Belgavi;ಭೀಕರ ಕಾರು ಅಪಘಾತದಲ್ಲಿ 6 ಮಂದಿ ದುರ್ಮರಣ:ಓರ್ವನ ಸ್ಥಿತಿ ಚಿಂತಾಜನಕ
Team Udayavani, Feb 22, 2024, 5:25 PM IST
ಬೆಳಗಾವಿ:ಖಾನಾಪುರ ತಾಲೂಕಿನ ಮಂಗ್ಯಾನಕೊಪ್ಪ ಬಳಿ ಸ್ವಿಫ್ಟ್ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸಹಿತ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಕಾರು ಚಾಲಕ ಕೊಲ್ಲಾಪುರದ ಶಾರುಖ್ ಪೆಂಡಾರಿ (30), ರಾಯಬಾಗ ತಾಲೂಕಿನ ಹಾರೂಗೇರಿಯ ಇಕ್ಬಾಲ್ ಜಮಾದಾರ(50), ಧಾರವಾಡ ನಗರದ ಸಾನಿಯಾ ಲಂಗೋಟಿ, ಉಮ್ರಾ ಬೇಗಂ ಲಂಗೋಟಿ (17), ಶಬನಮ್ ಲಂಗೋಟಿ (37) ಹಾಗೂ ಫರಾನ್ ಲಂಗೋಟಿ (13) ಮೃತಪಟ್ಟವರು. ಕಿತ್ತೂರಿನ ಫರಾತ್ ಬೆಟಗೇರಿ (18), ಧಾರವಾಡದ ಸೋಫಿಯಾ ಲಂಗೋಟಿ (22), ಮಾಹಿನ್ ಲಂಗೋಟಿ (7) ಹಾಗೂ ಹಾರೂಗೇರಿಯ ಸಾನಿಯಾ ಇಕ್ಬಾಲ್ ಜಮಾದಾರ (36) ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ ಮಧ್ಯಾಹ್ನ ಮದುವೆಯೊಂದನ್ನು ಮುಗಿಸಿ ಖಾನಾಪುರ ತಾಲೂಕಿನ ಗೊಲ್ಲೇಹಳ್ಳಿ ಗ್ರಾಮದಲ್ಲಿ ಮತ್ತೂಂದು ಮದುವೆಗೆ ಹೊರಟಿದ್ದರು. ಕಾರಿನಲ್ಲಿ ಮೂವರು ಮಕ್ಕಳು ಸೇರಿ 10 ಮಂದಿ ಇದ್ದರು. ತಡವಾಗಿದ್ದರಿಂದ ಚಾಲಕ ವೇಗವಾಗಿ ಕಾರು ಓಡಿಸುತ್ತಿದ್ದ ವೇಳೆ ಖಾನಾಪುರ ತಾಲೂಕಿನ ಬೀಡಿ ಹಾಗೂ ಮಂಗ್ಯಾನಕೊಪ್ಪ ಗ್ರಾಮದ ಮಧ್ಯೆ ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು