ಸಚಿವರಾಯಿತು, ಈಗ ಶಾಸಕರಿಗೂ ಟಾಸ್ಕ್; ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲ್ಲಿಸಿಕೊಂಡು ಬರಲೇಬೇಕು

ನಿರೀಕ್ಷಿತ ಗುರಿ ಸಾಧನೆ ಮಾಡದಿದ್ದರೆ ಅಧಿಕಾರಕ್ಕೆ ಕುತ್ತು

Team Udayavani, Mar 24, 2024, 12:07 AM IST

Congressಸಚಿವರಾಯಿತು, ಈಗ ಶಾಸಕರಿಗೂ ಟಾಸ್ಕ್; ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲ್ಲಿಸಿಕೊಂಡು ಬರಲೇಬೇಕು

ಬೆಂಗಳೂರು: ಸಚಿವರಿಗೆ ನೀಡಿದಂತೆಯೇ ಈಗ ನಿಗಮ-ಮಂಡಳಿಗಳ ಅಧ್ಯಕ್ಷರು- ಉಪಾಧ್ಯಕ್ಷ ರಿಗೂ ಟಾಸ್ಕ್ ನೀಡಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲೇ ಬೇಕು. ಇಲ್ಲದಿದ್ದರೆ ಕುರ್ಚಿ ಖಾಲಿ ಮಾಡಬೇಕಾಗುತ್ತದೆ ಎಂದು ಎರಡು ದಿನಗಳ ಹಿಂದಷ್ಟೇ ಕಾಂಗ್ರೆಸ್‌ ನಾಯಕರು ಟಾಸ್ಕ್ ನೀಡಿದ್ದರು. ಹೆಚ್ಚು-ಕಡಿಮೆ ಅಂಥದ್ದೇ ಎಚ್ಚರಿಕೆ ಸಂದೇಶವನ್ನು ಈಗ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರಿಗೂ ರವಾನಿಸಲಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ನಿರ್ದೇಶಕರೊಂದಿಗೆ ನಡೆದಸಭೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ಕಾಡಿ-ಬೇಡಿ ಅಧಿಕಾರ ಭಾಗ್ಯ ಪಡೆಯುವಲ್ಲಿ ಯಶಸ್ವಿಯಾದ ನಿಗಮ-ಮಂಡಳಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಈಗ ಅದನ್ನು ಅನುಭವಿಸುವಷ್ಟರಲ್ಲಿ ಚುನಾವಣೆ ಟಾಸ್ಕ್ ಎದುರಾಗಿದೆ. ಒಂದು ವೇಳೆ ನಿರೀಕ್ಷಿತ ಗುರಿ ಸಾಧನೆ ಸಾಧ್ಯವಾಗದಿದ್ದರೆ ತಮ್ಮ ಅಧಿಕಾರಕ್ಕೇ ಕುತ್ತು ಬರಲಿದೆ ಎಂಬ ಆತಂಕ ಕಾಡುತ್ತಿದೆ.

ಲೋಕಸಭಾ ಚುನಾವಣೆಯಲ್ಲಿ ನಿಗಮ- ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಸಹಿತ ಪದಾಧಿಕಾರಿಗಳ ಸಾಮರ್ಥ್ಯ ಪ್ರದರ್ಶನವನ್ನೂ ಒರೆಗೆ ಹಚ್ಚಲಾಗುತ್ತದೆ. ತಮ್ಮ ವ್ಯಾಪ್ತಿಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಸಾಧ್ಯವಾದಷ್ಟು ಲೀಡ್‌ (ಮುನ್ನಡೆ) ಬರುವಂತೆ ಶ್ರಮಿಸಬೇಕು. ಅಧಿಕಾರ ಕೊಟ್ಟಿದ್ದು ಪಕ್ಷಕ್ಕೆ ಶಕ್ತಿ ತುಂಬಲಿ ಅಂತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ ನೀಡಿದರು ಎನ್ನಲಾಗಿದೆ.

ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯುವ 14 ಕ್ಷೇತ್ರಗಳ ಲೋಕಸಭಾ ಚುನಾವಣೆ ವ್ಯಾಪ್ತಿಯ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ಮಾಜಿ ಶಾಸಕರೊಂದಿಗೂ ನಾಯಕರು ಸಮಾಲೋಚನೆ ನಡೆಸಿ ದರು. ಈ ವೇಳೆ ಪ್ರತಿಯೊಬ್ಬರೂ ಚುನಾವಣೆ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಬೇಕು. ಅನಗತ್ಯವಾಗಿ ಕ್ಷೇತ್ರಬಿಟ್ಟು ಹೋಗಬಾರದು. ಅಲ್ಲಿಯೇ ಇದ್ದು, ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲ ರೀತಿಯ ಕಾರ್ಯತಂತ್ರ ರೂಪಿಸಬೇಕು ಎಂದು ಸೂಚಿಸಿದ್ದಾರೆ.

ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಭಿನ್ನಾಭಿಪ್ರಾಯ, ಮನಸ್ತಾಪಗಳಿ ದ್ದರೂ ಅವುಗಳನ್ನು ಬದಿಗೊತ್ತಿ ಗೆಲುವಿಗೆ ಶ್ರಮಿಸಬೇಕು. ಗ್ಯಾರಂಟಿ ಯೋಜನೆಗಾಗಿಯೇ ಸಾವಿರಾರು ಕೋ.ರೂ. ನೀಡಲಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಅನುದಾನ ವನ್ನೂ ಕೊಡಲಾಗುತ್ತಿದೆ. ಪಕ್ಷವು ತಮಗೆ ಬೇಕಾದ್ದನ್ನು ನೀಡಿದೆ. ಅದಕ್ಕೆ ಪ್ರತಿಯಾಗಿ ಶಕ್ತಿ ತುಂಬುವ ಕೆಲಸ ಮಾಡಬೇಕೆಂದು ಹೇಳಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮುನ್ನಡೆ ಬರದಿದ್ದರೆ ಕೆಲಸ ಮಾಡಿಲ್ಲ ಎಂದರ್ಥ
ಇನ್ನು ಇದಕ್ಕೂ ಮುನ್ನ ನಡೆದ ಗ್ಯಾರಂಟಿ ಅನುಷ್ಠಾನ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್‌, ನಾವು ಎಷ್ಟೇ ದೊಡ್ಡವರಾದರೂ ಕಾರ್ಯಕರ್ತರು. ಹೀಗಾಗಿ ಸ್ವಾಭಿಮಾನ ಬಿಡಬೇಕು. ನೀವು ನಿಮ್ಮ ಬೂತ್‌ಗಳಲ್ಲಿ ಪಕ್ಷಕ್ಕೆ ಮುನ್ನಡೆ ತರಲಿಲ್ಲವಾದರೆ ನೀವು ನಾಯಕರಲ್ಲ, ನೀವು ಕೆಲಸ ಮಾಡಿಲ್ಲ ಎಂದೇ ಅರ್ಥ. ಹೀಗಾಗಿ ನೀವು ನಿಮ್ಮ ಬೂತ್‌ಗಳಲ್ಲಿ ಪಕ್ಷಕ್ಕೆ ಮುನ್ನಡೆ ತರುವ ಮೂಲಕ ಪಕ್ಷ ಬಲಪಡಿಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.