ಭಿಕ್ಷಾಟನೆಗೆ ಪ್ರೋತ್ಸಾಹ: ಕ್ರಮಕ್ಕೆ ಶಿಫಾರಸು
Team Udayavani, Sep 16, 2021, 6:13 AM IST
ಬೆಂಗಳೂರು: ಭಿಕ್ಷಾಟನೆ ಹಿಂದೆ ದೊಡ್ಡ ಜಾಲವಿದ್ದು, ಅದನ್ನು ಮಟ್ಟ ಹಾಕುವಲ್ಲಿ ಗೃಹ ಇಲಾಖೆ ವಿಫಲವಾಗಿದೆ. ಆದ್ದರಿಂದ ಭಿಕ್ಷಾಟನೆಗೆ ತೊಡಗಿರುವ ಹಾಗೂ ಪ್ರೋತ್ಸಾಹ ನೀಡುವವರ ಮೇಲೆ ಕ್ರಮ ಕೈಗೊಳ್ಳುವಂತೆ ವಿಧಾನ ಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸರಕಾರಕ್ಕೆ ಶಿಫಾರಸು ಮಾಡಿದೆ.
ವಿಧಾನಸಭೆಯಲ್ಲಿ ಬುಧವಾರ ಸಮಿತಿ ಅಧ್ಯಕ್ಷೆ ಕೆ. ಪೂರ್ಣಿಮಾ ಅವರು ವರದಿ ಮಂಡಿಸಿದ್ದು, ಭಿಕ್ಷಾಟನೆ ಮಾಡುವವರನ್ನು ಬಂಧಿಸಿ ಅವರ ಮನವೊಲಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎಂದು ಹೇಳಿದೆ. ತಿಳಿಸಲಾಗಿದೆ.
ಅಂಗವಿಲಕರ ಠೇವಣಿ ಮೊತ್ತ ಹೆಚ್ಚಿಸಿ:
ಅಂಗವಿಕಲರ ಹೆಸರಿನಲ್ಲಿಡುವ ಠೇವಣಿ ಮೊತ್ತವನ್ನು 50 ಸಾವಿರದಿಂದ 1 ಲಕ್ಷಕ್ಕೇರಿಸ ಬೇಕು. 5 ವರ್ಷಗಳ ಠೇವಣಿ ಮೊತ್ತವನ್ನು 10 ವರ್ಷಗಳಿಗೆ ವಿಸ್ತರಿಸಬೇಕು ಎಂದು ಶಿಫಾರಸು ಮಾಡಿದೆ.
ಆರೈಕೆ ಭತ್ತೆ ಹೆಚ್ಚಳ ಅಗತ್ಯ:
ಅಂಧ ಮಹಿಳೆಯರಿಗೆ ಜನಿಸುವ ಮಗುವಿನ ಆರೈಕೆ ಭತ್ತೆಯನ್ನು 2 ಸಾವಿರದಿಂದ 4 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು ಹಾಗೂ ಈ ಸೌಲಭ್ಯವನ್ನು ಕನಿಷ್ಠ 2 ಮಕ್ಕಳಿಗೆ ನೀಡುವಂತಾಗಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.
ಮಾಸಾಶನ ಹೆಚ್ಚಿಸಿ :
ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿ ವೃದ್ಧಿಗಾಗಿ ಮೀಸಲಿಟ್ಟಿರುವ ಹಣ ಮೂರು ವರ್ಷಗಳಿಂದ ಸದ್ಬಳಕೆ ಯಾಗಿಲ್ಲ. ಆ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಮಿತಿ ಶಿಫಾರಸು ಮಾಡಿದೆ. ಪ್ರಸ್ತುತ ಶೇ.45ರಿಂದ 70ರಷ್ಟು ಅಂಗ ವೈಕಲ್ಯ ಹೊಂದಿರುವವರಿಗೆ ನೀಡ ಲಾಗು ತ್ತಿರುವ ಮಾಸಾಶನವನ್ನು 800 ರೂ.ದಿಂದ 3 ಸಾವಿರ ರೂ.ಗಳಿಗೆ ಹಾಗೂ ಶೇ.75ಕ್ಕಿಂತ ಹೆಚ್ಚು ಅಂಗವೈಕಲ್ಯ ಹೊಂದಿರು ವವರಿಗೆ 6 ಸಾವಿರ ರೂ. ಮಾಸಾಶನ ನೀಡಲು ಶಿಫಾರಸು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ