ಪ್ರವೀಣ್ ನೆಟ್ಟಾರು ಹತ್ಯೆ: ಅಪರಿಚಿತರಿಂದ ಬಸ್ ಗೆ ಕಲ್ಲೆಸೆತ; ಹಲವೆಡೆ ಬಂದ್
Team Udayavani, Jul 27, 2022, 9:58 AM IST
ಪುತ್ತೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಹತ್ಯೆ ಖಂಡಿಸಿ ಪುತ್ತೂರು, ಉಪ್ಪಿನಂಗಡಿ, ಕಡಬ ತಾಲೂಕುಗಳಲ್ಲಿ ಬುಧವಾರ ಸ್ವಯಂ ಪ್ರೇರಿತ ಬಂದ್ ಮಾಡಲಾಗಿದೆ.
ಮುಂಜಾನೆ ಮಂಗಳೂರಿಗೆ ಸಂಚರಿಸುತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಕಲ್ಲೆಸೆದು ಹಾನಿಮಾಡಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಯುವ ಮುಖಂಡ 29 ವರ್ಷದ ಪ್ರವೀಣ್ ನೆಟ್ಟಾರು ಅವರನ್ನು ನಗರದ ಬೆಳ್ಳಾರೆ ಪೇಟೆಯಲ್ಲಿ ಹತ್ಯೆ ಮಾಡಲಾಗಿದೆ. ಈ ಬರ್ಬರ ಹತ್ಯೆಯನ್ನು ಖಂಡಿಸಿ ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್ಗೆ ವಿಎಚ್ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ.
ಇದನ್ನೂ ಓದಿ: ಅಶ್ಲೀಲವಾಗಿ ಫೋಟೋ ಮಾರ್ಫಿಂಗ್ ಮಾಡಿ ಸಂದೇಶ ರವಾನೆ
ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರು ನಿವಾಸಿಯಾಗಿರುವ ಪ್ರವೀಣ್ ಅವರು ಎಂದಿನಂತೆ ಮಂಗಳವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ತನ್ನ ಚಿಕನ್ ಸೆಂಟರ್ ಅನ್ನು ಮುಚ್ಚುವ ತಯಾರಿಯಲ್ಲಿದ್ದಾಗ ಅಲ್ಲಿಗೆ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.
ಘಟನೆ ನಡೆದ ರಾತ್ರಿಯೇ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದ ಕಾರಣ, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದರು. ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ