
ಇಂದು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ಉದ್ಘಾಟನೆ
Team Udayavani, Sep 15, 2022, 6:20 AM IST

ಬೆಂಗಳೂರು: ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸುತ್ತಿರುವ ರಾಜ್ಯದ ಮೊದಲ ಸ್ವಾಯತ್ತ ಸಂಸ್ಥೆಯಾಗಿರುವ ‘ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ’ (ಯುವಿಸಿಇ)ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಸಂಜೆ 5 ಗಂಟೆಗೆ ಉದ್ಘಾಟಿಸಲಿದ್ದಾರೆ.
ಇದೇ ವೇಳೆ ಸರ್ಎಂ.ವಿಶ್ವೇಶ್ವರಯ್ಯ ಅವರ 162ನೇ ಜನ್ಮದಿನದ ಅಂಗವಾಗಿ ‘ಎಂಜಿನಿಯರುಗಳ ದಿನಾಚರಣೆ’ಯನ್ನೂ ಆಚರಿಸಲಾಗುತ್ತದೆ.
105 ವರ್ಷಗಳ ಇತಿಹಾಸ: 105 ವರ್ಷಗಳಷ್ಟು ಹಳೆಯದಾದ ಯುವಿಸಿಇ ಕಾಲೇಜನ್ನು ಇತ್ತೀಚೆಗೆ 10 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾಗಿದೆ. ಸದ್ಯ ವಿವಿಧ ಆರು ಎಂಜಿನಿಯರಿಂಗ್ ವಿಭಾಗಗಳಲ್ಲಿ 3,300 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಎನ್ಇಪಿ ಚೌಕಟ್ಟಿಗೆ ಅನುಗುಣವಾಗಿ ಯುವಿಸಿಇಗೆ ಸ್ವಾಯತ್ತ ವಿವಿ ಸ್ಥಾನಮಾನ ಕೊಡಲಾಗುತ್ತಿದೆ. ಇದರ ಜತೆ ಉದ್ಯಮಗಳು ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘ ಕೂಡ ಕೈ ಜೋಡಿಸಲಿವೆ. ಇಲ್ಲಿ ಸಹಭಾಗಿತ್ವದ ಮೂಲಕ ಸಂಶೋಧನಾ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ.
ನಗರದ ಕೆ.ಆರ್. ವೃತ್ತದಲ್ಲಿರುವ ಯುವಿಸಿಇ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಾಖಲೆ ಸಮೇತ ದೂರು ನೀಡಿದರೆ ದೂರುದಾರಿಗೂ ರಕ್ಷಣೆ : ಲೋಕಾಯುಕ್ತ ಪಾಟೀಲ್

ಮಣಿಪಾಲ: ಶಿವಪಾಡಿಯಲ್ಲಿ”ಅತಿರುದ್ರ ಮಹಾಯಾಗ ಸಂಕಲ್ಪ ದಿವಸ್”ಪೂರ್ವ ಸಿದ್ಧತೆ ಸಭೆ

ಬಲಿಜ ಸಮುದಾಯಕ್ಕೆ ಕೂಡಲೇ ಪೂರ್ಣ ಪ್ರಮಾಣದ 2ಎ ಮೀಸಲಾತಿ ಸೌಲಭ್ಯ ಕಲ್ಪಿಸಿ : ಮಾಜಿ ಸಚಿವ ಎಂ.ಆರ್. ಸೀತಾರಾಂ

ಬಿಎಸ್ ವೈ ಮಾರ್ಗದರ್ಶನ, ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ನಳಿನ್ ಕಟೀಲ್

ಸುಮಲತಾ ಅವರು ಬಿಜೆಪಿ ಸೇರಿದರೆ ಸಂತೋಷ: ಸಿ.ಟಿ ರವಿ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
