ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡ: ಎಚ್.ಕೆ.ಪಾಟೀಲ್
Team Udayavani, Jul 3, 2019, 3:05 AM IST
ಬೆಂಗಳೂರು: ಬಿಜೆಪಿ ನಾಯಕರ ಮಾತು, ಓಘವನ್ನು ನೋಡಿದರೆ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡವಿರುವುದು ಸಹಜವಾಗಿಯೇ ಸ್ಪಷ್ಟವಾಗುತ್ತದೆ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಆರೆಂಟು ತಿಂಗಳಿನಿಂದ ಇದೇ ನಡೆದಿದೆ. ರಾಜೀನಾಮೆ ಕೊಡುತ್ತೇವೆ, ಸರ್ಕಾರವನ್ನು ಬೀಳಿಸುತ್ತೇವೆ, ನಾಳೆ ರಾಜೀನಾಮೆ ಕೊಡುತ್ತೇನೆ, ಹುಣ್ಣಿಮೆವರೆಗೆ ತಡೆಯುತ್ತೇನೆಂಬ ಮಾತುಗಳು ಕೇಳುತ್ತಲೇ ಇದೆ. ಬಿಜೆಪಿಯು ಅರಾಜಕತೆ ಸೃಷ್ಟಿಸಿ, ಏನು ಮಾಡಬೇಕೆಂದಿದೆ ಎಂದು ಪ್ರಶ್ನಿಸಿದರು.
ವರದಿ ಸಲ್ಲಿಸುವವರೆಗೆ ತಾಳ್ಮೆಯಿಂದ ಕಾಯಬೇಕು: ಜಿಂದಾಲ್ ಸಂಸ್ಥೆಗೆ 3,666 ಎಕರೆ ಭೂಮಿ ಪರಭಾರೆ ನಿರ್ಣಯವನ್ನು ಸ್ಥಗಿತಗೊಳಿಸಿರುವ ಸರ್ಕಾರ ಸಂಪುಟ ಉಪಸಮಿತಿ ರಚಿಸಿದ್ದು, ಸಮಿತಿ ಶಿಫಾರಸು, ವರದಿ ಸಲ್ಲಿಸುವವರೆಗೆ ತಾಳ್ಮೆಯಿಂದ ಕಾಯಬೇಕು. ಇದೇ ವಿಚಾರಕ್ಕೆ ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದರೆ ವಾಪಾಸ್ ಪಡೆಯಬೇಕು ಎಂದು ಎಚ್.ಕೆ.ಪಾಟೀಲ್ ಸಲಹೆ ನೀಡಿದರು.
ಜಿಂದಾಲ್ ಸಂಸ್ಥೆಗೆ ಭೂಮಿ ಮಾರಾಟ ಮಾಡುವುದನ್ನು ಸಂಪುಟ ನಿರ್ಣಯ ಕೈಗೊಳ್ಳುವ ಮೊದಲು ಹಾಗೂ ನಂತರವೂ ಆಕ್ಷೇಪಿಸಿ ಪತ್ರ ಬರೆದಿದ್ದೆ. ಈ ಬಗ್ಗೆ ಸಚಿವ ಕೆ.ಜೆ.ಜಾರ್ಜ್ ಅವರಿಗೂ ಪತ್ರ ಬರೆದಿದ್ದೆ. ಕೆಪಿಸಿಸಿ ಅಧ್ಯಕ್ಷರ ಸಮ್ಮುಖದಲ್ಲೂ ಜಾರ್ಜ್ ಅವರೊಂದಿಗೆ ಚರ್ಚಿಸಿ ಅಭಿಪ್ರಾಯ ತಿಳಿಸಿದ್ದೆ. ಬಳಿಕ ಮುಖ್ಯಮಂತ್ರಿಗಳು ನಿರ್ಧಾರವನ್ನು ಸ್ಥಗಿತಗೊಳಿಸಿ ಗೃಹ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚಿಸಿದ್ದಾರೆ.
ಆ ಹಿನ್ನೆಲೆಯಲ್ಲಿ ಸರ್ಕಾರ ತನ್ನ ನಿರ್ಣಯವನ್ನು ಪುನರ್ ಪರಿಶೀಲಿಸಲಿದೆ ಎಂದರು. ಸಂಪುಟ ಉಪಸಮಿತಿ ವರದಿ ನೀಡುವವರೆಗೆ ಕಾಯೋಣ. ರಾಜೀನಾಮೆ ಕೊಟ್ಟು ರಾಜ್ಯದಲ್ಲಿ ಅರಾಜಕತೆಗೆ ಅವಕಾಶ ನೀಡುವುದು ಸರಿಯಲ್ಲ. ಜನರ ಅಹವಾಲು ಆಲಿಸಿದ ಮೇಲೆ ಉಪಸಮಿತಿ ಸೂಕ್ತ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ