ರಾಜಕೀಯದಲ್ಲೀಗ ಬಳೆ ಸಮರ ಶುರು
ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಆಗದಿದ್ದರೆ ಬಳೆ ತೊಟ್ಟುಕೊಳ್ಳಿ: ಸಿದ್ದುಗೆ ಶೋಭಾ ಸವಾಲು
Team Udayavani, May 17, 2019, 6:00 AM IST
ಬೆಂಗಳೂರು: ‘ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಆಗದಿದ್ದರೆ, ಬಳೆ ತೊಟ್ಟುಕೊಳ್ಳಿ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದು, ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ.
‘ಆಪರೇಷನ್ ಕಮಲ’ದ ವಿಷಯ ಈಗ ಮಹಿಳೆಯರ ಬಳೆ ಕಡೆಗೆ ತಿರುಗಿದ್ದು, ಬಳೆ ತೊಡುವುದರ ಬಗ್ಗೆಯೇ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಶೋಭಾ ಹೇಳಿಕೆಗೆ ಕಾಂಗ್ರೆಸ್ನಿಂದ ತೀವ್ರ ಟೀಕೆ ವ್ಯಕ್ತವಾಗಿದ್ದು, ಜಾಲತಾಣದಲ್ಲಿಯೂ ಆಕ್ಷೇಪಗಳು ಕೇಳಿ ಬಂದಿವೆ.
ಇದೇ ವೇಳೆ, ಸಿದ್ದರಾಮಯ್ಯ ಅವರು ಶೋಭಾ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ‘ಕುಮಾರಿ ಶೋಭಾ ಅವರೆ, ಹೆಣ್ಣಾಗಿ ನೀವು ಮಹಿಳಾ ಸಂಕುಲವೇ ಅಸಮರ್ಥರು ಎಂಬ ಕೀಳು ಹೇಳಿಕೆ ನೀಡಿ ರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿ ಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡ ಲಾಗದವರು ಎಂದಲ್ಲ. ನೆನಪಿರಲಿ ಚೆನ್ನಮ್ಮ, ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೆ ಸಾಧನೆಯ ಉತ್ತುಂಗಕ್ಕೇರಿದವರು’ ಎಂದು ತಿರುಗೇಟು ನೀಡಿದ್ದಾರೆ.
ಶೋಭಾ ಪ್ರತಿ ಟ್ವೀಟು: ಈ ಮಧ್ಯೆ, ಸಿದ್ದರಾಮಯ್ಯ ಟ್ವೀಟ್ಗೆ ತಿರುಗೇಟು ನೀಡಿರುವ ಶೋಭಾ ಕರಂದ್ಲಾಜೆ, ಇಂದಿರಾಗಾಂಧಿಯವರ ಹೆಜ್ಜೆ ಗುರುತುಗಳನ್ನು ಹಿಂಬಾಲಿಸಿ, ನಿರ್ಮಲಾ ಸೀತಾರಾಮನ್ ಹಾಗೂ ಸುಷ್ಮಾ ಸ್ವರಾಜ್ ಅವರಿಂದ ಸ್ಪೂರ್ತಿ ಪಡೆಯಿರಿ. ಪ್ರತಿ ಸಾರಿಯೂ ನಮ್ಮ ಶಾಸಕರು ಯಡಿಯೂರಪ್ಪ ಅವರೊಂದಿಗೆ ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಅಳುತ್ತ ಕೂಡಬೇಡಿ. ಸುಮ್ಮನೆ ಆರೋಪ ಮಾಡುವ ಬದಲು ನಿಮ್ಮ ಶಾಸಕರ ಮೇಲೆ ನಿಯಂತ್ರಣ ಇಟ್ಟುಕೊಳ್ಳಿ. ಅಳುಮುಂಜಿ ಆಗಬೇಡಿ ಎಂದು ಪ್ರತ್ಯುತ್ತರ ನೀಡಿದ್ದಾರೆ.
ಹರಕು ಬಾಯಿಯ ಶೋಭಾ: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಶೋಭಾ ಹೇಳಿಕೆಗೆ ತಿರುಗೇಟು ನೀಡಿದ್ದು, ಹರಕು ಬಾಯಿಯ ಶೋಭಾ ಅವರು ಹೆಣ್ಣು ಕುಲಕ್ಕೆ ಗೌರವ ತರುವಂತೆ ಮಾತನಾಡ ಬೇಕು. ಹೆಣ್ಣಿನ ಬಳೆ ದೌರ್ಬಲ್ಯದ ಸಂಕೇತವಲ್ಲ. ಹೆಣ್ಣೂ ಶಕ್ತಿ ಹೀನವಲ್ಲ. ಬಳೆ ಸಂಸ್ಕೃತಿಯ ಸಂಕೇತ ಎನ್ನುವ ಸಾಮಾನ್ಯ ಜ್ಞಾನ ಶೋಭಾಗೆ ಇಲ್ಲ ಎಂದು ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ರಾಠೊಡ್ ಕೂಡ ತಿರುಗೇಟು ನೀಡಿದ್ದಾರೆ. ಯುಪಿಎ ಅವಧಿ ಯಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿದಾಗ ಮನಮೋಹನ್ ಸಿಂಗ್ ಅವರಿಗೆ ಬೆಲೆ ಇಳಿಸಲು ಆಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಿ ಎಂದು ಸ್ಮತಿ ಇರಾನಿ ಹೇಳಿದ್ದರು. ಈಗ ದೇಶದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೇರಿದೆ. ಈಗ ಬಳೆ ತೊಡಲು ಅರ್ಹತೆ ಇರುವುದು ಪ್ರಧಾನಿ ನರೇಂದ್ರ ಮೋದಿಗೆ ಮಾತ್ರ. ಶೋಭಾ ಕರಂದ್ಲಾಜೆ, ಪ್ರಧಾನಿಗೆ ಬಳೆ ಹಾಕಿಕೊಳ್ಳುವಂತೆ ಹೇಳಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ