ಭಾರಿ ಮಳೆಗೆ ವಿದ್ಯುತ್ ವ್ಯತ್ಯಯ : ಖುದ್ದು ನಿರ್ವಹಣೆಗಿಳಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ


Team Udayavani, May 18, 2022, 6:28 PM IST

ಭಾರೀ ಮಳೆಗೆ ವಿದ್ಯುತ್ ವ್ಯತ್ಯಯ : ಖುದ್ದು ನಿರ್ವಹಣೆಗಿಳಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ

ಬೆಂಗಳೂರು : ನಗರದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ, ಕೆಲವಡೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಆಗಿದ್ದು, ನಿನ್ನೆ ರಾತ್ರಿಯಿಂದಲೇ ವಿದ್ಯುತ್ ಪೂರೈಕೆ ಸರಿಪಡಿಸಲು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪಿ. ರಾಜೇಂದ್ರ ಚೋಳನ್ ಖುದ್ದು ಕಾರ್ಯಚರಣೆಗಿಳಿದರು.

ಮಂಗಳವಾರ ರಾತ್ರಿ ಬೆಸ್ಕಾಂನ ಎಲ್ಲ ಮುಖ್ಯ ಇಂಜಿನಿಯರ್, ಅಧೀಕ್ಷಕ ಇಂಜಿನಿಯರ್, ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗಳಿಗೆ ಪರಿಸ್ಥಿತಿ ನಿಭಾಯಿಸಲು ಸೂಚನೆ ನೀಡಿದ ಅವರು ವಿದ್ಯುತ್ ವ್ಯತ್ಯಯದ ಕುರಿತು ಮೇಲ್ವಿಚರಣೆ ಮತ್ತುಕಾಮಗಾರಿ ಮೇಲೆ ನಿಗಾವಹಿಸಿದರು. ಬೆಸ್ಕಾಂ ಎಂಡಿ ಖುದ್ದು ನಿರ್ವಹಣೆಯಿಂದಾಗಿ ಮಂಗಳವಾರ ರಾತ್ರಿಯೇ ವಿದ್ಯುತ್ ವ್ಯತ್ಯಯವನ್ನು ಕೆಲವಡೆ ಸರಿಪಡಿಸಲು ಕ್ರಮ ಕೈಗೊಳ್ಳಲಾಗಿತ್ತು.

ಅದರ ಮುಂದುವರಿದ ಭಾಗವಾಗಿ, ರಾಜೇಂದ್ರ ಚೋಳನ್ ಅವರು ಕೆಂಗೇರಿ, ರಾಜರಾಜೇಶ್ವರಿ ನಗರ, ಕೋರಮಂಗಲ, ಹೆಚ್. ಎಸ್. ಆರ್ ಬಡಾವಣೆ ಮತ್ತು ಇಂದಿರಾನಗರ ಬೆಸ್ಕಾಂ ವಲಯಗಳಿಗೆ ಬುಧವಾರ ಖುದ್ದು ಭೇಟಿ ನೀಡಿ ವಿದ್ಯುತ್ ಪೂರೈಕೆ ಸರಿಪಡಿಸುವ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಇದೇ ಸಂದರ್ಭದಲ್ಲಿ ಅವರು ಸಾರ್ವಜನಿಕರ ಜತೆ ಮಾತುಕತೆ ನಡೆಸಿದರು. ಭಾರೀ ಮಳೆ ಇದ್ದರೂ ವಿದ್ಯುತ್ ಪೂರೈಕೆ ಯಲ್ಲಿ ವ್ಯತ್ಯಯ ಆಗದ ರೀತಿ ಕ್ರಮ ವಹಿಸಿದ ಬೆಸ್ಕಾಂ ಕಾರ್ಯಕ್ಕೆ ಸಾರ್ವಜನಿಕರು ಇದೇ ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯುತ್ ಪೂರೈಕೆಯಲ್ಲಾಗಿರುವ ಅಡಚಣೆ ಮತ್ತು ಅದನ್ನು ಸರಿಪಡಿಸಲು ಬೆಸ್ಕಾಂ ಸಿಬ್ಬಂದಿ ವಹಿಸಿರುವ ಕ್ರಮಗಳ ಕುರಿತು, ಬೆಸ್ಕಾಂ ಎಂಡಿ ಮೇಲ್ವಿಚಾರಣೆ ಮಾಡಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ರಾಜರಾಜೇಶ್ವರಿ ನಗರದ ಕೆಂಚನಹಳ್ಳಿ ಸಮೀಪದ ಅಪಾರ್ಟ್ ಮೆಂಟ್ ಒಂದರ ನಿವಾಸಿಗಳ ಜತೆ ಬೆಸ್ಕಾಂ ಎಂಡಿ ಮಾತುಕತೆ ನಡೆಸಿದರು. ಭಾರೀ ಮಳೆಯಿಂದಾಗಿ ಅಪಾರ್ಟ್ ಮೆಂಟ್ ಜಲಾವೃತವಾಗಿತ್ತು. ಕೆಂಚನಹಳ್ಳಿಯಲ್ಲಿ ವಿದ್ಯುತ್ ವ್ಯತ್ಯಯ ಸರಿಪಡಿಸುವ ಕಾಮಗಾರಿಯ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಚಿಕ್ಕಮಗಳೂರಿನ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಿಎಂ ಬೊಮ್ಮಾಯಿ

ಮಳೆಯಿಂದಾದ ನಿಕರ ಹಾನಿ ಮತ್ತು ವಿದ್ಯುತ್ ವ್ಯತ್ಯಯ ಕುರಿತು ಬೆಸ್ಕಾಂ ಎಂಡಿ ಬೆಸ್ಕಾಂ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಜೊತೆಗೆ ವಿದ್ಯುತ್ ವ್ಯತ್ಯಯನ್ನು ಸರಿಪಡಿಸಿ, ವಿದ್ಯುತ್ ಪೂರೈಕೆಯನ್ನು ಪುನರ್ ಸ್ಥಾಪಿಸಿರುವ ಪ್ರದೇಶಗಳ ಮಾಹಿತಿ ಪಡೆದರು. ಮಳೆಯ ನಡುವೆಯೇ, ಬೆಸ್ಕಾಂ ಸಿಬ್ಬಂದಿ ಮಂಗಳವಾರ ರಾತ್ರಿ ಇಡೀ ಕಾರ್ಯಚರಣೆ ನಡೆಸಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಂಡಿರುವ ಬೆಸ್ಕಾಂ ಲೈನ್ ಮನ್ ಗಳ ಕಾರ್ಯವನ್ನು ರಾಜೇಂದ್ರ ಚೋಳನ್ ಶ್ಲಾಘಿಸಿದರು.

ಈ ಸಂದರ್ಭ ದಲ್ಲಿ ಲೈನ್ ಮೆನ್ ಸಿಬ್ಬಂದಿ ಜತೆಗೆ ಮಾತುಕತೆ ನಡೆಸಿದ ಅವರು ಸುರಕ್ಷತಾ ಕ್ರಮಗಳನ್ನು ಬಳಸಿಕೊಂಡು ಸೇವೆಯಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.

ಭಾರೀ ಮಳೆಗೆ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಿದ್ದು, ನಿನ್ನೆ ರಾತ್ರಿ ನೇ ಕೆಲವಡೆ ಸಂಪರ್ಕ ಮರು ಸ್ಥಾಪಿಸಲಾಗಿದ್ದು, ಕೆಲವು ಪ್ರದೇಶಗಳಲ್ಲಿ ಇಂದು ಬೆಳಗ್ಗೆ ವಿದ್ಯುತ್ ಸಂಪರ್ಕ ಸರಿಪಡಿಸಲಾಗಿದೆ.

ವಿದ್ಯುತ್ ವ್ಯತ್ಯಯ ವಿವರ: ಭಾರೀ ಮಳೆ ಹಿನ್ನೆಲೆಯಲ್ಲಿ ಬೆಸ್ಕಾಂ ಸಹಾಯವಾಣಿ 1912 ಗೆ ಮಂಗಳವಾರ ರಾತ್ರಿ 13734 ಕರೆಗಳು ಬಂದಿದ್ದು, ಈ ಪೈಕಿ 13165 ಕರೆಗಳು ಪವರ್ ಕಟ್ ಗೆ ಸಂಬಂಧಿಸಿದೆ. ಬೆಂಗಳೂರು ನಗರ ಜಿಲ್ಲೆಯ ಬೆಸ್ಕಾಂ ವಿಭಾಗದಲ್ಲಿ ಒಟ್ಟು 107 ಫೀಡರ್ ಗಳು ತೊಂದರೆಗೊಳಗಾಗಿದ್ದು. ಮಲ್ಲೇಶ್ವರಂ- 12, ಹೆಬ್ಬಾಳ- 13, ಕೆಂಗೇರಿ-7, ರಾಜಾಜಿನಗರ-4, ಪೀಣ್ಯ-4, ರಾಜರಾಜೇಶ್ವರಿನಗರ-1, ಹೆಚ್ ಎಸ್ ಆರ್ ಬಡಾವಣೆ -20, ಇಂದಿರಾನಗರ – 4, ಜಾಲಹಳ್ಳಿ 9, ಜಯನಗರ 12, ಕೋರಮಂಗಲ 8, ಶಿವಾಜಿನಗರ 8, ವಿಧಾನಸೌಧ- 2 ಮತ್ತು ವೈಟ್ ಫಿಲ್ಡ್ ನಲ್ಲಿ 3 ಫೀಡರ್ ಗಳು ಮಳೆ, ಗುಡುಗು-ಸಿಡಿಲು ಗೆ ಟ್ರಿಪ್ ಆಗಿತ್ತು.
ಬೆಸ್ಕಾಂ ಸಿಬ್ಬಂದಿ ಬುಧವಾರ ಬೆಳಗ್ಗೆ ವೇಳೆಗೆ ಎಲ್ಲ ಫೀಡರ್ ಗಳನ್ನು ದುರಸ್ಥಿ ಮಾಡಿ ವಿದ್ಯುತ್ ಪೂರೈಕೆ ವ್ಯವಸ್ಥೆಯನ್ನು ಸರಿಪಡಿಸಿದ್ದಾರೆ ಎಂದು ಬೆಸ್ಕಾಂ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.