ಸಿದ್ದು ನಾಯಕತ್ವದ ಅಂತ್ಯ ಆರಂಭ: ಸಚಿವ ಶೆಟ್ಟರ್
Team Udayavani, Dec 9, 2019, 3:02 AM IST
ಹುಬ್ಬಳ್ಳಿ: ಜನರ ನಾಡಿಮಿಡಿತ ಅರಿಯದ ಸಿದ್ದರಾಮಯ್ಯ ಅವರು ಅಹಂ ಹಾಗೂ ಸೊಕ್ಕಿನಿಂದ ಆಡಿದ ಮಾತುಗಳಿಗೆ ಜನರು ಹಾಕುವ ಕೇಕೆಯೇ ಮತ ಎಂದು ಭಾವಿಸಿದ್ದು, ಉಪ ಚುನಾವಣೆ ಫಲಿತಾಂಶ ನಂತರ ಅವರ ನಾಯಕತ್ವದ ಅಂತ್ಯ ಆರಂಭವಾಗಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಭವಿಷ್ಯ ನುಡಿದರು.
ನಗರದಲ್ಲಿ ಭಾನುವಾರ ಬಿಜೆಪಿ ಸಾಂಸ್ಥಿಕ ಚುನಾವಣೆ ವೀಕ್ಷಕರ ಸಭೆಯಲ್ಲಿ ಮಾತನಾಡಿ, “ಕೂಸು ಹುಟ್ಟುವ ಮುನ್ನವೇ ಕುಲಾವಿ’ ಎಂಬಂತೆ ಕಾಂಗ್ರೆಸ್ನವರು ವರ್ತಿಸತೊಡಗಿದ್ದಾರೆ. ಅಧಿಕಾರದ ವಿಚಾರದಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರು ಹಗಲುಗನಸು ಕಾಣುತ್ತಿದ್ದಾರೆ ಎಂದರು.
ಉಪ ಚುನಾವಣೆಯ ಮತದಾನದ ನಂತರದ ಸಮೀಕ್ಷೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂಬುದನ್ನು ತಿಳಿದು ಸಿದ್ದರಾಮಯ್ಯ ತಮ್ಮ ರಾಗ ಬದಲಿಸಿದ್ದಾರೆ. ಉಪ ಚುನಾವಣೆ ನಂತರ ನಾನೇ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ, ಬಳಿಕ, ಈ ತರಹದ ಹೇಳಿಕೆ ನೀಡಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ ಎಂದರು.
ಉಪ ಚುನಾವಣೆ ನಂತರ ಕಾಂಗ್ರೆಸ್ ಸೋಲಿನಿಂದ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಸಂಚಕಾರ ಬರುವ ಎಲ್ಲ ಸಾಧ್ಯತೆಗಳಿದ್ದು, ಸ್ಥಾನ ಉಳಿಸಿಕೊಳ್ಳುವ ಪ್ರಯತ್ನ ಬಿಟ್ಟು ಸಿದ್ದರಾಮಯ್ಯ ವಿನಾಕಾರಣ ಬಿಜೆಪಿ ವಿರುದ್ಧ ಟೀಕಿಸುತ್ತಿದ್ದಾರೆಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ