ಬಿಬಿಎಂಪಿ ಮೇಯರ್ ಫೈಟ್: ನಾಮಪತ್ರ ಹಿಂಪಡೆದ ಬಿಜೆಪಿಯ ಪದ್ಮನಾಭ ರೆಡ್ಡಿ
Team Udayavani, Oct 1, 2019, 11:55 AM IST
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ ನಡೆಯುತ್ತಿದ್ದು, ಇಬ್ಬರು ಬಿಜೆಪಿ ಅಭ್ಯರ್ಥಿಗಳ ಪೈಕಿ ಪದ್ಮನಾಭ ರೆಡ್ಡಿ ತನ್ನ ನಾಮಪತ್ರ ಹಿಂಪಡೆದಿದ್ದಾರೆ.
ಕಾಂಗ್ರೆಸ್ ನ ಸತ್ಯನಾರಾಯಣ ಅವರು ಎರಡು ನಾಮಪತ್ರ ಸಲ್ಲಿಸಿದ್ದು, ಎರಡನ್ನೂ ಅಂಗೀಕರಿಸಿಲಾಗಿದೆ. ಬಿಜೆಪಿಯ ಗೌತಮ್ ಕುಮಾರ್ ಅವರು ಎರಡು ನಾಮಪತ್ರ ಸಲ್ಲಿಕೆ ಮಾಡಿದ್ದು, ಅವರೆಡು ಕ್ರಮಬದ್ಧವಾಗಿರುವ ಕಾರಣ ಅಂಗೀಕರಿಸಲಾಗಿದೆ. ಬಿಜೆಪಿಯ ಮತ್ತೊಬ್ಬ ಅಭ್ಯರ್ಥಿ ಪದ್ಮನಾಭ ರೆಡ್ಡಿ ಮೂರು ನಾಮಪತ್ರ ಸಮರ್ಪಕವಾಗಿತ್ತು. ಆದರೆ ನಂತರ ಪದ್ಮನಾಭ ರೆಡ್ಡಿಯವರು ನಾಮಪತ್ರ ಹಿಂಪಡೆದರು.
ಚುನಾವಣೆ ಬಹಿಷ್ಕಾರ: ಜೆಡಿಎಸ್ ನ ಮಂಜುಳಾ ನಾರಾಯಣ ಸ್ವಾಮಿ ಮತ್ತು ದೇವದಾಸ್ ಅವರು ಚುನಾವಣೆಯನ್ನು ಬಹಿಷ್ಕರಿಸಿ ಹೊರನಡೆದರು.
ಇಂದಿನ ಚುನಾವಣಾ ಪ್ರಕ್ರಿಯೆಯಲ್ಲಿ ಒಟ್ಟು 249 ಸದಸ್ಯರು ಭಾಗವಹಿಸಿದ್ದು, ನಂತರ ಇಬ್ಬರು ಜೆಡಿಎಸ್ ಸದಸ್ಯರು ಹೊರನಡೆದ ಕಾರಣ ಸಂಖ್ಯಾಬಲ 247ಕ್ಕೆ ಇಳಿಯಿತು.
ಬಿಬಿಎಂಪಿಯ ಕೌನ್ಸಿಲ್ ಕಟ್ಟಡದಲ್ಲಿ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ ಅವರ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು.
ಯಾವುದೇ ನಾಮಪತ್ರಗಳು ಬಾರದ ಕಾರಣ ನಾಲ್ಕು ಸ್ಥಾನಗಳಿಗೆ ನಡೆಯಬೇಕಿದ್ದ ಸ್ಥಾಯಿ ಸಮಿತಿ ಚುನಾವಣೆ ಮುಂದೂಡಲಾಗಿದೆ ಎಂದು ಹರ್ಷ ಗುಪ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ