Bengaluru blast ಶಂಕಿತ ಉಗ್ರ ಬಟ್ಟೆ ಬದಲಿಸಿ ಬಸ್ಸಿನಲ್ಲಿ ಪ್ರಯಾಣಿಸಿದ್ದ: ಗೃಹ ಸಚಿವ
Team Udayavani, Mar 7, 2024, 5:32 PM IST
ಬೆಂಗಳೂರು: ‘ದಿ ರಾಮೇಶ್ವರಂ ಕೆಫೆ’ಯಲ್ಲಿ ಕಳೆದ ವಾರ ನಡೆದ ಸ್ಫೋಟದ ಪ್ರಮುಖ ಶಂಕಿತ ಉಗ್ರ ಘಟನೆಯ ನಂತರ ತನ್ನ ಬಟ್ಟೆಗಳನ್ನು ಬದಲಾಯಿಸಿಕೊಂಡು ಬಸ್ನಲ್ಲಿ ಪ್ರಯಾಣಿಸಿದ್ದು, ಹಲವು ಸುಳಿವುಗಳು ದೊರೆತಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗುರುವಾರ ಹೇಳಿದ್ದಾರೆ.
ಸ್ಫೋಟದ ನಂತರ ಶಂಕಿತ ಬಸ್ನಲ್ಲಿ ತುಮಕೂರು ಕಡೆಗೆ ಪ್ರಯಾಣಿಸಿದ್ದಾನೆ ಎಂದು ಹೇಳಲಾಗಿದ್ದು, ಅಧಿಕಾರಿಗಳು ಮೂಲಗಳನ್ನು ಅನುಸರಿಸಿ ಬಳ್ಳಾರಿಯವರೆಗೆ ಆತನ ಚಲನವಲನವನ್ನು ಪರಿಶೀಲಿಸುತ್ತಿದ್ದಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.
“ಶಂಕಿತ ಯಾವ ದಿಕ್ಕಿನಲ್ಲಿ ಹೋಗಿದ್ದಾನೆ, ತನ್ನ ಬಟ್ಟೆಗಳನ್ನು ಎಲ್ಲಿ ಬದಲಾಯಿಸಿದ್ದಾನೆ ಎಂಬುದು ನಮಗೆ ಹೆಚ್ಚು ಪ್ರಮುಖವಾದ ಸುಳಿವುಗಳಾಗಿವೆ. ಕೆಲವು ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ. ಕಳೆದೆರಡು ದಿನಗಳಲ್ಲಿ ನಮಗೆ ಉತ್ತಮ ಮುನ್ನಡೆ ಸಿಕ್ಕಿದ್ದು, ಆದಷ್ಟು ಬೇಗ ಆತನನ್ನು ಬಂಧಿಸಲಾಗುವುದು ಎಂದು ನಾನು ಭಾವಿಸುತ್ತೇನೆ ಎಂದು ಪರಮೇಶ್ವರ್ ಹೇಳಿದರು.
“ಬಸ್ನಲ್ಲಿ ಪ್ರಯಾಣಿಸಿದ್ದಾನೆ ಎಂದು ತಿಳಿದುಬಂದಿದ್ದು, ಆ ಆಧಾರದ ಮೇಲೆ ಅಧಿಕಾರಿಗಳು ಅನುಸರಿಸುತ್ತಿದ್ದಾರೆ. ಅವರಿಗೆ ಪ್ರಮುಖ ಸುಳಿವು ಸಿಕ್ಕಿದೆ. ಅಧಿಕಾರಿಗಳು ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ, ಅವರಿಗೆ ಕೆಲವು ಸುಳಿವುಗಳು ಸಿಕ್ಕಿವೆ. ಇಲ್ಲಿಂದ ಬಳ್ಳಾರಿವರೆಗೆ ಪರಿಶೀಲನೆ ನಡೆಸುತ್ತಿದ್ದಾರೆ” ಎಂದರು.
ಇದನ್ನೂ ಓದಿ: Rameshwaram Cafe Case; ಶಂಕಿತ ಉಗ್ರನ ಮಾಹಿತಿ ಪಡೆಯಲು ಎನ್ಐಎ ತಂಡ ಬಳ್ಳಾರಿಗೆ
ಶಂಕಿತ ಉಗ್ರ ವ್ಯಕ್ತಿ ಬೆನ್ನಿನಲ್ಲಿ ಬ್ಯಾಗ್ ಹಿಡಿದುಕೊಂಡು ಪೂರ್ಣ ತೋಳಿನ ಅಂಗಿ, ಕ್ಯಾಪ್, ಫೇಸ್ಮಾಸ್ಕ್ ಮತ್ತು ಕನ್ನಡಕವನ್ನು ಧರಿಸಿ ಬಸ್ನಲ್ಲಿ ಚಲಿಸುತ್ತಿರುವ ಹೊಸ ವಿಡಿಯೋ ದೃಶ್ಯಾವಳಿಗಳು ಹೊರಬಿದ್ದಿವೆ. ಬಸ್ಸಿನಲ್ಲಿದ್ದ ಕೆಮರಾವನ್ನು ಗಮನಿಸಿದ ಶಂಕಿತ ಅದು ತನ್ನನ್ನು ಆವರಿಸದ ದಿಕ್ಕಿಗೆ ತೆರಳಿದ್ದಾನೆ ಎಂದು ವಿಡಿಯೋ ತುಣುಕಿನಲ್ಲಿ ಕಂಡು ಬಂದಿದೆ.
ಶಂಕಿತ ಟಿ-ಶರ್ಟ್ ಧರಿಸಿ, ಫೇಸ್ ಮಾಸ್ಕ್, ಕ್ಯಾಪ್ ಮತ್ತು ಕನ್ನಡಕ ಇಲ್ಲದೆ, ಬಸ್ನೊಳಗೆ ಕುಳಿತಿರುವ ದೃಢೀಕರಿಸದ ಛಾಯಾಚಿತ್ರವೂ ಹರಿದಾಡುತ್ತಿದೆ.
ಪೂರ್ವ ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಕಾರಿಡಾರ್ನಲ್ಲಿರುವ ಬ್ರೂಕ್ಫೀಲ್ಡ್ ಪ್ರದೇಶದ ದಿ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ ಒಂದರಂದು ಸುಧಾರಿತ ಸ್ಫೋಟಕ ಸಾಧನದಿಂದ(IED) ನಡೆಸಿದ ಸ್ಫೋಟದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ನಡೆಸುತ್ತಿದ್ದು, ಬೆಂಗಳೂರು ಪೊಲೀಸ್ ಕೇಂದ್ರ ಅಪರಾಧ ವಿಭಾಗ ಸಂಪೂರ್ಣ ಸಹಕಾರ ನೀಡುತ್ತಿದೆ. ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನವನ್ನು ಎನ್ಐಎ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ