ಬೇಡ ಜಂಗಮ ವೀರಶೈವರು ಪರಿಶಿಷ್ಟರಲ್ಲ: ಎಸ್ಸಿ.ಎಸ್ಟಿ ಕಲ್ಯಾಣ ಸಮಿತಿ ಅಧ್ಯಕ್ಷ ಕುಮಾರಸ್ವಾಮಿ
ಮೀಸಲಾತಿ ಕೇಳುವುದು ಹೊಸ ರೂಪಾಂತರಿ ಅಟ್ರಾಸಿಟಿ ಪ್ರಕರಣ
Team Udayavani, Aug 1, 2022, 10:12 PM IST
ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯದ ಗುರು ಸ್ಥಾನದಲ್ಲಿರುವ ಬೇಡ ಜಂಗಮರು ಪರಿಶಿಷ್ಟ ಜಾತಿಗೆ ಸೇರಿದವರಲ್ಲ. ಅವರಿಗೆ ಎಸ್ಸಿ ಸರ್ಟಿಫಿಕೇಟ್ ಅನ್ನು ರಾಜ್ಯ ಸರ್ಕಾರ ನೀಡಬಾರದು ಎಂದು ಅನುಸೂಚಿತ ಜಾತಿ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಎಂ.ಪಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಎಸ್ಸಿ.ಎಸ್ಟಿ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವುದು, ಸಮಾಜಿಕವಾಗಿ ಮೇಲುಸ್ತರದಲ್ಲಿರುವ ಮೇಲ್ವರ್ಗಗಳು ನಮ್ಮನ್ನು ಎಸ್.ಸಿ.ಎಸ್.ಟಿಗೆ ಸೇರಿಸಿ ಎಂದು ಒತ್ತಡ ಹಾಕುವುದು ಪ್ರಬಲರು ದುರ್ಬಲರ ಮೇಲೆ ನಡೆಸುವ ದೌರ್ಜನ್ಯವಷ್ಟೆ ಅಲ್ಲ . ಎಸ್ಸಿ.ಎಸ್ಟಿ ಗಳ ಮೇಲೆ ಎಸಗುವ ಹೊಸ ಮಾದರಿಯ ರೂಪಾಂತರಿ ಅಟ್ರಾಸಿಟಿ ಪ್ರಕರಣವಾಗಿದೆ ಎಂದು ವ್ಯಾಖ್ಯಾನ ಮಾಡಿದ್ದಾರೆ.
ವೀರಶೈವ ಲಿಂಗಾಯತ ಸಮುದಾಯ ಅನಾದಿ ಕಾಲದಿಂದಲೂ ಸಮಾಜಕ್ಕೆ ನ್ಯಾಯ ನೀತಿ ಧರ್ಮ ಬೋದಿಸುವುದರ ಜತೆಗೆ ದೀನದಲಿತರ ಮತ್ತು ಬಡವರ ಮಕ್ಕಳಿಗೆ ಉಚಿತ ಅನ್ನ ದಾಸೋಹ ಮತ್ತು ವಿದ್ಯಾಧಾನ ಮಾಡುತ್ತಿರುವ ಸಮುದಾಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆದರೆ ಸಮುದಾಯದಲ್ಲಿ ಮೇಲಿನ ಗುರು ಸ್ಥಾನದಲ್ಲಿರುವ ಜಂಗಮರು ಎನ್ನುವ ಉಪ ಜಾತಿಯ ಕೇಲವು ವ್ಯಕ್ತಿಗಳು ಎಸ್. ಸಿ ಬೇಡ ಜಂಗಮ ಎಂಬ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಆ ಜನರ ಅನ್ನ ಕಸಿದುಕೊಳ್ಳುತ್ತಿರುವು ಮಹಾಪಾಪವಾಗಿದೆ ಎಂದರು.
ವೀರಶೈವ ಲಿಂಗಾಯತ ಸಮುದಾಯದಲ್ಲಿ ಗುರುಗಳ ಸ್ಥಾದಲ್ಲಿರುವ ಜಂಗಮರು ಎಸ್.ಸಿ.ಗಳಾಗಲು ಸಾಧ್ಯವೇ. ಕೇಂದ್ರ ಸರ್ಕಾರದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿನ 101 ಜಾತಿಗಳ 19ನೇ ಕ್ರಮ ಸಂಖ್ಯೆಯಲ್ಲಿ ಬೇಡ ಜಂಗಮ ಅಥವಾ ಬುಡ್ಗ ಜಂಗಮ ಅಥವಾ ಮೂಲ ಜಂಗಮ ಎಂಬ ಹೆಸರಿನ ಜಾತಿಯಿದೆ. ಈ ಜಾತಿಯನ್ನು ಎಸ್ಸಿ ಜಾತಿ ಪಟ್ಟಿಗೆ ಸೇರಿಸುವ ಮುನ್ನ ಕುಲ ಶಾಸ್ತ್ರ, ಸಮಾಜಿಕ ಮತ್ತು ಶೈಕ್ಷಣಿಕ ಹಿನ್ನಲೆಯ ಬಗ್ಗೆ ಸಮಗ್ರ ಅಧ್ಯಯನ ನಡೆಸಲಾಗಿದೆ. ಬೇಡ ಜಂಗಮರು ಆಂಧ್ರ ಪ್ರದೇಶ ಮೂಲದವರು ಇವರ ಮಾತೃ ಭಾಷೆ ತೆಲುಗು ಆಗಿದ್ದು. ಮಾಂಸಹಾರಿಗಳು, ಹೊಟ್ಟೆ ಪಾಡಿಗಾಗಿ ವೇಷಧಾರಿಗಳಾಗಿ ಊರೂರು ಸುತ್ತಿ ಭಿಕ್ಷೆ ಬೇಡುವುದು ಇವರ ಕಾಯಕವಾಗಿದೆ. ಇವರಲ್ಲಿ ವಿದ್ಯಾವಂತರ ಸಂಖ್ಯೆ ಶೇ 1 ಆಗಿದೆ. ಈ ಜನಾಂಗದ ಗುಣ ಲಕ್ಷಣಗಳಲ್ಲಿ ಶೇ ಒಂದು ಭಾಗನೂ ಹೊಂದಿರದ ವೀರಶೈವ ಲಿಂಗಾಯತ ಜನಾಂಗದವರು ಜಂಗಮ್ ಎಂಬ ಪದವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ