ಸಿಎಂ ಆಪ್ತ ಭೈರತಿ 102 ಕೊಲೆ ಮಾಡಿಸಿದ್ದಾರೆ!; ನಂದೀಶ್ ಆರೋಪ
Team Udayavani, Feb 7, 2018, 11:56 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಶಾಸಕ ಭೈರತಿ ಬಸವರಾಜ್ ಅವರು ಕೆ.ಆರ್.ಪುರಂ ಕ್ಷೇತ್ರದಲ್ಲಿ 102 ಕೊಲೆ ಮಾಡಿಸಿದ್ದಾರೆ ಎಂದು ಮಾಜಿ ಬಿಜೆಪಿ ಶಾಸಕ ನಂದೀಶ್ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.
ಆರ್ಟಿಐ ದಾಖಲೆಗಳೊಂದಿಗೆ ಆರೋಪ ಮಾಡಿರುವ ರೆಡ್ಡಿ ಕೆಲ ದಾಖಲೆಗಳನ್ನೂ ಬಿಡುಗಡೆ ಮಾಡಿದರು.
‘ಕೃಷ್ಣರಾಜಪುರ ಕ್ಷೇತ್ರದಲ್ಲಿ ಕಳೆದ ನಾಲ್ಕು ಮುಕ್ಕಾಲು ವರ್ಷಗಳಲ್ಲಿ 102 ಕೊಲೆಗಳಾಗಿರುವುದು ಆರ್ಟಿಐ ದಾಖಲೆಗಳಿಂದ ತಿಳಿದು ಬಂದಿದೆ. ಕೊಲೆಗಳಲ್ಲಿ ಶಾಸಕರ ಬೆಂಬಲಿಗರ ಕೈವಾಡ ಇದೆ. ಕಾನೂನು ಸುವ್ಯವಸ್ಥೆ ಸರಿ ಇದೆ ಎಂದು ಸಿಎಂ ಹೇಳುತ್ತಿದ್ದಾರೆ. 102 ಮರ್ಡರ್ ಆಗಿವೆ ಇದಕ್ಕೆ ನಿಮ್ಮ ಉತ್ತರವೇನು’ ಎಂದು ಪ್ರಶ್ನಿಸಿದರು.
’58 ಅತ್ಯಾಚಾರ ಪ್ರಕರರಗಳು ಕ್ಷೇತ್ರ ವ್ಯಾಪ್ತಿಯಲ್ಲಿ ದಾಖಲಾಗಿದ್ದು 158 ಸರಗಳ್ಳತನ ಪ್ರಕರಣಗಳು ದಾಖಲಾಗಿವೆ. ಕಾನೂನು ಸುವ್ಯವಸ್ಥೆಯನ್ನು ಶಾಸಕ ಭೈರತಿ ಬಸವರಾಜ್ ಅವರು ಸಂಪೂರ್ಣವಾಗಿ ಹದಗೆಡಿಸಿದ್ದಾರೆ’ ಎಂದು ಆರೋಪಿಸಿದರು.
‘ಪ್ರಧಾನ ಮಂತ್ರಿಗಳು 10 % ಸರ್ಕಾರ ಎಂದು ಆರೋಪಿಸಿರುವುದು ಇಲ್ಲಿ ಅನ್ವಯವಾಗುತ್ತದೆ. 1300 ಕೋ ಅನುದಾನ ಬಿಡುಗಡೆ ಮಾಡಿದ್ದಾರೆ ಎನ್ನುತ್ತಾರೆ, ಇದರಲ್ಲಿ ಕೋಟ್ಯಂತರ ರೂಪಾಯಿ ಕಮಿಷನ್ ಪಡೆದಿದ್ದಾರೆ’ ಎಂದು ಆರೋಪಿಸಿದರು.
ಎಫ್ಐಆರ್ ದಾಖಲಾಗಿದೆಯಾ?
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಭೈರತಿ ಬಸವರಾಜ್ ‘ನನ್ನ ಮೇಲೆ ಯಾವುದಾದರೂ ಎಫ್ಐಆರ್ ದಾಖಲಾಗಿದೆಯಾ ? ರಾಜಕೀಯ ಉದ್ದೇಶಕ್ಕೆ ವಿನಾ ಕಾರಣ ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿದ್ದಾರೆ. ಕ್ಷೇತ್ರದ ಜನರು ತೀರ್ಮಾನ ಮಾಡುತ್ತಾರೆ’ ಎಂದರು.
‘ನಾನು ಭ್ರಷ್ಟಾಚಾರ ಮಾಡಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಸಾಬೀತು ಮಾಡಲು ಸಾಧ್ಯವಾಗದಿದ್ದರೆ ಅವರು ರಾಜಕೀಯ ನಿವೃತ್ತಿ ಪಡೆಯುತ್ತಾರೆಯೇ’ ಎಂದು ಸವಾಲು ಎಸೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ