ಜಡಿ ಮಳೆ, ಭೂಕುಸಿತ : ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು
Team Udayavani, Jun 14, 2018, 7:18 PM IST
ಮಂಗಳೂರು : ನಿರಂತರವಾಗಿ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ಸುಬ್ರಹ್ಮಣ್ಯ – ಸಿರಿಬಾಗಿಲು ನಡುವೆ ರೈಲು ಹಳಿಯಲ್ಲಿ ಗುಡ್ಡ ಕುಸಿದು ಅಪಾರ ಪ್ರಮಾಣದ ಮಣ್ಣು ರಾಶಿ ಬಿದ್ದಿರುವ ಕಾರಣ ಬೆಂಗಳೂರು – ಮಂಗಳೂರು ನಡುವಿನ ರೈಲು ಸಂಚಾರ ರದ್ದಾಗಿದೆ.
ರೈಲು ಹಳಿಯ ಮೇಲೆ ಗುಡ್ಡ ಕುಸಿತದಿಂದಾಗಿ ಭಾರೀ ಪ್ರಮಾಣದ ಮಣ್ಣು ಬಿದ್ದಿರುವುದರಿಂದ ರೈಲು ಸಂಚಾರ ಅಸಾಧ್ಯವಾಗಿದೆ.
ಇಂದು ಬೆಳಗ್ಗೆ 10.50ರ ಹೊತ್ತಿಗೆ ಮಂಗಳೂರಿನಿಂದ ಹೊರಟಿದ್ದ ಕಾರವಾರ – ಬೆಂಗಳೂರು ರೈಲು ಸುಬ್ರಹ್ಮಣ್ಯದ ವರೆಗೆ ಕ್ರಮಿಸಿ ಅನಂತರ ಮುಂದಿನ ಯಾನವನ್ನು ರದ್ದುಗೊಳಿಸಿತು.
ಇದೇ ರೀತಿ ಬೆಳಗ್ಗೆ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ರೈಲು ಸಕಲೇಶಪುರದ ವರೆಗೆ ಮಾತ್ರವೇ ಬಂದು ಅನಂತರದ ತನ್ನ ಯಾನವನ್ನು ರದ್ದುಗೊಳಿಸಿತು.
ರೈಲು ಹಳಿಯ ಮೇಲೆ ರಾಶಿ ಬಿದ್ದಿರುವ ಮಣ್ಣನ್ನು ತೆರವುಗೊಳಿಸಲು ಜೆಸಿಬಿ ಗಳು ಸಮರೋಪಾದಿಯಲ್ಲಿ ಕಾರ್ಯಾಚರಿಸುತ್ತಿವೆ.
ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬಂದಿದ್ದು ಅಡಚಣೆ ತೆರವಿನ ಉಸ್ತುವಾರಿ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು