Bengaluru Rameshwaram Cafe Case: ಜೈಲಲ್ಲಿರುವ ನಾಲ್ವರ ವಿಚಾರಣೆ
Team Udayavani, Mar 9, 2024, 7:00 AM IST
ಬೆಂಗಳೂರು/ಬಳ್ಳಾರಿ: ಬೆಂಗಳೂರಿನ “ರಾಮೇಶ್ವರಂ ಕೆಫೆ’ ಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೂ “ಬಳ್ಳಾರಿ ಮಾಡ್ಯೂಲ್’ಗೂ ಸಾಮ್ಯತೆ ಇರುವುದು ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ತನಿಖೆ ಯಲ್ಲಿ ಬೆಳಕಿಗೆ ಬಂದಿದೆ.
ಎನ್ಐಎ ಅಧಿಕಾರಿ ಗಳು ಕಳೆದ ವರ್ಷ ಡಿ. 18ರಂದು ಬಳ್ಳಾರಿ ಮಾಡ್ಯೂಲ್ (ಬಳ್ಳಾರಿಯನ್ನು ಕೇಂದ್ರವನ್ನಾಗಿಸಿ ಕೊಂಡು ಕೃತ್ಯ) ಪ್ರಕರಣದಲ್ಲಿ ಬಂಧನ ಕ್ಕೊಳಗಾಗಿ, ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಬಳ್ಳಾರಿ ಮೂಲದ ಮಿನಾಜ್ ಅಲಿಯಾಸ್ ಎಂ.ಡಿ. ಸುಲೇಮಾನ್, ಸೈಯದ್ ಸಮೀರ್ ಮತ್ತು ಮಹಾ ರಾಷ್ಟ್ರದ ಮುಂಬಯಿಯಲ್ಲಿ ಅನಾಸ್ ಇಕ್ಬಾಲ್ ಶೇಖ್, ದಿಲ್ಲಿಯಲ್ಲಿ ಶಯಾನ್ ರೆಹಮಾನ್ ಅಲಿಯಾಸ್ ಹುಸೇನ್ನನ್ನು ಎರಡು ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಶಂಕಿತ ಬೆಂಗಳೂರಿನಿಂದ ತುಮಕೂರು ಮಾರ್ಗ ವಾಗಿ ಬಳ್ಳಾರಿಗೆ ತೆರಳಿ ಕೆಲವು ತಾಸು ಉಳಿದುಕೊಂಡಿದ್ದ ಎಂಬುದು ಪತ್ತೆಯಾಗಿದೆ. ಶಂಕಿತರು ಬಳಸಿದ್ದ ರಾಸಾಯನಿಕ ವಸ್ತುಗಳನ್ನೇ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಶಂಕಿತ ಬಳಸಿದ್ದಾನೆ.
ಬಂಧಿತರು ಬಳ್ಳಾರಿ, ಬೆಂಗಳೂರಿ ನಲ್ಲಿ ವಿದ್ಯಾರ್ಥಿಗಳನ್ನು ಸಂಘಟನೆ ಮಾಡುತ್ತಿರುವುದು ಪತ್ತೆಯಾಗಿದೆ. ಜತೆಗೆ ಬ್ಯಾಡರಹಳ್ಳಿಯಲ್ಲಿ ಬಂಧನಕ್ಕೆ ಒಳಗಾದ ಮೂವರು ಶಂಕಿತರು ಕೆಲವು ಯುವಕರನ್ನು ಪ್ರಚೋದಿಸಿ ಸಂಘಟನೆ ಬಗ್ಗೆ ಒಲವು ಬರುವಂತೆ ಮಾಡಿರುವುದು ಪತ್ತೆಯಾಗಿತ್ತು.
ಐಸಿಸ್ ನಂಟಿನ ತನಿಖೆ
ಐಸಿಸ್ ಸಂಪರ್ಕ ಹೊಂದಿದ್ದ ಸುಲೇಮಾನ್ “ಬಳ್ಳಾರಿ ಮಾಡ್ಯೂಲ್’ ಹೆಸರಿನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದ. ಬಳ್ಳಾರಿಯ ಫರ್ಟಿಲೈಸರ್ ಮಳಿಗೆಯಲ್ಲಿ ಅಮೋನಿಯಂ ನೈಟ್ರೇಟ್ ಖರೀದಿಸಿದ್ದ. ಹೀಗಾಗಿ ಸುಲೇಮಾನ್ ಹಾಗೂ ಸಮೀರ್ ಇಬ್ಬರನ್ನೂ ಈಗ ಎನ್ಐಎ ಅಧಿಕಾರಿಗಳು ಪುನಃ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ