ರಾಜೀನಾಮೆ ನೀಡಿದ್ದಕ್ಕೆ ಕ್ಷಮೆ ಕೇಳಿದ ಬಿ.ಸಿ.ಪಾಟೀಲ
Team Udayavani, Jul 8, 2019, 3:05 AM IST
ಹಾವೇರಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಕ್ಷೇತ್ರದ ಮತದಾರರಲ್ಲಿ ಕ್ಷಮೆ ಯಾಚಿಸಿದ್ದಾರೆ. “ಆತ್ಮೀಯ ಬಂಧುಗಳೇ, ರಾಜಕೀಯ ಗೊತ್ತಿಲ್ಲದ ನನಗೆ ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದಾಗ ಮೂರು ಬಾರಿ ಶಾಸಕನಾಗಿ ಆಯ್ಕೆ ಮಾಡಿದ್ದೀರಿ.
ಈವರೆಗೂ ನಾನು ನನ್ನ ಕೈಲಾದ ಅಭಿವೃದ್ಧಿ ಕೆಲಸವನ್ನು ಸರ್ಕಾರದಿಂದ ಮಾಡಿ ತಾಲೂಕು ಅಭಿವೃದ್ಧಿ ಕಡೆಗೆ ದಾಪುಗಾಲಿಟ್ಟಿದೆ. ಈಗ ತಮ್ಮೆಲ್ಲರಿಗೂ ಗೊತ್ತಿರುವ ಹಾಗೆ ನಮ್ಮ ತಾಲೂಕಿಗೆ ಸಾಕಷ್ಟು ಅನ್ಯಾಯ ಮಾಡಿರುವ ಕಾಂಗ್ರೆಸ್ ಪಕ್ಷ, ಬೇರೆಯವರಿಗೆ ಮಂತ್ರಿ ಪದವಿ ಕೊಟ್ಟು ನಮ್ಮ ತಾಲೂಕಿಗೆ ದೊಡ್ಡ ದ್ರೋಹ ಮಾಡಿದೆ.
ಇದರಿಂದ ತಾಲೂಕಿನ ಸರ್ವತೋಮುಖ ಅಭಿವೃದ್ಧಿ ಕುಂಠಿತವಾಗಿದೆ. ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ತಮ್ಮ ಕ್ಷಮೆ ಇರಲಿ. ಮುಂದಿನ ದಿನಗಳಲ್ಲಿ ತಮ್ಮ ಸಲಹೆ ಸೂಚನೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ. ಸದಾ ನಿಮ್ಮ ಆಶೀರ್ವಾದ ಬೇಕೆಂದು ಕೇಳಿ ಮತ್ತೂಮ್ಮೆ ತಮ್ಮಲ್ಲಿ ಕ್ಷಮೆ ಕೇಳಿ ತಮ್ಮ ಆಶೀರ್ವಾದ ಬೇಡುತ್ತಿದ್ದೇನೆ’ ಎಂದು ಬಿ.ಸಿ. ಪಾಟೀಲ ಉಲ್ಲೇಖೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು