ಶ್ರಾವಣದ ಕೊನೆಯ ವಾರದಲ್ಲಿ ರಾಜ್ಯದಿಂದ ಕಾಶಿಗೆ ಭಾರತ್‌ ಗೌರವ್‌ ರೈಲು: ಸಚಿವೆ ಜೊಲ್ಲೆ

ರಿಯಾಯಿತಿ ದರದಲ್ಲಿ 7 ದಿನಗಳ ಪುಣ್ಯಕ್ಷೇತ್ರಗಳ ಪ್ರವಾಸ ಕಾರ್ಯಕ್ರಮ

Team Udayavani, Jul 11, 2022, 4:40 PM IST

1-dddad

ಬೆಂಗಳೂರು: ಶ್ರಾವಣ ಮಾಸದ ಕೊನೆಯ ವಾರದಲ್ಲಿ ರಾಜ್ಯದಿಂದ ಕಾಶಿ ಯಾತ್ರೆಗೆ ಭಾರತ್‌ ಗೌರವ್‌ ರೈಲು ಯೋಜನೆ ಪ್ರಾರಂಭವಾಗಲಿದೆ ಎಂದು  ಮಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದರು.

ಸೋಮವಾರ ಬೆಂಗಳೂರಿನ ಬೈಯ್ಯಪ್ಪನಹಳ್ಳಿಯಲ್ಲಿರುವ ಸರ್‌ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿ ಕಾಶಿ ಯಾತ್ರೆಗೆ ಕಾಯ್ದಿರಿಸಲಾಗಿರುವ ರೈಲಿನ ಪರಿಶಿಲನೆ ಹಾಗೂ ರೈಲ್ವೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಜೀವನದಲ್ಲಿ ಒಮ್ಮೆಯಾದರೂ ಕಾಶಿ ಯಾತ್ರೆಯನ್ನು ಕೈಗೊಳ್ಳಬೇಕು ಎನ್ನುವುದು ಬಹುಪಾಲು ಹಿಂದೂಗಳ ಆಸೆಯಾಗಿರುತ್ತದೆ. ಇದರನ್ನು ಪೂರೈಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎನ್ನುವುದು ನನ್ನ ಆಶಯವಾಗಿತ್ತು. ಇದಕ್ಕೆ ಬೆನ್ನೆಲುಬಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿಂತು ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ. ಕಾಶಿಯಾತ್ರೆಗೆ ಯಾತ್ರಾರ್ಥಿಗಳನ್ನು ಕೊಂಡೊಯ್ಯುವ ಭಾರತ್‌ ಗೌರವ್‌ ರೈಲನ್ನು ಸಿದ್ದಪಡಿಸಲು ಅನುಮತಿ ನೀಡಿದ್ದು, ಶ್ರಾವಣ ಮಾಸದ ಕೊನೆಯ ವಾರದಲ್ಲಿ ಯಾತ್ರೆ ಪ್ರಾರಂಭವಾಗಲಿದೆ ಎಂದರು.

ಈ ಮೂಲಕ ಭಾರತ್‌ ಗೌರವ್‌ ರೈಲು ಸೇವೆಯನ್ನು ಒದಗಿಸುತ್ತಿರುವ ದೇಶದ ಮೊದಲ ರಾಜ್ಯ ಹಾಗೂ ಇಲಾಖೆ ಎನ್ನುವ ಹೆಗ್ಗಳಿಕೆ ನಾವು ಪಾತ್ರರಾಗಲಿದ್ದೇವೆ. ಪುಣ್ಯ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ರವಾಸ ಕೈಗೊಳ್ಳಲು ಅನುಕೂಲವಾಗುವಂತೆ ಪ್ಯಾಕೇಜುಗಳನ್ನು ರೂಪಿಸುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಭಾರತ್‌ ಗೌರವ್‌ ರೈಲು ಯೋಜನೆಯ ಅಡಿಯಲ್ಲಿ ರಾಜ್ಯ ಮುಜರಾಯಿ ಇಲಾಖೆಯ ವತಿಯಿಂದ ರೈಲನ್ನು ಬಾಡಿಗೆಗೆ ಪಡೆದು ಕಾಶಿಗೆ ಓಡಿಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ರೈಲನ್ನು ಮಾರ್ಪಾಡಿಸುವ ಹಾಗೂ ಇನ್ನಿತರೆ ಅಗ್ಯ ಕ್ರಮಗಳ ಬಗ್ಗೆ ವಿಸ್ತ್ರುತವಾಗಿ ರೈಲ್ವೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇವೆ. ರಿಯಾಯಿತಿ ದರದಲ್ಲಿ 7 ದಿನಗಳ ಪ್ರವಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದಕ್ಕಾಗಿ ಈಗಾಗಲೇ 1 ಕೋಟಿ ರೂಪಾಯಿಗಳ ಭೌತಿಕ ಬ್ಯಾಂಕ್‌ ಗ್ಯಾರಂಟಿಯನ್ನು ನೀಡಿ ರೈಲನ್ನು ಬಾಡಿಗೆಗೆ ತಗೆದುಕೊಳ್ಳಲಾಗಿದೆ ಎಂದು ಹೇಳಿದರು.

ರೈಲಿನ ವಿನ್ಯಾಸದ ಬಗ್ಗೆ
ಬೆಂಗಳೂರು-ವಾರಣಾಸಿ-ಅಯೋಧ್ಯೆ-ಪ್ರಯಾಗರಾಜ್‌-ಬೆಂಗಳೂರು ಮಾರ್ಗದಲ್ಲಿ ರೈಲು 7 ದಿನಗಳಲಿ 4161 ಕಿಲೋಮೀಟರ್‌ಗಳಷ್ಟು ದಾರಿ ಕ್ರಮಿಸಲಿದೆ. 14 ಬೋಗಿಗಳನ್ನು ಈ ರೈಲು ಒಳಗೊಂಡಿರಲಿದ್ದು, 11 ಬೋಗಿಗಳನ್ನು ಪ್ರಯಾಣಿಕರ ಪ್ರವಾಸಕ್ಕೆ ಅಣಿ ಮಾಡಲಾಗುತ್ತಿದೆ. 3 ಟಯರ್‌ ಎಸಿಯ ವ್ಯವಸ್ಥೆ ಇರಲಿದೆ. ಒಂದು ಬೋಗಿಯನ್ನು ದೇವಸ್ಥಾನವಾಗಿ ಪರಿವರ್ತಿಸಿ ಯಾತ್ರಾರ್ಥಿಗಳ ಭಜನೆಗೆ ಅವಕಾಶ ನೀಡಲಾಗುವುದು. ಅಲ್ಲದೇ, ನಮ್ಮ ರಾಜ್ಯದ ಪ್ರಮುಖ ದೇವಸ್ಥಾನಗಳ ಬ್ರಾಂಡಿಂಗ್‌ ಮಾಡುವ ಉದ್ದೇಶದಿಂದ 11 ಬೋಗಿಗಳ ಮೇಲೆ ರಾಜ್ಯದ ಪ್ರಮುಖ 11 ದೇವಸ್ಥಾನಗಳ ಮಾಹಿತಿಯನ್ನು ಅಳವಡಿಸಲಾಗುವುದು. ಆಹಾರ, ನೀರು, ವಸತಿ, ಸ್ಥಳೀಯ ಸಾರಿಗೆ ಮತ್ತು ಇತರೆ ಮೂಲಭೂತ ಸೌಕರ್ಯಗಳಿಗೆ ರೈಲ್ವೇಯ ಅಧೀನ ಸಂಸ್ಥೆಯ ಜೊತೆ ಐಆರ್‌ಸಿಟಿಸಿ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುವುದು. 7 ದಿನಗಳ ಪ್ರವಾಸಕ್ಕೆ ಅಂದಾಜು 15 ಸಾವಿರ ರೂಪಾಯಿ ವೆಚ್ಚವಾಗಲಿದ್ದು, ಇದರಲ್ಲಿ 5 ಸಾವಿರ ರೂಗಳನ್ನು ಸಹಾಯಧನವನ್ನಾಗಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಈ ಸಂಧರ್ಭದಲ್ಲಿ ಮುಜರಾಯಿ ಇಲಾಖೆಯ ಆಯುಕ್ತರಾದ ಶ್ರೀಮತಿ ರೋಹಿಣಿ ಸಿಂಧೂರಿ, ಸೌತ್‌ ವೆಸ್ಟರ್ನ್‌ ರೈಲ್ವೇಯ ಚೀಪ್‌ ಕಮರ್ಷಿಯಲ್‌ ಮ್ಯಾನೇಜರ್‌ ಡಾ ಅನೂಪ್‌ ದಯಾನಂದ್‌ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.