![1-assam](https://www.udayavani.com/wp-content/uploads/2024/07/1-assam-415x233.jpg)
Belgavi;ಭೀಕರ ಕಾರು ಅಪಘಾತದಲ್ಲಿ 6 ಮಂದಿ ದುರ್ಮರಣ:ಓರ್ವನ ಸ್ಥಿತಿ ಚಿಂತಾಜನಕ
Team Udayavani, Feb 22, 2024, 5:25 PM IST
![1-saddasdas](https://www.udayavani.com/wp-content/uploads/2024/02/1-saddasdas-620x408.jpg)
ಬೆಳಗಾವಿ:ಖಾನಾಪುರ ತಾಲೂಕಿನ ಮಂಗ್ಯಾನಕೊಪ್ಪ ಬಳಿ ಸ್ವಿಫ್ಟ್ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸಹಿತ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಕಾರು ಚಾಲಕ ಕೊಲ್ಲಾಪುರದ ಶಾರುಖ್ ಪೆಂಡಾರಿ (30), ರಾಯಬಾಗ ತಾಲೂಕಿನ ಹಾರೂಗೇರಿಯ ಇಕ್ಬಾಲ್ ಜಮಾದಾರ(50), ಧಾರವಾಡ ನಗರದ ಸಾನಿಯಾ ಲಂಗೋಟಿ, ಉಮ್ರಾ ಬೇಗಂ ಲಂಗೋಟಿ (17), ಶಬನಮ್ ಲಂಗೋಟಿ (37) ಹಾಗೂ ಫರಾನ್ ಲಂಗೋಟಿ (13) ಮೃತಪಟ್ಟವರು. ಕಿತ್ತೂರಿನ ಫರಾತ್ ಬೆಟಗೇರಿ (18), ಧಾರವಾಡದ ಸೋಫಿಯಾ ಲಂಗೋಟಿ (22), ಮಾಹಿನ್ ಲಂಗೋಟಿ (7) ಹಾಗೂ ಹಾರೂಗೇರಿಯ ಸಾನಿಯಾ ಇಕ್ಬಾಲ್ ಜಮಾದಾರ (36) ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ ಮಧ್ಯಾಹ್ನ ಮದುವೆಯೊಂದನ್ನು ಮುಗಿಸಿ ಖಾನಾಪುರ ತಾಲೂಕಿನ ಗೊಲ್ಲೇಹಳ್ಳಿ ಗ್ರಾಮದಲ್ಲಿ ಮತ್ತೂಂದು ಮದುವೆಗೆ ಹೊರಟಿದ್ದರು. ಕಾರಿನಲ್ಲಿ ಮೂವರು ಮಕ್ಕಳು ಸೇರಿ 10 ಮಂದಿ ಇದ್ದರು. ತಡವಾಗಿದ್ದರಿಂದ ಚಾಲಕ ವೇಗವಾಗಿ ಕಾರು ಓಡಿಸುತ್ತಿದ್ದ ವೇಳೆ ಖಾನಾಪುರ ತಾಲೂಕಿನ ಬೀಡಿ ಹಾಗೂ ಮಂಗ್ಯಾನಕೊಪ್ಪ ಗ್ರಾಮದ ಮಧ್ಯೆ ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
![1-assam](https://www.udayavani.com/wp-content/uploads/2024/07/1-assam-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.