ಬೆಂಗಳೂರು: ಮಳೆಗೆ ಜನರ ಪರದಾಟ, ಸಂಚಾರ ಅಸ್ತವ್ಯಸ್ತ
Team Udayavani, Oct 15, 2022, 12:09 AM IST
ಬೆಂಗಳೂರು: ನಗರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಶುಕ್ರವಾರವೂ ಮುಂದುವರಿದಿದೆ.
ರಾತ್ರಿ 7 ಗಂಟೆ ಬಳಿಕ ಸತತ ಒಂದು ಗಂಟೆಗಳ ಮಳೆಯಾಗಿದ್ದು, ತಗ್ಗು ಪ್ರದೇಶದ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ಶಿವಾನಂದ ವೃತ್ತ, ಮಲ್ಲೇಶ್ವರ, ಎಂ.ಜಿ. ರಸ್ತೆ, ಡಬಲ್ ರೋಡ್, ಆನಂದ್ರಾವ್ ವೃತ್ತ, ಶೇಷಾದ್ರಿ ರಸ್ತೆ, ಮೆಜೆಸ್ಟಿಕ್, ಚಾಮರಾಜಪೇಟೆ ಸಹಿತ ಹಲವು ಬಡಾವಣೆಗಳಲ್ಲಿ ಮಳೆಯಾಗಿದೆ.
ಏಕಾಏಕಿ ಮಳೆ ಸುರಿದ ಕಾರಣ ಕಚೇರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರು ಪರದಾಡಿದರು. ಜತೆಗೆ ಒಕಳಿಪುರ ಕೆಳಸೇತುವೆ, ಶಿವಾನಂದ ವೃತ್ತ, ಕಾವೇರಿ ಜಂಕ್ಷನ್ ಸಹಿತ ಹಲವು ರಸ್ತೆಗಳು, ಕೆಳಸೇತುವೆಗಳಲ್ಲಿ ನೀರು ನಿಂತು ತೊಂದರೆ ಉಂಟಾಯಿತು.ಹೆಬ್ಬಾಳ ಎನ್ಇಟಿ ಬಸ್ ನಿಲ್ದಾಣ, ಸಂಜಯನಗರ ಬಳಿ ಮರ ಬಿದ್ದಿದ್ದು, ವಾಹನ ಸಂಚಾರಕ್ಕೆ ತಡೆಯುಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ