಗೂರು ವಾರ್ಡ್‌ನ ಆಂಜನಪ್ಪ ಅವರಿಗೆ ಮೇಯರ್‌ ಸ್ಥಾನ ಕೊಡಬೇಕೆಂದು ಪ್ರತಿಪಾದಿಸಿದ್ದರು. ಜತೆಗೆ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಸಹ ತಮ್ಮ
ವ್ಯಾಪ್ತಿಯ ಲಕ್ಷ್ಮಿದೇವಿನಗರ ವಾರ್ಡ್‌ನ ವೇಲುನಾಯಕರ್‌ ಅವರನ್ನು ಪರಿಗಣಿಸಬಹುದೆಂದು ಹೇಳಿದ್ದರು. ಇವರಿಗೆ
ರಾಜ್ಯಸಭೆ ಸದಸ್ಯ ಕೆ.ಸಿ.ರಾಮಮೂರ್ತಿ, ಕೆ.ಆರ್‌.ಪುರಂ ಶಾಸಕ ಭೈರತಿ ಸುರೇಶ್‌, ಯಶವಂತಪುರ ಶಾಸಕ ಎಸ್‌
.ಟಿ.ಸೋಮಶೇಖರ್‌ ಅವರ ಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಒಂದು ಹಂತದಲ್ಲಿ ನಗರದ ಹೊರಭಾಗದ ವಾರ್ಡ್‌ಗಳ ಸದಸ್ಯರಿಗೆ ಆದ್ಯತೆ ನೀಡದಿದ್ದರೆ ತಾವು ಮೇಯರ್‌ ಚುನಾವಣೆಯ ಮತದಾನದಲ್ಲೇ ಪಾಲ್ಗೊಳ್ಳುವುದಿಲ್ಲ ಎಂಬ ಬೆದರಿಕೆ ಸಹ ಹಾಕಿದ್ದರು.

ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರ ಜತೆಗಿನ ಸಭೆಯ ನಂತರವೂ ಡಿ.ಕೆ.ಸುರೇಶ್‌, “ನಾನು ನನ್ನ ವಾದ ಮಂಡಿಸಿದ್ದೇನೆ. ನೋಡೋಣ’ ಎಂದಷ್ಟೇ ಹೇಳಿದರು. ಅಂತಿಮವಾಗಿ ಡಿ.ಕೆ.ಸುರೇಶ್‌ ಅವರು ಸೂಚಿಸಿದ ಅಭ್ಯರ್ಥಿಯನ್ನಾಗಲಿ, ದಿನೇಶ್‌ ಗುಂಡೂರಾವ್‌ ಸೂಚಿಸಿದ ಅಭ್ಯರ್ಥಿಯನ್ನಾಗಲಿ ಮೇಯರ್‌ ಸ್ಥಾನಕ್ಕೆ ಪರಿಗಣಿಸಲಿಲ್ಲ. ಬದಲಿಗೆ ಸಂಪತ್‌ರಾಜ್‌ ಅವರನ್ನು ಆಯ್ಕೆ ಮಾಡಲಾಯಿತು.

ಎಂಜಿನಿಯರ್‌: ಸಂಪತ್‌ರಾಜ್‌ ಎಂಜಿನಿಯರಿಂಗ್‌ ಪದವೀಧರರಾಗಿದ್ದು ಯುವಕರಾಗಿದ್ದಾರೆ. ಚುನಾವಣಾ
ವರ್ಷವಾದ್ದರಿಂದ ಅಭಿವೃದಿಟಛಿ ಯೋಜನೆಗಳ ಮೇಲೆ ನಿಗಾವಹಿಸಿ ಪಕ್ಷಕ್ಕೆ ಒಳ್ಳೆಯ ಹೆಸರು ತರಬೇಕು. ಜತೆಗೆ
ಪಾಲಿಕೆಯಲ್ಲೂ ಪ್ರತಿಪಕ್ಷದ ಸದಸ್ಯರು ಹೆಚ್ಚಾಗಿರುವುದರಿಂದ ಸಮರ್ಥವಾಗಿ ನಿಭಾಯಿಸಬೇಕೆಂಬ ದೃಷ್ಟಿಯಿಂದ ಸಂಪತ್‌
ರಾಜ್‌ ಅವರಿಗೆ ಅಂತಿಮವಾಗಿ ಮಣೆ ಹಾಕಲಾಯಿತು. ಮುಖ್ಯಮಂತ್ರಿಯವರ ತೀರ್ಮಾನಕ್ಕೆ ರಾಮಲಿಂಗಾರೆಡ್ಡಿ,
ಕೆ.ಜೆ.ಜಾರ್ಜ್‌, ಕೃಷ್ಣಬೈರೇಗೌಡರು ಸಮ್ಮತಿ ಸೂಚಿಸಬೇಕಾಯಿತು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.