ಬೀಜ-ಗೊಬ್ಬರಕ್ಕೆ ಅಭಾವ ಸೃಷ್ಟಿಸಿದರೆ ತಕ್ಕ ಶಾಸ್ತಿ : ಬಿ.ಸಿ.ಪಾಟೀಲ್‌


Team Udayavani, May 6, 2022, 6:20 AM IST

ಬೀಜ-ಗೊಬ್ಬರಕ್ಕೆ ಅಭಾವ ಸೃಷ್ಟಿಸಿದರೆ ತಕ್ಕ ಶಾಸ್ತಿ : ಬಿ.ಸಿ.ಪಾಟೀಲ್‌

ರಾಣಿಬೆನ್ನೂರು : ರಾಜ್ಯದ ಯಾವುದೇ ಭಾಗದಲ್ಲಿ ಬೀಜ-ಗೊಬ್ಬರ – ಔಷಧಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಮತ್ತು ಕೃತಕ ಅಭಾವ ಸೃಷ್ಟಿಸಿ ರೈತರನ್ನು ಸಂಕಷ್ಟಕ್ಕೀಡು ಮಾಡುವ ಅಂಗಡಿದಾರರ ಮೇಲೆ ಮುಲಾಜಿಲ್ಲದೆ ಅಗತ್ಯ ಕ್ರಮ ಕೈಗೊಂಡು ಪರವಾನಿಗೆ ರದ್ದುಪಡಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ಎಚ್ಚರಿಕೆ ನೀಡಿದರು.

ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಉಪ ಕೃಷಿ ನಿರ್ದೇಶಕರು-2 ಕಾರ್ಯಾಲಯ ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ರೈತರನ್ನು ವಂಚಿಸುವ, ಮೋಸ ಮಾಡುವ ಅಂಗಡಿದಾರರು ಎಷ್ಟೇ ಪ್ರಭಾವಿಗಳಾಗಿರಲಿ ಯಾವುದೇ ರಾಜಿ ಸಂಧಾನವಿಲ್ಲದೇ ಅವರ ಮೇಲೆ ಕಠಿನ ಕಾನೂನು ಕ್ರಮ ಕೈಗೊಳ್ಳುವ ಮೂಲಕ ರೈತರ ಹಿತ ಕಾಪಾಡುವುದಾಗಿ ಹೇಳಿದರು.
ರೈತರು ಸದಾ ಸಂಕಷ್ಟದಲ್ಲಿದ್ದು, ನೋವಿನಲ್ಲಿಯೇ ನರಳುತ್ತಿದ್ದಾರೆ. ಚಳಿ-ಮಳೆ, ಬಿಸಿಲೆನ್ನದೇ ಕಷ್ಟಪಟ್ಟು ದುಡಿದು ಅನ್ನ ನೀಡುವ ರೈತರು ತಾವು ಬೆಳೆದ ಬೆಳೆಗಳಿಗೆ ಅಗತ್ಯ ಬೆಲೆ ಲಭಿಸದೆ ಒಂದಿಲ್ಲೊಂದು ರೀತಿಯಲ್ಲಿ ಬಳಲುತ್ತಿದ್ದಾರೆ. ಈ ಕಾರಣಕ್ಕಾಗಿಯೇ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಉಚಿತ ಮತ್ತು ರಿಯಾಯಿತಿ ಬೆಲೆಯಲ್ಲಿ ಬೀಜ, ಗೊಬ್ಬರ ಮತ್ತು ಔಷಧ  ಮತ್ತಿತರ ಕೃಷಿ ಉಪಕರಣಗಳನ್ನು ನೀಡುವುದರ ಮೂಲಕ ರೈತರನ್ನು ಉತ್ತೇಜಿಸಲಾಗುತ್ತದೆ ಎಂದರು.

50 ಕೆ.ಜಿ. ಡಿಎಪಿ ಗೊಬ್ಬರಕ್ಕೆ 2,500ರೂ., ಎಂಒಪಿ ಗೊಬ್ಬರಕ್ಕೆ 759 ರೂ., ಕಾಂಪ್ಲೆಕ್ಸ್‌ ಗೊಬ್ಬರಕ್ಕೆ 1,734ರೂ. ಹಾಗೂ ಯೂರಿಯಾ ಗೊಬ್ಬರಕ್ಕೆ 1,400ರೂ. ಸಬ್ಸಿಡಿಯನ್ನು ಕೇಂದ್ರ ಸರಕಾರ ರೈತರಿಗೆ ನೀಡುತ್ತಿದೆ. ರೈತ ಶಕ್ತಿಯುತವಾಗಿ ಬಾಳಬೇಕು. ಆತ ಬೆಳೆದ ಬೆಳೆಗಳಿಗೆ ಹೆಚ್ಚಿನ ಬೆಲೆ ನೀಡಬೇಕೆಂಬ ಸರಕಾರದ ಯೋಜನೆಗೆ ಅನೇಕರಿಂದ ಬೆಂಬಲ ದೊರೆತಿದೆ ಎಂದರು.

ರೈತರು ಬೆಳೆದ ಬೆಳೆಗಳನ್ನು ಆಹಾರ ಸಂಸ್ಕರಣ ಘಟಕ ಸ್ಥಾಪಿಸಿ ಮಾರಾಟ ಮಾಡುವ ಘಟಕಗಳಿಗೆ ಹಾಗೂ ರೈತರು ಉಪ ಕಸುಬುಗಳನ್ನು ಮಾಡಲು ಶೇ.35 ರಿಯಾಯಿತಿ ನೀಡಲಾಗುತ್ತದೆ. ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದ ರೈತರಿಗೆ ರೈತ ಶಕ್ತಿ ಯೋಜನೆಯಡಿ ಡೀಸೆಲ್‌ ಸಬ್ಸಿಡಿ, ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ, 8 ರಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಸ್ಕಾಲರ್‌ಶಿಪ್‌ ಯೋಜನೆ ಜಾರಿಗೊಳಿಸಲಾಗಿದೆ ಎಂದರು.

ಕೃಷಿ ಇಲಾಖೆಯನ್ನು ಬಲಪಡಿಸಲು ಹಾಗೂ ಭ್ರಷ್ಟಾಚಾರ ರಹಿತ ಇಲಾಖೆ ಮಾಡಲು ಈಗಾಗಲೇ ರಾಜ್ಯದಲ್ಲಿ 765 ಪ್ರಕರಣಗಳನ್ನು ದಾಖಲಿಸಿದ್ದು, 148 ಅಂಗಡಿಗಳ ಲೈಸೆನ್ಸ್‌ ರದ್ದುಪಡಿಸಲಾಗಿದೆ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.