ಸಿಡಿಲಬ್ಬರದ ಮಳೆಗೆ ಕುರಿಗಾಹಿ ಸಾವು 


Team Udayavani, May 12, 2018, 6:00 AM IST

3.jpg

ಬೆಂಗಳೂರು: ರಾಜ್ಯದ ಮೇಲೆ ಹಾದು ಹೋಗಿರುವ ಮೇಲ್ಮೆ„ ಸುಳಿಗಾಳಿ ಮತ್ತು ಕಡಿಮೆ ಒತ್ತಡದ ತಗ್ಗು (ಟ್ರಫ್) 
ಉಂಟಾಗಿರುವುದರಿಂದ ಶುಕ್ರವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಅಬ್ಬರಿಸಿದೆ.
ಶನಿವಾರ ಕೂಡ ಇದು ಮುಂದುವರಿಯುವ ಸಾಧ್ಯತೆ ಇದೆ.

ಸಿಡಿಲಬ್ಬರದ ಮಳೆಗೆ ಬಾಗಲಕೋಟೆ ತಾಲೂಕಿನ ಗುಂಡನಪಲ್ಲೆ ಗ್ರಾಮದಲ್ಲಿ ಮಹದೇವಪ್ಪ ದಳವಾಯಿ (40) ಎಂಬುವರು ಮೃತಪಟ್ಟಿದ್ದಾರೆ. ಹೊಲದ ಪಕ್ಕ ಕುರಿ ಕಾಯುತ್ತಿರುವ ವೇಳೆ ಸಿಡಿಲು ಬಡಿಯಿತು. ಬೆಳ್ತಂಗಡಿ ತಾಲೂಕಿನಲ್ಲಿ ಸಿಡಿಲಿಗೆ ಇಬ್ಬರು ಗಾಯಗೊಂಡಿದ್ದಾರೆ. ಇದೇ ವೇಳೆ, ದಕ್ಷಿಣ ಮತ್ತು ಉತ್ತರ ಒಳನಾಡು, ಕರಾವಳಿ ಪ್ರದೇಶ, ಮಲೆನಾಡಿನಲ್ಲಿ ಶುಕ್ರವಾರ ಸಂಜೆ ಮಳೆಯಾಗಿದೆ. ಮತದಾ ನದ ಮುನ್ನಾದಿನ ಸುರಿದ ಮಳೆಯು ಚುನಾವಣಾ ಕಾವಿಗೆ ತಣ್ಣೀರೆರಚಿತು. ಕೊನೆಯ ಹಂತದ ಬಿರುಸಿನ ಪ್ರಚಾರದಲ್ಲಿ ಮುಳುಗಿದ್ದ ವಿವಿಧ ಪಕ್ಷಗಳ ಅಭ್ಯರ್ಥಿಗಳ ಉತ್ಸಾಹಕ್ಕೆ ಮಳೆ ಬ್ರೇಕ್‌ ಹಾಕಿತು. ಇದರಿಂದ ಕೆಲವರು ಹಿಡಿಶಾಪ ಹಾಕಿದರೆ, ಮತ್ತೆ ಹಲವರು ಕೈ-ಕೈ ಹಿಸುಕಿಕೊಂಡರು.

ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಹೆಚ್ಚಿತ್ತು. ಮಂಡ್ಯ, ತುಮಕೂರು, ಕೊಡಗು, ಹಾಸನ, ಕೋಲಾರ, ಮೈಸೂರು, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರದಲ್ಲಿ ಕನಿಷ್ಠ 40ರಿಂದ ಗರಿಷ್ಠ 63 ಮಿ.ಮೀ.ಮಳೆಯಾಗಿದೆ. ಇನ್ನು ಉತ್ತರ ಕರ್ನಾಟಕದ ಬೆಳಗಾವಿ, ರಾಯಚೂರು, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ಧಾರವಾಡ, ವಿಜಯಪುರ  ಸೇರಿದಂತೆ ವಿವಿಧೆಡೆ ಕನಿಷ್ಠ 11ರಿಂದ ಗರಿಷ್ಠ 46.5 ಮಿ.ಮೀ. ಮಳೆ ದಾಖಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. 

ಮತದಾನಕ್ಕೆ ಮಳೆ ಅಡ್ಡಿ?: ಲಕ್ಷದ್ವೀಪದಿಂದ ತಮಿಳುನಾಡು ನಡುವೆ ಮೇಲ್ಮೆ„ಸುಳಿಗಾಳಿ ಮತ್ತು ಟ್ರಫ್ ಉಂಟಾಗಿದೆ. ಇದು
ರಾಜ್ಯದ ಮೇಲೆ ಹಾದುಹೋಗಿರುವುದರಿಂದ ಮಳೆಯಾಗುತ್ತಿದೆ. ಶನಿವಾರ ಕೂಡ ಈ ಪೂರ್ವಮುಂಗಾರು ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ “ಉದಯವಾಣಿ’ಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮತದಾನಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಈ ಮಧ್ಯೆ, ಮಳೆಯಿಂದ ರಾಜ್ಯದ ಉಷ್ಣಾಂಶದಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ.

Ad

ಟಾಪ್ ನ್ಯೂಸ್

Bhadra Reservoir nearing filling: 2 thousand cusecs into the river

Bhadra Reservoir: ಭರ್ತಿಯತ್ತ ಭದ್ರಾ ಜಲಾಶಯ: 2 ಸಾವಿರ ಕ್ಯೂಸೆಕ್ ನದಿಗೆ

Show me a photo of the damage done to India in Operation Sindoor; Ajit Doval challenges

ಆಪರೇಷನ್ ಸಿಂದೂರ್‌ನಲ್ಲಿ ಭಾರತದಕ್ಕಾದ ಹಾನಿಯ ಒಂದಾದರು ಫೋಟೋ ತೋರಿಸಿ; ಅಜಿತ್‌ ದೋವಲ್‌ ಸವಾಲು

Kalaburagi: ಹಾಡಹಗಲೇ ಜ್ಯವೆಲರಿ ಶಾಪ್ ಗೆ ನುಗ್ಗಿ ಗನ್‌ ತೋರಿಸಿ ದರೋಡೆ

Kalaburagi: ಹಾಡಹಗಲೇ ಜ್ಯವೆಲರಿ ಶಾಪ್ ಗೆ ನುಗ್ಗಿ ಗನ್‌ ತೋರಿಸಿ ದರೋಡೆ

Stock : ಟ್ರಂಪ್‌ ತೆರಿಗೆ ಜಟಾಪಟಿ ಎಫೆಕ್ಟ್-ಷೇರುಪೇಟೆ ಸೂಚ್ಯಂಕ 600ಕ್ಕೂ ಅಧಿಕ ಅಂಕ ಕುಸಿತ

Stock: ಟ್ರಂಪ್‌ ತೆರಿಗೆ ಜಟಾಪಟಿ ಎಫೆಕ್ಟ್-ಷೇರುಪೇಟೆ ಸೂಚ್ಯಂಕ 600ಕ್ಕೂ ಅಧಿಕ ಅಂಕ ಕುಸಿತ

Argument over loan: Husband bites off wife’s nose

Channagiri: ಸಾಲದ ವಿಚಾರಕ್ಕೆ ಜಗಳ: ಪತ್ನಿಯ ಮೂಗನ್ನೇಕಚ್ಚಿ ತುಂಡರಿಸಿದ ಪತಿರಾಯ

14-tech

OnePlus Nord CE5, Nord 5 ಮತ್ತು Buds 4 ಖರೀದಿಗೆ ಲಭ್ಯ

Thirthahalli: ಗುಡ್ಡ ಕುಸಿಯುವ ಭೀತಿ… ಭಾರತೀಪುರ ಫ್ಲೈ ಓವರ್ ನ ಒಂದು ಭಾಗ ಬಂದ್!

Thirthahalli: ಧರೆ ಕುಸಿಯುವ ಭೀತಿ… ಭಾರತೀಪುರ ಫ್ಲೈ ಓವರ್ ನ ಒಂದು ಭಾಗ ಬಂದ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhadra Reservoir nearing filling: 2 thousand cusecs into the river

Bhadra Reservoir: ಭರ್ತಿಯತ್ತ ಭದ್ರಾ ಜಲಾಶಯ: 2 ಸಾವಿರ ಕ್ಯೂಸೆಕ್ ನದಿಗೆ

Kalaburagi: ಹಾಡಹಗಲೇ ಜ್ಯವೆಲರಿ ಶಾಪ್ ಗೆ ನುಗ್ಗಿ ಗನ್‌ ತೋರಿಸಿ ದರೋಡೆ

Kalaburagi: ಹಾಡಹಗಲೇ ಜ್ಯವೆಲರಿ ಶಾಪ್ ಗೆ ನುಗ್ಗಿ ಗನ್‌ ತೋರಿಸಿ ದರೋಡೆ

Argument over loan: Husband bites off wife’s nose

Channagiri: ಸಾಲದ ವಿಚಾರಕ್ಕೆ ಜಗಳ: ಪತ್ನಿಯ ಮೂಗನ್ನೇಕಚ್ಚಿ ತುಂಡರಿಸಿದ ಪತಿರಾಯ

Thirthahalli: ಗುಡ್ಡ ಕುಸಿಯುವ ಭೀತಿ… ಭಾರತೀಪುರ ಫ್ಲೈ ಓವರ್ ನ ಒಂದು ಭಾಗ ಬಂದ್!

Thirthahalli: ಧರೆ ಕುಸಿಯುವ ಭೀತಿ… ಭಾರತೀಪುರ ಫ್ಲೈ ಓವರ್ ನ ಒಂದು ಭಾಗ ಬಂದ್!

Vijayapura: ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ: ಬಂಧಿತರ 15ಕ್ಕೇರಿಕೆ, 39 ಕೆಜಿ ಚಿನ್ನ ಜಪ್ತಿ

Vijayapura: ಕೆನರಾಬ್ಯಾಂಕ್ ಕಳ್ಳತನ ಕೇಸ್: ಬಂಧಿತರ ಸಂಖ್ಯೆ15ಕ್ಕೇರಿಕೆ, 39KG ಚಿನ್ನ ಜಪ್ತಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

15

Raichur: ‘ಶ್ವಾನ ಪಡೆ’ ದಾಳಿಗೆ ರಾಯಚೂರು ಜಿಲ್ಲಾಡಳಿತ ತತ್ತರ!

Bhadra Reservoir nearing filling: 2 thousand cusecs into the river

Bhadra Reservoir: ಭರ್ತಿಯತ್ತ ಭದ್ರಾ ಜಲಾಶಯ: 2 ಸಾವಿರ ಕ್ಯೂಸೆಕ್ ನದಿಗೆ

Show me a photo of the damage done to India in Operation Sindoor; Ajit Doval challenges

ಆಪರೇಷನ್ ಸಿಂದೂರ್‌ನಲ್ಲಿ ಭಾರತದಕ್ಕಾದ ಹಾನಿಯ ಒಂದಾದರು ಫೋಟೋ ತೋರಿಸಿ; ಅಜಿತ್‌ ದೋವಲ್‌ ಸವಾಲು

14(1

Ranebennur: ಹತ್ತಿ ಬಿಟ್ಟು ಮೆಕ್ಕೆಜೋಳದತ್ತ ರೈತರ ಒಲವು

Kalaburagi: ಹಾಡಹಗಲೇ ಜ್ಯವೆಲರಿ ಶಾಪ್ ಗೆ ನುಗ್ಗಿ ಗನ್‌ ತೋರಿಸಿ ದರೋಡೆ

Kalaburagi: ಹಾಡಹಗಲೇ ಜ್ಯವೆಲರಿ ಶಾಪ್ ಗೆ ನುಗ್ಗಿ ಗನ್‌ ತೋರಿಸಿ ದರೋಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.