ಬೆಳಗಾವಿ ಜಿಲ್ಲಾ ಕಾಂಗ್ರೆಸ್ನಲ್ಲಿ ಶಮನವಾಗದ ಭಿನ್ನಮತ
Team Udayavani, May 28, 2017, 10:11 AM IST
ಯಮಕನಮರಡಿ/ಗೋಕಾಕ: ಬೆಳಗಾವಿ ಜಿಲ್ಲಾ ಕಾಂಗ್ರೆಸ್ನಲ್ಲಿನ ಭಿನ್ನಮತ ಶಮನಕ್ಕಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಮಾತುಕತೆ ನಡೆಸಿದ್ದರು. ಅದು ಸಫಲವಾಗದೇ ಹೋದಾಗ ಸತೀಶ್ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಜತೆ ಮಾತನಾಡಿಕೊಂಡು ಬಂದಿದ್ದರು. ಇದರಿಂದ ಜಿಲ್ಲೆಯಲ್ಲಿ ಭಿನ್ನಮತ ಶಮನವಾಗಿದೆ ಎಂದು ಹೇಳಲಾಗಿತ್ತು. ಆದರೆ ಶನಿವಾರ
ಯಮಕನಮರಡಿಯಲ್ಲಿ ಮಾತನಾಡಿದ ಶಾಸಕ ಸತೀಶ ಜಾರಕಿಹೊಳಿ, ನಾನು ದೆಹಲಿಗೆ ಹೋಗಿದ್ದು ಟಿಕೆಟ್ ಕೇಳಲು ಅಲ್ಲ. ಕೇಂದ್ರದ ನಾಯಕರು ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಯಾವ ರೀತಿ ಚುನಾವಣೆ ಎದುರಿಸಬೇಕೆಂದು ಚರ್ಚೆ
ನಡೆಸಿದ್ದ ಹಿನ್ನೆಲೆಯಲ್ಲಿ ಹೋಗಿದ್ದೆ. ಜಿಲ್ಲಾ ಉಸ್ತುವಾರಿ ಸಚಿವರು ಲಖನ್ ಪರವಾಗಿ ಟಿಕೆಟ್ ಕೇಳುವುದನ್ನು ಬಿಡಬೇಕು. ಟಿಕೆಟ್ ನೀಡುವ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಲಖನ್ಗೆ ಟಿಕೆಟ್ ನೀಡುವ ಪ್ರಯತ್ನಕ್ಕೆ ನನ್ನ ವಿರೋಧವಿದೆ ಎಂದು ಹೇಳುವ ಮೂಲಕ ಭಿನ್ನಮತ ಶಮನವಾಗದ ಮುನ್ಸೂಚನೆ ನೀಡಿದರು. ಲಖನ್ ಜಾರಕಿಹೊಳಿ ಕಾಂಗ್ರೆಸ್ ಸದಸ್ಯರೇ ಅಲ್ಲ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್ ಜತೆಗೆ ಯಾವುದೇ ವೈಮನಸ್ಸಿಲ್ಲ. ನಾನು ಬೇರೆಯವರಿಗೆ ಟಿಕೆಟ್ ಕೊಡಿಸುವಷ್ಟು ಸಶಕ್ತನಾಗಿದ್ದು, ನನ್ನ ಕ್ಷೇತ್ರದ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಮತ್ತೂಂದೆಡೆ ಗೋಕಾಕದಲ್ಲಿ ಮಾತನಾಡಿದ ಯುವ ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಮಕನಮರಡಿ ಕ್ಷೇತ್ರದಿಂದ ತಾವು ಸ್ಪಧಿರ್ಧಿಸುವುದು ಖಚಿತ ಎಂದರು. ನಾನು
ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಹೊಂದಿಲ್ಲ ಎಂಬ ಬೇಜವಾಬ್ದಾರಿ ಹೇಳಿಕೆಯನ್ನು ಸತೀಶ್ ಜಾರಕಿಹೊಳಿ ನೀಡಿದ್ದಾರೆ. ನಾನು ಕಾಂಗ್ರೆಸ್ ಸದಸ್ಯನಾಗಿದ್ದು ಪಕ್ಷದ ಸಂಘಟನೆಗಾಗಿ ಶ್ರಮಿಸುತ್ತಿರುವುದು ಜಗಜ್ಜಾಹೀರಾಗಿದೆ. ಜನರ ದಾರಿ ತಪ್ಪಿಸುವ ಇಂತಹ ಹೇಳಿಕೆಗಳಿಗೆ ಕ್ಷೇತ್ರದ ಜನತೆ ಕಿವಿಗೊಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ
Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ
CM ವಿರುದ್ಧ ನಕಲಿ ಪೋಸ್ಟ್: ವಿಕ್ರಮ್ ಹೆಗ್ಡೆ, ಗಿಳಿಯಾರ್ ಬಂಧನಕ್ಕೆ ತಾತ್ಕಾಲಿಕ ತಡೆ
Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್
MUST WATCH
ಹೊಸ ಸೇರ್ಪಡೆ
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್