ಮತ್ತೊಂದು ಜನ್ಮ ಇದ್ದರೆ ಪೊಲೀಸ್‌ ಇಲಾಖೆಯಲ್ಲಿಯೇ ಸೇವೆ

ಸ್ವಯಂ ನಿವೃತ್ತಿ ಘೋಷಿಸಿದ ಭಾಸ್ಕರ್‌ರಾವ್‌; ರಾಜ್ಯ ಪೊಲೀಸ್‌ ಇಲಾಖೆಯಲ್ಲಿನ ಸೇವೆ ಅತ್ಯಂತ ತೃಪ್ತಿ ತಂದಿದೆ

Team Udayavani, Sep 17, 2021, 3:16 PM IST

ಮತ್ತೊಂದು ಜನ್ಮ ಇದ್ದರೆ ಪೊಲೀಸ್‌ ಇಲಾಖೆಯಲ್ಲಿಯೇ ಸೇವೆ

ಬೆಂಗಳೂರು: ರೈಲ್ವೆ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತರಾಗಿರುವ ಹಿರಿಯ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಅವರು ತಮ್ಮ ಹುದ್ದೆಗೆ ಸ್ವಯಂ ನಿವೃತ್ತಿ ಘೋಷಿಸಿದ್ದಾರೆ. ಈ ಅಚ್ಚರಿ ನಿರ್ಧಾರ ಕುರಿತು “ಉದಯವಾಣಿ’ ಜತೆಗಿನ ಸಂದರ್ಶನದಲ್ಲಿ ಮಾತನಾಡಿರುವ ಅವರು ಮತ್ತೊಂದು ಜನ್ಮ ಇದ್ದರೆ ಪೊಲೀಸ್‌ ಇಲಾಖೆಯಲ್ಲಿಯೇ ಸೇವೆ ಸಲ್ಲಿಸಲು ಬಯಸುತ್ತೇನೆ ಎಂದರು.

ದಿಢೀರ್‌ ಸ್ವಯಂ ನಿವೃತ್ತಿಗೆ
ಕಾರಣ ಏನು?
ಏಕಾಏಕಿ ಸ್ವಯಂ ನಿವೃತ್ತಿ ನೀಡಿಲ್ಲ. ಒಂದೆರಡು ವರ್ಷಗಳ ಕೆಲವೊಂದು ಘಟನಾವಳಿಗಳು ಈ ನಿರ್ಧಾರಕ್ಕೆ ಕಾರಣವಾಗಿರಬಹುದು. ಅಲ್ಲದೆ, ಕಳೆದ 8-10 ತಿಂಗಳ ಈ ಬಗ್ಗೆ ನಿರ್ಧರಿಸಿದ್ದೆ.ಇದೀಗ ಸರ್ಕಾರ ಮತ್ತು ಪೊಲೀಸ್‌ ಮಹಾನಿರ್ದೇಶಕರಿಗೆ ವೈಯಕ್ತಿಕ ಕಾರಣಕ್ಕೆ ಸ್ವಯಂ ನಿವೃತ್ತಿ ನೀಡುತ್ತಿದ್ದು, ಅದನ್ನು ಅಂಗೀಕರಿಸುವಂತೆ ಮನವಿ ಮಾಡಿದ್ದೇನೆ.

ಪೊಲೀಸ್‌ ಇಲಾಖೆಯಲ್ಲಿನ ಸೇವೆ
ತೃಪ್ತಿ ತಂದಿದೆಯೇ?
ಮೂರು ದಶಕಗಳ ಕಾಲ ರಾಜ್ಯ ಪೊಲೀಸ್‌ ಇಲಾಖೆಯಲ್ಲಿನ ಸೇವೆ ಅತ್ಯಂತ ತೃಪ್ತಿ ತಂದಿದೆ. ಇದೊಂದು ಅಪ್ರತಿಮ ಇಲಾಖೆ. ಇಂತಹ ಶಿಸ್ತಿನ ಇಲಾಖೆಯಲ್ಲಿ ಸೇವೆ ಸಲ್ಲಿಸುವುದು ನಮ್ಮ ಪುಣ್ಯ. ಮತ್ತೊಂದು ಜನ್ಮ ಎಂಬುದು ಇದ್ದರೆ ಪೊಲೀಸ್‌ ಇಲಾಖೆಯಲ್ಲಿಯೇ ಸೇವೆ ಸಲ್ಲಿಸಲು ಬಯಸುತ್ತೇನೆ. ತಾನು ಸೇವೆ ಸಲ್ಲಿಸಿದ್ದ ಪ್ರತಿಯೊಂದು ವಿಭಾಗದಲ್ಲಿಯೂ ಹೊಸ ಬದಲಾವಣೆ ತಂದಿದ್ದೇವೆ ಎಂಬ ಆತ್ಮ ತೃಪ್ತಿ ನನಗೆ ಇದೆ.

ಭಾಸ್ಕರ್‌ ರಾವ್‌ ಅವರ ರಾಜಕೀಯ
ಪ್ರವೇಶ ಯಾವಾಗ?
ರಾಜಕೀಯ ನಿರ್ಧಾರದ ಬಗ್ಗೆ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆದು, ಮುಂದಿನ ದಿನಗಳಲ್ಲಿ ನೋಡೋಣ. ಯಾವುದೇ ರಾಜಕೀಯ ಪಕ್ಷದ ಮುಖಂಡರ ಜತೆಯೂ ಚರ್ಚಿಸಿಲ್ಲ.

ಭಾಸ್ಕರ್‌ರಾವ್‌ ಅವರ ಮುಂದಿನ ನಡೆ ಏನು?
ಮುಂದಿನ ನಡೆ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪ್ರಪಂಚ ವಿಶಾಲವಾಗಿದೆ. ಗಗನದಷ್ಟು ಅವಕಾಶಗಳಿವೆ. ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿ ಕೊಂಡರೆ ಯಶಸ್ಸು ಸಾಧ್ಯವಿದೆ.

ಬಸವನ ಗುಡಿ ವಿಧಾನಸಭಾ ಕ್ಷೇತ್ರದಿಂದ ಚುನಾವಣೆ ಸ್ಪರ್ಧೆ ನಿಜವೇ? ರಾಜ್ಯಸಭಾ ಅಥವಾ ವಿಧಾನಪರಿಷತ್‌ ಸ್ಥಾನದ ಆಕಾಂಕ್ಷಿ ನಿಜವೇ?

ನಾನು ಪೊಲೀಸ್‌ ಇಲಾಖೆಯಲ್ಲಿ ಕೆಲಸ ಮಾಡುವಾಗ ಬಸವನ ಗುಡಿ ಕ್ಷೇತ್ರಕ್ಕೆ ಸೀಮಿತವಾಗಿ ಮಾಡಿಲ್ಲ. ಕೇವಲ ಬಸವನಗುಡಿ ಕ್ಷೇತ್ರಕ್ಕೆ ಸೇರಿದವನಲ್ಲ. ಇಡೀ ಕರ್ನಾಟಕಕ್ಕೆ ಸೇರಿದವನು. ಅಲ್ಲದೆ, ಯಾವುದೇ ರಾಜಕೀಯ ಮುಖಂಡರನ್ನು ಭೇಟಿಯಾಗಿ ರಾಜ್ಯಸಭಾ ಅಥವಾ ವಿಧಾನಪರಿಷತ್‌ ಸ್ಥಾನ ಕೊಡಿಸುವಂತೆ ಕೇಳಿಲ್ಲ. ಅದಕ್ಕೆ ಸಿದ್ಧತೆ ಕೂಡ ಮಾಡಿ ಕೊಂಡಿಲ್ಲ

-ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.